ಹೊಸಕೋಟೆ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕವು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗು ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳನ್ನು ಪುರಸ್ಕರಿಸಲಿದೆ.
ಅರ್ಹ ವಿದ್ಯಾರ್ಥಿಗಳು ಈ ತಿಂಗಳ 15ರೊಳಗೆ ಮೊಬೈಲ್: 9480502369/ 7760648537 ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ಪರಿಷತ್ತಿನ ಅಧ್ಯಕ್ಷ ಕೆ.ವಿ.ಶ್ರೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎನ್ಎಸ್ಎಸ್ ಶಿಬಿರ: ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳಸಿಕೊಂಡು ಸಮಾಜಕ್ಕೆ ನೆರವಾಗುವಂತೆ ಖಾಜಿಹೊಸಹಳ್ಳಿ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್ ಹೇಳಿದರು. ಹೊಸಕೋಟೆಯ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖಾಜಿಹೊಸಹಳ್ಳಿ ಗ್ರಾಮದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಬಿರಾಧಿಕಾರಿ ಮಾಂತೇಶ್ 7 ದಿನಗಳಲ್ಲಿ ಜನಜಾಗೃತಿ ನಡೆಸಲಾಗುವುದು ಎಂದರು. ಗ್ರಾ.ಪಂ. ಉಪಾಧ್ಯಕ್ಷ ಬಿ.ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರುದ್ರಾರಾಧ್ಯ, ಗ್ರಾ.ಪಂ.ಅಧಿಕಾರಿ ಎನ್.ವೈ.ಶ್ರೆನಿವಾಸಮೂರ್ತಿ,ಉಪನ್ಯಾಸಕರಾದ ರಾಜು, ಬಿ.ವಿ.ರಮೇಶ್ ಇದ್ದರು.