‘ಕಚೇರಿಗೆ ಬರುವ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಬ್ಯಾಗ್ಗಳನ್ನು ಪರಿಶೀಲಿಸುತ್ತಿರುವುದು ಸರಿಯಷ್ಟೇ. ಈಗ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಬೇಕಿದೆ. ಸಾರ್ವಜನಿಕರ ಭೇಟಿಗಾಗಿ ಅವಧಿ ನಿಗದಿಪಡಿಸಿ, ಆ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಬೇಕು. ಲೋಹ ಶೋಧಕ ಯಂತ್ರದ ಮೂಲಕ ಪ್ರತಿಯೊಬ್ಬರ ತಪಾಸಣೆ ಮಾಡಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.