<p><strong>ಬೆಂಗಳೂರು: </strong>ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆ ಅಂದಾಜಿಸಲು ಬಿಜೆಪಿ ಪ್ರತಿ ತಾಲ್ಲೂಕು ಮಟ್ಟದಲ್ಲಿ 10ರಿಂದ 12 ತಂಡಗಳನ್ನು ರಚಿಸಲಿದೆ.<br /> <br /> ಪಕ್ಷದ ಇಲ್ಲಿನ ಕಚೇರಿ `ಜಗನ್ನಾಥ ಭವನ~ದಲ್ಲಿ ಗುರುವಾರ ನಡೆದ ಪದಾಧಿಕಾರಿ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಕ್ತಾರ ಸಿ.ಟಿ. ರವಿ, `ಈ ತಂಡಗಳು ಕುಗ್ರಾಮಗಳಿಗೂ ಭೇಟಿ ನೀಡಲಿವೆ, ತಮ್ಮ ವರದಿಯನ್ನು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಸಲ್ಲಿಸಲಿವೆ~ ಎಂದರು.<br /> <br /> ವಿವಿಧ ತಾಲ್ಲೂಕುಗಳಿಂದ ಪಡೆದ ವರದಿಯನ್ನು ಜಿಲ್ಲಾ ಅಧ್ಯಕ್ಷರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ನೀಡುತ್ತಾರೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ನೀಡಲಾಗುತ್ತದೆ.<br /> <br /> ನಾಯಕತ್ವ ಕುರಿತು ಪಕ್ಷ ಎದುರಿಸುತ್ತಿರುವ ಗೊಂದಲವನ್ನು ಪಕ್ಷದ ವರಿಷ್ಠರು 15 ದಿನಗಳಲ್ಲಿ ಬಗೆಹರಿಸಲಿದ್ದಾರೆ ಎಂದು ಈಶ್ವರಪ್ಪ ಸಭೆಯಲ್ಲಿ ಪದಾಧಿಕಾರಿಗಳಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.<br /> <br /> <strong>ಹಕ್ಕುಪತ್ರ: </strong>ಕೊಳೆಗೇರಿ ಪ್ರದೇಶದ ಜನರಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿತಗೊಳಿಸುವ ಬಗ್ಗೆಯೂ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಆದಷ್ಟು ಬೇಗ ಹಕ್ಕುಪತ್ರ ಕೊಡಿಸುವ ಕೆಲಸ ಆಗಬೇಕು. ಇದಕ್ಕೆ ಪಕ್ಷದ ಕಾರ್ಯಕರ್ತರು ಕೂಡ ಸಹಕರಿಸಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆ ಅಂದಾಜಿಸಲು ಬಿಜೆಪಿ ಪ್ರತಿ ತಾಲ್ಲೂಕು ಮಟ್ಟದಲ್ಲಿ 10ರಿಂದ 12 ತಂಡಗಳನ್ನು ರಚಿಸಲಿದೆ.<br /> <br /> ಪಕ್ಷದ ಇಲ್ಲಿನ ಕಚೇರಿ `ಜಗನ್ನಾಥ ಭವನ~ದಲ್ಲಿ ಗುರುವಾರ ನಡೆದ ಪದಾಧಿಕಾರಿ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಕ್ತಾರ ಸಿ.ಟಿ. ರವಿ, `ಈ ತಂಡಗಳು ಕುಗ್ರಾಮಗಳಿಗೂ ಭೇಟಿ ನೀಡಲಿವೆ, ತಮ್ಮ ವರದಿಯನ್ನು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಸಲ್ಲಿಸಲಿವೆ~ ಎಂದರು.<br /> <br /> ವಿವಿಧ ತಾಲ್ಲೂಕುಗಳಿಂದ ಪಡೆದ ವರದಿಯನ್ನು ಜಿಲ್ಲಾ ಅಧ್ಯಕ್ಷರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ನೀಡುತ್ತಾರೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ನೀಡಲಾಗುತ್ತದೆ.<br /> <br /> ನಾಯಕತ್ವ ಕುರಿತು ಪಕ್ಷ ಎದುರಿಸುತ್ತಿರುವ ಗೊಂದಲವನ್ನು ಪಕ್ಷದ ವರಿಷ್ಠರು 15 ದಿನಗಳಲ್ಲಿ ಬಗೆಹರಿಸಲಿದ್ದಾರೆ ಎಂದು ಈಶ್ವರಪ್ಪ ಸಭೆಯಲ್ಲಿ ಪದಾಧಿಕಾರಿಗಳಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.<br /> <br /> <strong>ಹಕ್ಕುಪತ್ರ: </strong>ಕೊಳೆಗೇರಿ ಪ್ರದೇಶದ ಜನರಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿತಗೊಳಿಸುವ ಬಗ್ಗೆಯೂ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಆದಷ್ಟು ಬೇಗ ಹಕ್ಕುಪತ್ರ ಕೊಡಿಸುವ ಕೆಲಸ ಆಗಬೇಕು. ಇದಕ್ಕೆ ಪಕ್ಷದ ಕಾರ್ಯಕರ್ತರು ಕೂಡ ಸಹಕರಿಸಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>