<p><strong>ಬೆಂಗಳೂರು: </strong>`ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಇನ್ನೂ ಯಾವುದೇ ಹೆಸರನ್ನು ಸರ್ಕಾರ ಶಿಫಾರಸು ಮಾಡಿಲ್ಲ. ಬೆಂಗಳೂರು ವಿಶ್ವವಿದ್ಯಾಲಯವನ್ನು ಹೊರತುಪಡಿಸಿ ಇತರೆ ವಿಶ್ವವಿದ್ಯಾಲಯದ ಶಿಕ್ಷಣತಜ್ಞರೊಬ್ಬರನ್ನು ಕುಲಪತಿ ಸ್ಥಾನಕ್ಕೆ ನೇಮಿಸಲು ಚಿಂತನೆ ನಡೆದಿದೆ~ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜವಾಹರ್ ಬಾಲಭವನ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆಯು ಜಂಟಿಯಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ `ವಿಶ್ವ ಮಕ್ಕಳ ದಿನಾಚರಣೆ~ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಲೋಕಾಯುಕ್ತರ ನೇಮಕಕ್ಕೆ ಸರ್ಕಾರವು ಇದುವರೆಗೂ ಯಾರ ಹೆಸರನ್ನೂ ಶಿಫಾರಸು ಮಾಡಿಲ್ಲ. ಒಂದು ವೇಳೆ ಸಂತೋಷ ಹೆಗ್ಡೆ ಅವರಂತಹ ಸಮರ್ಥರನ್ನು ಸರ್ಕಾರ ಶಿಫಾರಸು ಮಾಡಿದರೆ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗುವುದು~ ಎಂದು ಅವರು ತಿಳಿಸಿದರು.<br /> <br /> `ನೈಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯೊಬ್ಬರು ಸೇರಿದಂತೆ ಇನ್ನು ಮೂವರು ಸಚಿವರ ವಿರುದ್ಧದ ಭ್ರಷ್ಟಾಚಾರದ ಪ್ರಕರಣದ ಕಡತಗಳು ನನ್ನ ಮುಂದಿವೆ. ಇವನ್ನು ಅಗತ್ಯ ಬಂದಾಗ ಬಹಿರಂಗಪಡಿಸುತ್ತೇನೆ. ಇಂತಹ ಭ್ರಷ್ಟ ಜನಪ್ರತಿನಿಧಿಗಳ ಬಗ್ಗೆ ಜನತೆಯೇ ಎಚ್ಚೆತ್ತುಕೊಳ್ಳಬೇಕು. ಆಗಲೇ ಭ್ರಷ್ಟಾಚಾರವು ನಿರ್ಮೂಲನೆಯಾಗಲು ಸಾಧ್ಯ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಇನ್ನೂ ಯಾವುದೇ ಹೆಸರನ್ನು ಸರ್ಕಾರ ಶಿಫಾರಸು ಮಾಡಿಲ್ಲ. ಬೆಂಗಳೂರು ವಿಶ್ವವಿದ್ಯಾಲಯವನ್ನು ಹೊರತುಪಡಿಸಿ ಇತರೆ ವಿಶ್ವವಿದ್ಯಾಲಯದ ಶಿಕ್ಷಣತಜ್ಞರೊಬ್ಬರನ್ನು ಕುಲಪತಿ ಸ್ಥಾನಕ್ಕೆ ನೇಮಿಸಲು ಚಿಂತನೆ ನಡೆದಿದೆ~ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.<br /> <br /> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಜವಾಹರ್ ಬಾಲಭವನ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆಯು ಜಂಟಿಯಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ `ವಿಶ್ವ ಮಕ್ಕಳ ದಿನಾಚರಣೆ~ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಲೋಕಾಯುಕ್ತರ ನೇಮಕಕ್ಕೆ ಸರ್ಕಾರವು ಇದುವರೆಗೂ ಯಾರ ಹೆಸರನ್ನೂ ಶಿಫಾರಸು ಮಾಡಿಲ್ಲ. ಒಂದು ವೇಳೆ ಸಂತೋಷ ಹೆಗ್ಡೆ ಅವರಂತಹ ಸಮರ್ಥರನ್ನು ಸರ್ಕಾರ ಶಿಫಾರಸು ಮಾಡಿದರೆ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗುವುದು~ ಎಂದು ಅವರು ತಿಳಿಸಿದರು.<br /> <br /> `ನೈಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯೊಬ್ಬರು ಸೇರಿದಂತೆ ಇನ್ನು ಮೂವರು ಸಚಿವರ ವಿರುದ್ಧದ ಭ್ರಷ್ಟಾಚಾರದ ಪ್ರಕರಣದ ಕಡತಗಳು ನನ್ನ ಮುಂದಿವೆ. ಇವನ್ನು ಅಗತ್ಯ ಬಂದಾಗ ಬಹಿರಂಗಪಡಿಸುತ್ತೇನೆ. ಇಂತಹ ಭ್ರಷ್ಟ ಜನಪ್ರತಿನಿಧಿಗಳ ಬಗ್ಗೆ ಜನತೆಯೇ ಎಚ್ಚೆತ್ತುಕೊಳ್ಳಬೇಕು. ಆಗಲೇ ಭ್ರಷ್ಟಾಚಾರವು ನಿರ್ಮೂಲನೆಯಾಗಲು ಸಾಧ್ಯ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>