<p><strong>ಬೆಂಗಳೂರು: </strong>‘ಸರ್ಕಾರವು ಪೊಲೀಸ್ ಇಲಾಖೆಯಲ್ಲಿನ ಪ್ರಾಮಾಣಿಕ ಅಧಿ ಕಾರಿಗಳನ್ನು ತನ್ನ ಮನಸ್ಸಿಗೆ ಬಂದಂತೆ ಬೇಕಾಬಿಟ್ಟಿ ವರ್ಗಾವಣೆ ಮಾಡುತ್ತಿದೆ. ಈ ಪರಿಪಾಠಕ್ಕೆ ಅಂತ್ಯ ಹಾಡಬೇಕಿದೆ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸರ್ಕಾರದ ಕ್ರಮದ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ರಾಜ್ಯ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ‘ಅರ್ಥ್ ಸೆಕ್ಯುರ್’ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ನಗರದ ಸೆಂಟ್ರಲ್ ಕಾಲೇಜಿನಲ್ಲಿ ಗುರುವಾರ ನಡೆದ ‘ಸ್ವತಂತ್ರ ಭಾರತದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ’ ಕುರಿತು ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ‘ಪೊಲೀಸ್ ಇಲಾಖೆಯಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಭ್ರಷ್ಟ ಅಧಿಕಾರಿ ಗಳಿದ್ದಾರೆ. ಇಡೀ ಸಮಾಜಕ್ಕೆ ಸುರಕ್ಷತೆ ಒದಗಿಸಬೇಕಾದ ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ’ ಎಂದು ಚಾಟಿ ಬೀಸಿದರು.<br /> <br /> ಪೊಲೀಸ್ ಮಹಿಳಾ ಸಿಬ್ಬಂದಿ ನೇಮಿಸಿ: ‘ರಾಜ್ಯ ಸೇರಿದಂತೆ ಎಲ್ಲೆಡೆ ಮಹಿಳಾ ದೌರ್ಜನ್ಯ ಹೆಚ್ಚುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ನೇಮಕ ಮಾಡ ಬೇಕು. ಪ್ರತಿ ಠಾಣೆಯಲ್ಲಿಯೂ ಹೆಚ್ಚಿನ ಮಹಿಳಾ ಸಿಬ್ಬಂದಿ ಇರುವಂತೆ ಮಾಡ ಬೇಕು’ ಎಂದು ಸಲಹೆ ನೀಡಿದರು.<br /> <br /> ವಿಶೇಷವಾದ ಕಾನೂನು: ‘ಮಹಿಳಾ ದೌರ್ಜನ್ಯ ತಡೆಗೆ ದೇಶದಲ್ಲಿ ಏಕ ರೀತಿ ಕಾನೂನು ರಚನೆಯಾಗ ಬೇಕು. ಇದರ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸ ಬೇಕು. ಮಹಿಳಾ ನ್ಯಾಯಾಧೀಶರು ಮತ್ತು ವಕೀಲರ ಸಂಖ್ಯೆಯೂ ಹೆಚ್ಚ ಬೇಕು’ ಎಂದು ಪ್ರತಿಪಾದಿಸಿದರು.<br /> <br /> ‘ಮಹಿಳಾ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ನ್ಯಾಯಾ ಲಯದ ಸ್ಥಾಪನೆಯಾಗಬೇಕು. ಇಂತಹ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಮಾತ ನಾಡಿ, ‘ಮಹಿಳಾ ದೌರ್ಜನ್ಯ ಪ್ರಕರಣ ಗಳ ಶೀಘ್ರ ಇತ್ಯರ್ಥಕ್ಕೆ ಹತ್ತು ತ್ವರಿತಗತಿ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ’ ಎಂದರು.<br /> <br /> ‘ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಪ್ರಕರಣಗಳಿಂದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಸಂವಿಧಾನದ ಆಶಯಗಳನ್ನು ಅನು ಷ್ಠಾನಕ್ಕೆ ತರಲು ವಿಫಲವಾಗಿದ್ದೇವೆ’ ಎಂದು ವಿಷಾದಿಸಿದರು.<br /> <br /> ‘ಪೊಲೀಸ್ ಇಲಾಖೆಯು ಪ್ರತಿ ಯೊಬ್ಬ ಮಹಿಳೆಗೆ ಭದ್ರತೆ ಒದಗಿಸಲು ಬದ್ಧವಾಗಿದೆ’ ಎಂದರು.<br /> <br /> ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೋಭಾ ಓಜಾ, ‘ಮಹಿಳೆ ಯರು ಇಂದು ತಮ್ಮ ಸುರಕ್ಷತೆ, ಭದ್ರತೆ ಗಾಗಿ ಬೀದಿಯಲ್ಲಿ ನಿಂತು ಹೋರಾಟ ನಡೆಸಬೇಕಾಗಿದೆ’ ಎಂದರು.<br /> <br /> ‘ಮಹಿಳಾ ಸುರಕ್ಷತೆ ಪೊಲೀಸ್ ಇಲಾಖೆ ಅಥವಾ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಪುರುಷರ ಚಿಂತನಾ ವಿಧಾನ ಬದಲಾಗಬೇಕು. ಮಹಿಳೆ ಯರೂ ಪುರುಷರಂತೆ ಸಮಾನರು ಎಂಬುದನ್ನು ಮನಗಾಣಬೇಕು’ಎಂದರು.<br /> <br /> <strong>ಪ್ರತಿಕ್ರಿಯೆಗೆ ಸಿ.ಎಂ ನಕಾರ</strong><br /> <span style="font-size: 26px;"><strong>ಬೆಂಗಳೂರು:</strong> ‘ರಾಜ್ಯಪಾಲರ ಹೇಳಿಕೆ ಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದರು.</span></p>.<p>‘ಪೊಲೀಸ್ ಅಧಿಕಾರಿಗಳ ವರ್ಗಾ ವಣೆ ಕುರಿತಂತೆ ರಾಜ್ಯಪಾಲರೂ ಆಕ್ಷೇಪ ಎತ್ತಿದ್ದಾರಲ್ಲ’ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸರ್ಕಾರವು ಪೊಲೀಸ್ ಇಲಾಖೆಯಲ್ಲಿನ ಪ್ರಾಮಾಣಿಕ ಅಧಿ ಕಾರಿಗಳನ್ನು ತನ್ನ ಮನಸ್ಸಿಗೆ ಬಂದಂತೆ ಬೇಕಾಬಿಟ್ಟಿ ವರ್ಗಾವಣೆ ಮಾಡುತ್ತಿದೆ. ಈ ಪರಿಪಾಠಕ್ಕೆ ಅಂತ್ಯ ಹಾಡಬೇಕಿದೆ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸರ್ಕಾರದ ಕ್ರಮದ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ರಾಜ್ಯ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ‘ಅರ್ಥ್ ಸೆಕ್ಯುರ್’ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ನಗರದ ಸೆಂಟ್ರಲ್ ಕಾಲೇಜಿನಲ್ಲಿ ಗುರುವಾರ ನಡೆದ ‘ಸ್ವತಂತ್ರ ಭಾರತದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ’ ಕುರಿತು ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ‘ಪೊಲೀಸ್ ಇಲಾಖೆಯಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಭ್ರಷ್ಟ ಅಧಿಕಾರಿ ಗಳಿದ್ದಾರೆ. ಇಡೀ ಸಮಾಜಕ್ಕೆ ಸುರಕ್ಷತೆ ಒದಗಿಸಬೇಕಾದ ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ’ ಎಂದು ಚಾಟಿ ಬೀಸಿದರು.<br /> <br /> ಪೊಲೀಸ್ ಮಹಿಳಾ ಸಿಬ್ಬಂದಿ ನೇಮಿಸಿ: ‘ರಾಜ್ಯ ಸೇರಿದಂತೆ ಎಲ್ಲೆಡೆ ಮಹಿಳಾ ದೌರ್ಜನ್ಯ ಹೆಚ್ಚುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ನೇಮಕ ಮಾಡ ಬೇಕು. ಪ್ರತಿ ಠಾಣೆಯಲ್ಲಿಯೂ ಹೆಚ್ಚಿನ ಮಹಿಳಾ ಸಿಬ್ಬಂದಿ ಇರುವಂತೆ ಮಾಡ ಬೇಕು’ ಎಂದು ಸಲಹೆ ನೀಡಿದರು.<br /> <br /> ವಿಶೇಷವಾದ ಕಾನೂನು: ‘ಮಹಿಳಾ ದೌರ್ಜನ್ಯ ತಡೆಗೆ ದೇಶದಲ್ಲಿ ಏಕ ರೀತಿ ಕಾನೂನು ರಚನೆಯಾಗ ಬೇಕು. ಇದರ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸ ಬೇಕು. ಮಹಿಳಾ ನ್ಯಾಯಾಧೀಶರು ಮತ್ತು ವಕೀಲರ ಸಂಖ್ಯೆಯೂ ಹೆಚ್ಚ ಬೇಕು’ ಎಂದು ಪ್ರತಿಪಾದಿಸಿದರು.<br /> <br /> ‘ಮಹಿಳಾ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ನ್ಯಾಯಾ ಲಯದ ಸ್ಥಾಪನೆಯಾಗಬೇಕು. ಇಂತಹ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಮಾತ ನಾಡಿ, ‘ಮಹಿಳಾ ದೌರ್ಜನ್ಯ ಪ್ರಕರಣ ಗಳ ಶೀಘ್ರ ಇತ್ಯರ್ಥಕ್ಕೆ ಹತ್ತು ತ್ವರಿತಗತಿ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ’ ಎಂದರು.<br /> <br /> ‘ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಪ್ರಕರಣಗಳಿಂದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಸಂವಿಧಾನದ ಆಶಯಗಳನ್ನು ಅನು ಷ್ಠಾನಕ್ಕೆ ತರಲು ವಿಫಲವಾಗಿದ್ದೇವೆ’ ಎಂದು ವಿಷಾದಿಸಿದರು.<br /> <br /> ‘ಪೊಲೀಸ್ ಇಲಾಖೆಯು ಪ್ರತಿ ಯೊಬ್ಬ ಮಹಿಳೆಗೆ ಭದ್ರತೆ ಒದಗಿಸಲು ಬದ್ಧವಾಗಿದೆ’ ಎಂದರು.<br /> <br /> ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೋಭಾ ಓಜಾ, ‘ಮಹಿಳೆ ಯರು ಇಂದು ತಮ್ಮ ಸುರಕ್ಷತೆ, ಭದ್ರತೆ ಗಾಗಿ ಬೀದಿಯಲ್ಲಿ ನಿಂತು ಹೋರಾಟ ನಡೆಸಬೇಕಾಗಿದೆ’ ಎಂದರು.<br /> <br /> ‘ಮಹಿಳಾ ಸುರಕ್ಷತೆ ಪೊಲೀಸ್ ಇಲಾಖೆ ಅಥವಾ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಪುರುಷರ ಚಿಂತನಾ ವಿಧಾನ ಬದಲಾಗಬೇಕು. ಮಹಿಳೆ ಯರೂ ಪುರುಷರಂತೆ ಸಮಾನರು ಎಂಬುದನ್ನು ಮನಗಾಣಬೇಕು’ಎಂದರು.<br /> <br /> <strong>ಪ್ರತಿಕ್ರಿಯೆಗೆ ಸಿ.ಎಂ ನಕಾರ</strong><br /> <span style="font-size: 26px;"><strong>ಬೆಂಗಳೂರು:</strong> ‘ರಾಜ್ಯಪಾಲರ ಹೇಳಿಕೆ ಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದರು.</span></p>.<p>‘ಪೊಲೀಸ್ ಅಧಿಕಾರಿಗಳ ವರ್ಗಾ ವಣೆ ಕುರಿತಂತೆ ರಾಜ್ಯಪಾಲರೂ ಆಕ್ಷೇಪ ಎತ್ತಿದ್ದಾರಲ್ಲ’ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>