<p>ಬೆಂಗಳೂರು: ‘ಬುದ್ಧ ಹುಟ್ಟಿದ ನಾಡಾದ ಭಾರತದಲ್ಲಿ ಬೌದ್ಧ ಮೀಮಾಂಸೆಯನ್ನು ವ್ಯವಸ್ಥಿತವಾಗಿ ನಾಶ ಮಾಡಲಾಗಿದೆ. ಇದರ ಹಿಂದೆ ದೊಡ್ಡ ರಾಜಕಾರಣವೊಂದು ಅಡಗಿದೆ’ ಎಂದು ಹಿರಿಯ ಕುಂಚ ಕಲಾವಿದ ಕೆ.ಟಿ.ಶಿವಪ್ರಸಾದ್ ವಿಷಾದ ವ್ಯಕ್ತಪಡಿಸಿದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ‘ಬೌದ್ಧ ಮೀಮಾಂಸೆಯ ಮೂಲ ಗ್ರಂಥಗಳು ಭಾರತದಲ್ಲಿ ದೊರೆಯುತ್ತಿಲ್ಲ. ಈ ಗ್ರಂಥಗಳು ಟಿಬೆಟ್ನಲ್ಲಿ ಮಾತ್ರ ದೊರೆಯುತ್ತಿವೆ. ಬೌದ್ಧ ಮೀಮಾಂಸೆಯ ಗ್ರಂಥಗಳು ಜನರಿಗೆ ತಲುಪಬಾರದು ಎಂಬ ಕಾರಣಕ್ಕೆ ಅವುಗಳನ್ನು ನಾಶಪಡಿಸಲಾಗಿದೆ’ ಎಂದು ಅವರು ಹೇಳಿದರು. <br /> <br /> ‘ಬೌದ್ಧ ಮೀಮಾಂಸೆಗೂ ಇಂದಿನ ವಿಜ್ಞಾನಕ್ಕೂ ಹೆಚ್ಚಿನ ಸಂಬಂಧಗಳಿವೆ. ಅಲ್ಲಮ, ಐನ್ಸ್ಟೀನ್, ಸ್ಟೀಫನ್ ಹಾಕಿಂಗ್ಸ್ ಹಾಗೂ ಡಾರ್ವಿನ್ ಅವರು ಪ್ರತಿಪಾದಿಸಿರುವ ಸಿದ್ಧಾಂತಗಳಿಗೆ ಬೌದ್ಧ ತತ್ವಗಳು ತಳಹದಿಯಾಗಿವೆ. ಬುದ್ಧನ ಆದರ್ಶಗಳಲ್ಲಿ ನಡೆಯುತ್ತಿರುವ ವೈಜ್ಞಾನಿಕ ತತ್ವಗಳು ದೇಶದ ದಲಿತರನ್ನು ಮುನ್ನಡೆಸುವ ವಿಶ್ವಾಸವಿದೆ’ ಎಂದು ತಿಳಿಸಿದರು. <br /> <br /> ‘ಕುವೆಂಪು ಅವರ ಕೃತಿಗಳಲ್ಲಿ ಬೌದ್ಧ ಮೀಮಾಂಸೆಯ ತಳಹದಿ ಇದೆ. ಅವರ ಕಾದಂಬರಿ ಮಲೆಗಳಲ್ಲಿ ಮಧುಮಗಳು ಹಾಗೂ ಅನಿಕೇತನ ಕವಿತೆಯಲ್ಲಿ ಇದು ಹೆಚ್ಚು ನಿಚ್ಚಳವಾಗಿ ತೋರುತ್ತದೆ. ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳಲ್ಲಿ ಕೂಡ ಬುದ್ಧನ ಉದಾತ್ತತೆ ಎದ್ದು ತೋರುತ್ತದೆ’ ಎಂದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬುದ್ಧ ಹುಟ್ಟಿದ ನಾಡಾದ ಭಾರತದಲ್ಲಿ ಬೌದ್ಧ ಮೀಮಾಂಸೆಯನ್ನು ವ್ಯವಸ್ಥಿತವಾಗಿ ನಾಶ ಮಾಡಲಾಗಿದೆ. ಇದರ ಹಿಂದೆ ದೊಡ್ಡ ರಾಜಕಾರಣವೊಂದು ಅಡಗಿದೆ’ ಎಂದು ಹಿರಿಯ ಕುಂಚ ಕಲಾವಿದ ಕೆ.ಟಿ.ಶಿವಪ್ರಸಾದ್ ವಿಷಾದ ವ್ಯಕ್ತಪಡಿಸಿದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ‘ಬೌದ್ಧ ಮೀಮಾಂಸೆಯ ಮೂಲ ಗ್ರಂಥಗಳು ಭಾರತದಲ್ಲಿ ದೊರೆಯುತ್ತಿಲ್ಲ. ಈ ಗ್ರಂಥಗಳು ಟಿಬೆಟ್ನಲ್ಲಿ ಮಾತ್ರ ದೊರೆಯುತ್ತಿವೆ. ಬೌದ್ಧ ಮೀಮಾಂಸೆಯ ಗ್ರಂಥಗಳು ಜನರಿಗೆ ತಲುಪಬಾರದು ಎಂಬ ಕಾರಣಕ್ಕೆ ಅವುಗಳನ್ನು ನಾಶಪಡಿಸಲಾಗಿದೆ’ ಎಂದು ಅವರು ಹೇಳಿದರು. <br /> <br /> ‘ಬೌದ್ಧ ಮೀಮಾಂಸೆಗೂ ಇಂದಿನ ವಿಜ್ಞಾನಕ್ಕೂ ಹೆಚ್ಚಿನ ಸಂಬಂಧಗಳಿವೆ. ಅಲ್ಲಮ, ಐನ್ಸ್ಟೀನ್, ಸ್ಟೀಫನ್ ಹಾಕಿಂಗ್ಸ್ ಹಾಗೂ ಡಾರ್ವಿನ್ ಅವರು ಪ್ರತಿಪಾದಿಸಿರುವ ಸಿದ್ಧಾಂತಗಳಿಗೆ ಬೌದ್ಧ ತತ್ವಗಳು ತಳಹದಿಯಾಗಿವೆ. ಬುದ್ಧನ ಆದರ್ಶಗಳಲ್ಲಿ ನಡೆಯುತ್ತಿರುವ ವೈಜ್ಞಾನಿಕ ತತ್ವಗಳು ದೇಶದ ದಲಿತರನ್ನು ಮುನ್ನಡೆಸುವ ವಿಶ್ವಾಸವಿದೆ’ ಎಂದು ತಿಳಿಸಿದರು. <br /> <br /> ‘ಕುವೆಂಪು ಅವರ ಕೃತಿಗಳಲ್ಲಿ ಬೌದ್ಧ ಮೀಮಾಂಸೆಯ ತಳಹದಿ ಇದೆ. ಅವರ ಕಾದಂಬರಿ ಮಲೆಗಳಲ್ಲಿ ಮಧುಮಗಳು ಹಾಗೂ ಅನಿಕೇತನ ಕವಿತೆಯಲ್ಲಿ ಇದು ಹೆಚ್ಚು ನಿಚ್ಚಳವಾಗಿ ತೋರುತ್ತದೆ. ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳಲ್ಲಿ ಕೂಡ ಬುದ್ಧನ ಉದಾತ್ತತೆ ಎದ್ದು ತೋರುತ್ತದೆ’ ಎಂದರು. <br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>