<p>ಬೆಂಗಳೂರು: ಕಾರ್ತಿಕ್ ಎಂಬಾತ ತನ್ನ ಪ್ರೇಯಸಿಯ ಮನೆಯ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಡುಗೊಂಡನಹಳ್ಳಿ ಸಮೀಪದ ಎಚ್ಬಿಆರ್ ಲೇಔಟ್ನಲ್ಲಿ ಗುರುವಾರ ನಡೆದಿದೆ.<br /> <br /> ತಂಬುಚೆಟ್ಟಿಪಾಳ್ಯದ ಕಾರ್ತಿಕ್, ಎಚ್ಬಿಆರ್ ಲೇಔಟ್ ಮೂರನೇ ಹಂತದ ಗೀತಾ (ಹೆಸರು ಬದಲಿಸಿದೆ) ಎಂಬ ಯುವತಿಯನ್ನು ಮೂರು ವರ್ಷಗಳ ಹಿಂದೆ ಫೇಸ್ಬುಕ್ ಮೂಲಕ ಪರಿಚಯಿಸಿಕೊಂಡು ಪ್ರೀತಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈ ವಿಷಯ ತಿಳಿದ ಗೀತಾ ಪೋಷಕರು ಆತನ ವಿರುದ್ಧ ಎರಡು ತಿಂಗಳ ಹಿಂದೆ ದೂರು ದಾಖಲಿಸಿದ್ದರು. ಅಲ್ಲದೇ, ಬೇರೊಬ್ಬ ಯುವಕನ ಜತೆ ಮಗಳ ಮದುವೆ ನಿಶ್ಚಯ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಇದರಿಂದ ಬೇಸರಗೊಂಡಿದ್ದ ಕಾರ್ತಿಕ್, ಮಧ್ಯಾಹ್ನ ಗೀತಾಳ ಮನೆಯ ಬಳಿ ಹೋಗಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಘಟನೆ ಸಂಬಂಧ ಕಾಡುಗೊಂಡನಹಳ್ಳಿ ಪೊಲೀಸರು ಕಾರ್ತಿಕ್ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಾರ್ತಿಕ್ ಎಂಬಾತ ತನ್ನ ಪ್ರೇಯಸಿಯ ಮನೆಯ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಡುಗೊಂಡನಹಳ್ಳಿ ಸಮೀಪದ ಎಚ್ಬಿಆರ್ ಲೇಔಟ್ನಲ್ಲಿ ಗುರುವಾರ ನಡೆದಿದೆ.<br /> <br /> ತಂಬುಚೆಟ್ಟಿಪಾಳ್ಯದ ಕಾರ್ತಿಕ್, ಎಚ್ಬಿಆರ್ ಲೇಔಟ್ ಮೂರನೇ ಹಂತದ ಗೀತಾ (ಹೆಸರು ಬದಲಿಸಿದೆ) ಎಂಬ ಯುವತಿಯನ್ನು ಮೂರು ವರ್ಷಗಳ ಹಿಂದೆ ಫೇಸ್ಬುಕ್ ಮೂಲಕ ಪರಿಚಯಿಸಿಕೊಂಡು ಪ್ರೀತಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈ ವಿಷಯ ತಿಳಿದ ಗೀತಾ ಪೋಷಕರು ಆತನ ವಿರುದ್ಧ ಎರಡು ತಿಂಗಳ ಹಿಂದೆ ದೂರು ದಾಖಲಿಸಿದ್ದರು. ಅಲ್ಲದೇ, ಬೇರೊಬ್ಬ ಯುವಕನ ಜತೆ ಮಗಳ ಮದುವೆ ನಿಶ್ಚಯ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಇದರಿಂದ ಬೇಸರಗೊಂಡಿದ್ದ ಕಾರ್ತಿಕ್, ಮಧ್ಯಾಹ್ನ ಗೀತಾಳ ಮನೆಯ ಬಳಿ ಹೋಗಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಘಟನೆ ಸಂಬಂಧ ಕಾಡುಗೊಂಡನಹಳ್ಳಿ ಪೊಲೀಸರು ಕಾರ್ತಿಕ್ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>