<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಗುರುವಾರ (ಮೇ 26) ನಡೆಯಲಿರುವ ಚುನಾವಣೆಯ ಭವಿಷ್ಯ ಹೈಕೋರ್ಟ್ ಕೈಯಲ್ಲಿದೆ.</p>.<p>-ಕಾರಣ, ಚುನಾವಣೆ ನಡೆಸಲು ಅನುಮತಿ ನೀಡಿರುವ ಕೋರ್ಟ್, ಚುನಾವಣಾ ಫಲಿತಾಂಶ ಮಾತ್ರ ತನ್ನ ಅಂತಿಮ ತೀರ್ಪಿಗೆ ಬದ್ಧವಾಗಲಿದೆ ಎಂದಿದೆ.</p>.<p>ಈ ಸ್ಥಾನಗಳಿಗೆ ಇದುವರೆಗೆ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡಿಲ್ಲ ಎಂದು ದೂರಿ ಲೋಕೇಶ ವಿ.ನಾಯ್ಕ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ನೇತೃತ್ವದ ಪೀಠ ನಡೆಸಿತು.</p>.<p>ಇಲ್ಲಿಯವರೆಗೆ ಯಾವ ವರ್ಗಕ್ಕೆ ಮೀಸಲಾತಿ ನೀಡಲಾಗಿದೆ ಎಂಬ ಬಗ್ಗೆ ಪಟ್ಟಿ ತಯಾರಿಸುವಂತೆ ಪಾಲಿಕೆಗೆ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದಾರೆ. ಒಂದು ವೇಳೆ ಇದುವರೆಗೆ ಪರಿಶಿಷ್ಟ ಪಂಗಡಕ್ಕೆ ಕಾನೂನಿನ ಅನ್ವಯ ದೊರಕಬೇಕಿದ್ದ ಮೀಸಲಾತಿ ಸಿಕ್ಕಿಲ್ಲ ಎಂದು ಕೋರ್ಟ್ ಗಮನಕ್ಕೆ ಬಂದರೆ, ಈ ಆದೇಶದಿಂದಾಗಿ ಚುನಾವಣೆಯು ಅನೂರ್ಜಿತಗೊಳ್ಳಲಿದೆ. ಒಂದು ವೇಳೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಇರುವುದು ನಿಯಮಾನುಸಾರವಾಗಿದೆ ಎಂದು ಅದರ ಗಮನಕ್ಕೆ ಬಂದರೆ, ಚುನಾವಣೆ ಊರ್ಜಿತಗೊಳ್ಳಲಿದೆ.</p>.<p>ಅರ್ಜಿದಾರರ ಆರೋಪವೇನು? ಈ ಎರಡು ಸ್ಥಾನಗಳಿಗೆ ಮೀಸಲಾತಿ ನೀಡಿ ಫೆ.25ರಂದು ಹೊರಡಿಸಿರುವ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. `ಇಲ್ಲಿಯವರೆಗೆ 15 ಅವಧಿಯ ಚುನಾವಣೆ ನಡೆದಿದೆ. ಆದರೆ ಒಂದೇ ಒಂದು ಬಾರಿಯೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಿಲ್ಲ. ಕರ್ನಾಟಕ ನಗರಾಡಳಿತ ಕಾಯ್ದೆಯ 10ನೇ ಕಲಮಿನ ಅನ್ವಯ ಈ ಎರಡು ಹುದ್ದೆಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು. ಆದರೆ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ~ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಪ್ರತಿವಾದಿಗಳಾಗಿರುವ ಸರ್ಕಾರ, ಬಿಬಿಎಂಪಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದೂಡಿದರು.</p>.<p><strong>ಉಪಲೋಕಾಯುಕ್ತ ನೇಮಕ: ನೋಟಿಸ್</strong></p>.<p>ಉಪಲೋಕಾಯುಕ್ತರಾಗಿರುವ ನ್ಯಾಯಮೂರ್ತಿ ಎಸ್.ಬಿ.ಮಜಗೆ ಅವರ ನೇಮಕವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಚಿಕ್ಕಬಳ್ಳಾಪುರದ ನಿವಾಸಿ ಪಿ. ಸುಬ್ರಹ್ಮಣ್ಯ ಎನ್ನುವವರು ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ನ್ಯಾ.ಮಜಗೆ ಅವರಿಗೆ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.</p>.<p>ಹೈಕೋರ್ಟ್ ಮಾರ್ಗಸೂಚಿಗೆ ಅನುಗುಣವಾಗಿ ನೇಮಕ ನಡೆದಿಲ್ಲ ಎನ್ನುವುದು ಅರ್ಜಿದಾರರ ದೂರು. ಉಪಲೋಕಾಯುಕ್ತರಾಗಿದ್ದ ನ್ಯಾ.ಚಂದ್ರಶೇಖರಯ್ಯ ಅವರ ನೇಮಕವನ್ನು ರದ್ದು ಮಾಡಿದ ಸಂದರ್ಭದಲ್ಲಿ ಲೋಕಾಯುಕ್ತ ಹಾಗೂ ಉಪಲೋಕಾಯುಕ್ತರ ನೇಮಕವನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಆದರೆ ನ್ಯಾ.ಮಜಗೆ ಅವರ ನೇಮಕ ಈ ರೀತಿ ನಡೆದಿಲ್ಲ ಎನ್ನುವುದು ಅರ್ಜಿದಾರರ ದೂರು. ವಿಚಾರಣೆ ಮುಂದೂಡಲಾಗಿದೆ.</p>.<p><strong>ನಿವೇಶನ ನೋಂದಣಿ: ಆದೇಶಕ್ಕೆ ತಡೆ</strong></p>.<p>ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿನ ಗ್ರಾಮಠಾಣಾ ನಿವೇಶನಗಳನ್ನು ನೋಂದಣಿ ಮಾಡಬಾರದು ಎಂದು ಇದೇ 3ರಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.</p>.<p>ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೃಷಿ ಕಂದಾಯ ನಿವೇಶನಗಳನ್ನು ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನೋಂದಣಿ ಮಾಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿತ್ತು. ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಕಂದಾಯ ನಿವೇಶನಗಳನ್ನು ನೋಂದಣಿ ಮಾಡಿಕೊಂಡರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಎಚ್.ಹೇಮಂತಕುಮಾರ್ ಹಾಗೂ ಇತರರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p>`ಈ ಆದೇಶವನ್ನು ವಿವೇಚನಾರಹಿತವಾಗಿ ಹೊರಡಿಸಲಾಗಿದೆ. ಇದು ಸಂವಿಧಾನದ 300-ಎ ವಿಧಿಗೆ ವಿರುದ್ಧವಾಗಿದೆ. ಇದರಿಂದ ಭೂ ಮಾಲೀಕರಿಗೆ ತುಂಬಲಾರದ ನಷ್ಟವಾಗಿದೆ~ ಎಂದು ಅರ್ಜಿದಾರರ ಪರ ವಕೀಲ ಎಂ.ಎಸ್.ಭಾಗ್ವತ ಅವರು ಕೋರ್ಟ್ ಗಮನಕ್ಕೆ ತಂದರು.</p>.<p>ಈ ವಾದವನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳಾದ ಹುಲುವಾಡಿ ಜಿ.ರಮೇಶ್ ಹಾಗೂ ಎಲ್.ನಾರಾಯಣಸ್ವಾಮಿ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಗುರುವಾರ (ಮೇ 26) ನಡೆಯಲಿರುವ ಚುನಾವಣೆಯ ಭವಿಷ್ಯ ಹೈಕೋರ್ಟ್ ಕೈಯಲ್ಲಿದೆ.</p>.<p>-ಕಾರಣ, ಚುನಾವಣೆ ನಡೆಸಲು ಅನುಮತಿ ನೀಡಿರುವ ಕೋರ್ಟ್, ಚುನಾವಣಾ ಫಲಿತಾಂಶ ಮಾತ್ರ ತನ್ನ ಅಂತಿಮ ತೀರ್ಪಿಗೆ ಬದ್ಧವಾಗಲಿದೆ ಎಂದಿದೆ.</p>.<p>ಈ ಸ್ಥಾನಗಳಿಗೆ ಇದುವರೆಗೆ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡಿಲ್ಲ ಎಂದು ದೂರಿ ಲೋಕೇಶ ವಿ.ನಾಯ್ಕ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ನೇತೃತ್ವದ ಪೀಠ ನಡೆಸಿತು.</p>.<p>ಇಲ್ಲಿಯವರೆಗೆ ಯಾವ ವರ್ಗಕ್ಕೆ ಮೀಸಲಾತಿ ನೀಡಲಾಗಿದೆ ಎಂಬ ಬಗ್ಗೆ ಪಟ್ಟಿ ತಯಾರಿಸುವಂತೆ ಪಾಲಿಕೆಗೆ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದಾರೆ. ಒಂದು ವೇಳೆ ಇದುವರೆಗೆ ಪರಿಶಿಷ್ಟ ಪಂಗಡಕ್ಕೆ ಕಾನೂನಿನ ಅನ್ವಯ ದೊರಕಬೇಕಿದ್ದ ಮೀಸಲಾತಿ ಸಿಕ್ಕಿಲ್ಲ ಎಂದು ಕೋರ್ಟ್ ಗಮನಕ್ಕೆ ಬಂದರೆ, ಈ ಆದೇಶದಿಂದಾಗಿ ಚುನಾವಣೆಯು ಅನೂರ್ಜಿತಗೊಳ್ಳಲಿದೆ. ಒಂದು ವೇಳೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಇರುವುದು ನಿಯಮಾನುಸಾರವಾಗಿದೆ ಎಂದು ಅದರ ಗಮನಕ್ಕೆ ಬಂದರೆ, ಚುನಾವಣೆ ಊರ್ಜಿತಗೊಳ್ಳಲಿದೆ.</p>.<p>ಅರ್ಜಿದಾರರ ಆರೋಪವೇನು? ಈ ಎರಡು ಸ್ಥಾನಗಳಿಗೆ ಮೀಸಲಾತಿ ನೀಡಿ ಫೆ.25ರಂದು ಹೊರಡಿಸಿರುವ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. `ಇಲ್ಲಿಯವರೆಗೆ 15 ಅವಧಿಯ ಚುನಾವಣೆ ನಡೆದಿದೆ. ಆದರೆ ಒಂದೇ ಒಂದು ಬಾರಿಯೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಿಲ್ಲ. ಕರ್ನಾಟಕ ನಗರಾಡಳಿತ ಕಾಯ್ದೆಯ 10ನೇ ಕಲಮಿನ ಅನ್ವಯ ಈ ಎರಡು ಹುದ್ದೆಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು. ಆದರೆ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ~ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಪ್ರತಿವಾದಿಗಳಾಗಿರುವ ಸರ್ಕಾರ, ಬಿಬಿಎಂಪಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದೂಡಿದರು.</p>.<p><strong>ಉಪಲೋಕಾಯುಕ್ತ ನೇಮಕ: ನೋಟಿಸ್</strong></p>.<p>ಉಪಲೋಕಾಯುಕ್ತರಾಗಿರುವ ನ್ಯಾಯಮೂರ್ತಿ ಎಸ್.ಬಿ.ಮಜಗೆ ಅವರ ನೇಮಕವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಚಿಕ್ಕಬಳ್ಳಾಪುರದ ನಿವಾಸಿ ಪಿ. ಸುಬ್ರಹ್ಮಣ್ಯ ಎನ್ನುವವರು ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ನ್ಯಾ.ಮಜಗೆ ಅವರಿಗೆ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.</p>.<p>ಹೈಕೋರ್ಟ್ ಮಾರ್ಗಸೂಚಿಗೆ ಅನುಗುಣವಾಗಿ ನೇಮಕ ನಡೆದಿಲ್ಲ ಎನ್ನುವುದು ಅರ್ಜಿದಾರರ ದೂರು. ಉಪಲೋಕಾಯುಕ್ತರಾಗಿದ್ದ ನ್ಯಾ.ಚಂದ್ರಶೇಖರಯ್ಯ ಅವರ ನೇಮಕವನ್ನು ರದ್ದು ಮಾಡಿದ ಸಂದರ್ಭದಲ್ಲಿ ಲೋಕಾಯುಕ್ತ ಹಾಗೂ ಉಪಲೋಕಾಯುಕ್ತರ ನೇಮಕವನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಆದರೆ ನ್ಯಾ.ಮಜಗೆ ಅವರ ನೇಮಕ ಈ ರೀತಿ ನಡೆದಿಲ್ಲ ಎನ್ನುವುದು ಅರ್ಜಿದಾರರ ದೂರು. ವಿಚಾರಣೆ ಮುಂದೂಡಲಾಗಿದೆ.</p>.<p><strong>ನಿವೇಶನ ನೋಂದಣಿ: ಆದೇಶಕ್ಕೆ ತಡೆ</strong></p>.<p>ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿನ ಗ್ರಾಮಠಾಣಾ ನಿವೇಶನಗಳನ್ನು ನೋಂದಣಿ ಮಾಡಬಾರದು ಎಂದು ಇದೇ 3ರಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.</p>.<p>ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೃಷಿ ಕಂದಾಯ ನಿವೇಶನಗಳನ್ನು ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನೋಂದಣಿ ಮಾಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿತ್ತು. ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಕಂದಾಯ ನಿವೇಶನಗಳನ್ನು ನೋಂದಣಿ ಮಾಡಿಕೊಂಡರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಎಚ್.ಹೇಮಂತಕುಮಾರ್ ಹಾಗೂ ಇತರರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p>`ಈ ಆದೇಶವನ್ನು ವಿವೇಚನಾರಹಿತವಾಗಿ ಹೊರಡಿಸಲಾಗಿದೆ. ಇದು ಸಂವಿಧಾನದ 300-ಎ ವಿಧಿಗೆ ವಿರುದ್ಧವಾಗಿದೆ. ಇದರಿಂದ ಭೂ ಮಾಲೀಕರಿಗೆ ತುಂಬಲಾರದ ನಷ್ಟವಾಗಿದೆ~ ಎಂದು ಅರ್ಜಿದಾರರ ಪರ ವಕೀಲ ಎಂ.ಎಸ್.ಭಾಗ್ವತ ಅವರು ಕೋರ್ಟ್ ಗಮನಕ್ಕೆ ತಂದರು.</p>.<p>ಈ ವಾದವನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳಾದ ಹುಲುವಾಡಿ ಜಿ.ರಮೇಶ್ ಹಾಗೂ ಎಲ್.ನಾರಾಯಣಸ್ವಾಮಿ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>