‘ಬೆಂಗಳೂರಿನಲ್ಲಿ ಪ್ರತಿ ದಿನ 3500 ಟನ್, ರಾಜ್ಯದಲ್ಲಿ 1.25 ಲಕ್ಷ ಟನ್ ಘನ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ಈ ಕಸದಲ್ಲಿ ಶೇಕಡಾ 10ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ತುಂಬಿರುತ್ತದೆ.
‘ಹಾನಿಕಾರಕ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದು ಹೇಳಿದ ಅವರು, ‘ನಿವೃತ್ತ ಕೃಷಿ ವಿಜ್ಞಾನಿಗಳು ತಾವಿರುವ ಕಡೆಯೇ ಮಾಲಿನ್ಯ ಮತ್ತು ಪ್ಲಾಸ್ಟಿಕ್ನಿಂದಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಲು ಯತ್ನಿಸಬೇಕು’ ಎಂದು ಹೇಳಿದರು.