‘ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಎಲ್ಲ ಬಗೆಯ ಸ್ವಾತಂತ್ರ್ಯ ದಮನ ಮಾಡುತ್ತಿದೆ. ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗುಜರಾತ್ ಚುನಾವಣೆಯಲ್ಲಿ ಜನ ಬಿಜೆಪಿಗೆ ಕಠಿಣ ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಅದರಿಂದ ಬಿಜೆಪಿ ಶಾಸಕರ ಸಂಖ್ಯೆ ಒಂದು ಕಾಲದಲ್ಲಿ 150 ಇದ್ದದ್ದು 99ಕ್ಕೆ ಇಳಿಯಿತು. ಸಮೀಕ್ಷೆಯೊಂದರ ಪ್ರಕಾರ ಕಾಂಗ್ರೆಸ್ 12 ಮತಗಟ್ಟೆಗಳಲ್ಲಿಹೆಚ್ಚು ಮತಗಳನ್ನು ಪಡೆದಿದ್ದರೆ, ಆರು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿತ್ತು. ಆಗ ಅಲ್ಲಿನ ಚಿತ್ರಣವೇ ಬೇರೆ ಆಗುತ್ತಿತ್ತು’ ಎಂದರು.