<p><strong>ಬೆಂಗಳೂರು</strong>: ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಗರದ ತುಮಕೂರು ರಸ್ತೆಯ ಸಿಎಂಟಿ ಜಂಕ್ಷನ್ ಸಮೀಪ ಶನಿವಾರ ಸಂಜೆ ನಡೆದಿದೆ.<br /> <br /> ಪೀಣ್ಯ ಬಳಿಯ ಟಿ.ದಾಸರಹಳ್ಳಿ ನಿವಾಸಿ ಮುರುಗೇಶ್ (52) ಮೃತಪಟ್ಟವರು. ಫ್ರೇಜರ್ಟೌನ್ನಲ್ಲಿರುವ ಸಹೋದರನ ಮನೆಗೆ ಹೋಗಿದ್ದ ಅವರು ಟಿ.ದಾಸರಹಳ್ಳಿಗೆ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಸಿಎಂಟಿ ಜಂಕ್ಷನ್ ಬಳಿ ಎಡ ತಿರುವು ಪಡೆದುಕೊಳ್ಳುವ ಯತ್ನದಲ್ಲಿದ್ದ ಲಾರಿ ಚಾಲಕ, ಪಕ್ಕದಲ್ಲಿ ಹೋಗುತ್ತಿದ್ದ ಮುರುಗೇಶ್ ಅವರ ದ್ವಿಚಕ್ರ ವಾಹನಕ್ಕೆ ವಾಹನ ಗುದ್ದಿಸಿದ. <br /> <br /> ಪರಿಣಾಮ ವಾಹನದಿಂದ ಕೆಳಗೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. <br /> <br /> ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಗರದ ತುಮಕೂರು ರಸ್ತೆಯ ಸಿಎಂಟಿ ಜಂಕ್ಷನ್ ಸಮೀಪ ಶನಿವಾರ ಸಂಜೆ ನಡೆದಿದೆ.<br /> <br /> ಪೀಣ್ಯ ಬಳಿಯ ಟಿ.ದಾಸರಹಳ್ಳಿ ನಿವಾಸಿ ಮುರುಗೇಶ್ (52) ಮೃತಪಟ್ಟವರು. ಫ್ರೇಜರ್ಟೌನ್ನಲ್ಲಿರುವ ಸಹೋದರನ ಮನೆಗೆ ಹೋಗಿದ್ದ ಅವರು ಟಿ.ದಾಸರಹಳ್ಳಿಗೆ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಸಿಎಂಟಿ ಜಂಕ್ಷನ್ ಬಳಿ ಎಡ ತಿರುವು ಪಡೆದುಕೊಳ್ಳುವ ಯತ್ನದಲ್ಲಿದ್ದ ಲಾರಿ ಚಾಲಕ, ಪಕ್ಕದಲ್ಲಿ ಹೋಗುತ್ತಿದ್ದ ಮುರುಗೇಶ್ ಅವರ ದ್ವಿಚಕ್ರ ವಾಹನಕ್ಕೆ ವಾಹನ ಗುದ್ದಿಸಿದ. <br /> <br /> ಪರಿಣಾಮ ವಾಹನದಿಂದ ಕೆಳಗೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಘಟನೆ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. <br /> <br /> ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>