<p><strong>ಬೆಂಗಳೂರು</strong>: `ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ಬಹುತೇಕ ನಿಷ್ಕ್ರಿಯವಾಗಿದ್ದು ಕೂಡಲೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಮನವಿ ಮಾಡಿದರು. <br /> <br /> ವಿಜಯಿ ಭವಾನಿ ಕ್ಷೇಮಾಭಿವೃದ್ಧಿ ಸಂಘ ತನ್ನ ಬೆಳ್ಳಿಹಬ್ಬ ಮತ್ತು ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಅಂಗವಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.<br /> `ರಾಜ್ಯದಲ್ಲಿ ಕ್ಷತ್ರೀಯ ಸಮುದಾಯದ ಜನಸಂಖ್ಯೆ 25- 30 ಲಕ್ಷದಷ್ಟಿದೆ. <br /> <br /> ಜಾತಿ ಗಣತಿ ಪೂರ್ಣಗೊಂಡ ನಂತರ ಸಮುದಾಯದ ಸಂಖ್ಯೆ ಎಷ್ಟಿದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ. ಆರ್ಥಿಕವಾಗಿ ಶೈಕ್ಷಣಿಕವಾಗಿ ಕ್ಷತ್ರೀಯ ಸಮಾಜ ಹಿಂದುಳಿದಿದೆ~ ಎಂದರು. <br /> <br /> `ಈ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಲು ಮುಂದಾಗಬೇಕಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಕ್ಷತ್ರೀಯರು ಹಿಂದುಳಿದ ವರ್ಗಗಳಿಗೆ ಸೇರಿದ್ದಾರೆ. ಆದರೆ ರಾಜ್ಯದಲ್ಲಿ ಇನ್ನೂ ಈ ಕಾರ್ಯ ನಡೆದಿಲ್ಲ. ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವುದರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯುತ್ತದೆ~ ಎಂದು ಅವರು ಅಭಿಪ್ರಾಯಪಟ್ಟರು.<br /> <br /> `ಶಿವಾಜಿ ಕಾಲದಿಂದಲೂ ಮರಾಠರು ಯೋಧರಾಗಿ ಮೆರೆದವರು. ಪಾಣಿಪತ್ ಕದನದಲ್ಲಿ, ಪ್ರಥಮ ಮತ್ತು ದ್ವಿತೀಯ ಮಹಾಯುದ್ಧದಲ್ಲಿ ಬಲಿದಾನ ಮಾಡಿದರು. ದೇಶಕ್ಕಾಗಿ ಟೊಂಕಕಟ್ಟಿ ನಿಂತ ಸಮುದಾಯ ಇದು~ ಎಂದರು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್, `ಶಿವಾಜಿ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡಬೇಕು. ಅವರ ಸಾಧನೆಯನ್ನು ಮುಂದಿನ ಪೀಳಿಗೆ ಕೂಡ ಸ್ಮರಿಸುವಂತಿದೆ ~ ಎಂದು ಸ್ಮರಿಸಿದರು.<br /> <br /> `ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶಭಕ್ತಿ ಮೆರೆದ ಮರಾಠರು ಪ್ರಸ್ತುತ ದೇಶದ ಈಶಾನ್ಯ ರಾಜ್ಯಗಳಲ್ಲಿ ಯೋಧರಾಗಿ ಸಲ್ಲಿಸುತ್ತಿರುವ ಸೇವೆ ಮಹತ್ತರವಾದುದು. ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಮಾಜಕ್ಕೆ ಅಗತ್ಯವಾದ ನೆರವು ನೀಡಲು ಸಿದ್ಧ~ ಎಂದರು. <br /> <br /> ಗೋಸಾಯಿ ಮಠದ ಸುರೇಶ್ವರಾನಂದ ಭಾರತಿ ಸ್ವಾಮೀಜಿ, ಸಮಾಜದ ಮುಖಂಡರಾದ ವಿ.ಎ.ರಾಣೋಜಿರಾವ್ ಸಾಠೆ, ಬಿ.ಆರ್.ಶ್ರೀನಿವಾಸ ಕಾಳೆ, ಆರ್.ಟಿ.ನಗರ ವೆಂಕಟೇಶ್ವರ ದೇವಸ್ಥಾನದ ಕಾರ್ಯದರ್ಶಿ ವಿಠ್ಠಲರಾವ್ ನಿಕ್ಕಂ ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ಬಹುತೇಕ ನಿಷ್ಕ್ರಿಯವಾಗಿದ್ದು ಕೂಡಲೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಮನವಿ ಮಾಡಿದರು. <br /> <br /> ವಿಜಯಿ ಭವಾನಿ ಕ್ಷೇಮಾಭಿವೃದ್ಧಿ ಸಂಘ ತನ್ನ ಬೆಳ್ಳಿಹಬ್ಬ ಮತ್ತು ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಅಂಗವಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.<br /> `ರಾಜ್ಯದಲ್ಲಿ ಕ್ಷತ್ರೀಯ ಸಮುದಾಯದ ಜನಸಂಖ್ಯೆ 25- 30 ಲಕ್ಷದಷ್ಟಿದೆ. <br /> <br /> ಜಾತಿ ಗಣತಿ ಪೂರ್ಣಗೊಂಡ ನಂತರ ಸಮುದಾಯದ ಸಂಖ್ಯೆ ಎಷ್ಟಿದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ. ಆರ್ಥಿಕವಾಗಿ ಶೈಕ್ಷಣಿಕವಾಗಿ ಕ್ಷತ್ರೀಯ ಸಮಾಜ ಹಿಂದುಳಿದಿದೆ~ ಎಂದರು. <br /> <br /> `ಈ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಲು ಮುಂದಾಗಬೇಕಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಕ್ಷತ್ರೀಯರು ಹಿಂದುಳಿದ ವರ್ಗಗಳಿಗೆ ಸೇರಿದ್ದಾರೆ. ಆದರೆ ರಾಜ್ಯದಲ್ಲಿ ಇನ್ನೂ ಈ ಕಾರ್ಯ ನಡೆದಿಲ್ಲ. ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವುದರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯುತ್ತದೆ~ ಎಂದು ಅವರು ಅಭಿಪ್ರಾಯಪಟ್ಟರು.<br /> <br /> `ಶಿವಾಜಿ ಕಾಲದಿಂದಲೂ ಮರಾಠರು ಯೋಧರಾಗಿ ಮೆರೆದವರು. ಪಾಣಿಪತ್ ಕದನದಲ್ಲಿ, ಪ್ರಥಮ ಮತ್ತು ದ್ವಿತೀಯ ಮಹಾಯುದ್ಧದಲ್ಲಿ ಬಲಿದಾನ ಮಾಡಿದರು. ದೇಶಕ್ಕಾಗಿ ಟೊಂಕಕಟ್ಟಿ ನಿಂತ ಸಮುದಾಯ ಇದು~ ಎಂದರು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್, `ಶಿವಾಜಿ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡಬೇಕು. ಅವರ ಸಾಧನೆಯನ್ನು ಮುಂದಿನ ಪೀಳಿಗೆ ಕೂಡ ಸ್ಮರಿಸುವಂತಿದೆ ~ ಎಂದು ಸ್ಮರಿಸಿದರು.<br /> <br /> `ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶಭಕ್ತಿ ಮೆರೆದ ಮರಾಠರು ಪ್ರಸ್ತುತ ದೇಶದ ಈಶಾನ್ಯ ರಾಜ್ಯಗಳಲ್ಲಿ ಯೋಧರಾಗಿ ಸಲ್ಲಿಸುತ್ತಿರುವ ಸೇವೆ ಮಹತ್ತರವಾದುದು. ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಮಾಜಕ್ಕೆ ಅಗತ್ಯವಾದ ನೆರವು ನೀಡಲು ಸಿದ್ಧ~ ಎಂದರು. <br /> <br /> ಗೋಸಾಯಿ ಮಠದ ಸುರೇಶ್ವರಾನಂದ ಭಾರತಿ ಸ್ವಾಮೀಜಿ, ಸಮಾಜದ ಮುಖಂಡರಾದ ವಿ.ಎ.ರಾಣೋಜಿರಾವ್ ಸಾಠೆ, ಬಿ.ಆರ್.ಶ್ರೀನಿವಾಸ ಕಾಳೆ, ಆರ್.ಟಿ.ನಗರ ವೆಂಕಟೇಶ್ವರ ದೇವಸ್ಥಾನದ ಕಾರ್ಯದರ್ಶಿ ವಿಠ್ಠಲರಾವ್ ನಿಕ್ಕಂ ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>