ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಚಿಂತಾಮಣಿ ಕ್ಷೇತ್ರದಲ್ಲಿ 60 ವರ್ಷಗಳಿಂದ ಆಂಜನೇಯ ರೆಡ್ಡಿ ಮತ್ತು ಗಂಗೀರೆಡ್ಡಿ ಕುಟುಂಬದವರೇ ಜನಪ್ರತಿನಿಧಿಗಳಾಗಿದ್ದಾರೆ. ಕ್ಷೇತ್ರಾಭಿವೃದ್ಧಿ ಮಾಡದೆ ತಮ್ಮ ಐಶ್ವರ್ಯಾಭಿವೃದ್ಧಿ ಮಾಡಿಕೊಂಡಿದ್ದಾರೆ. ಜಾತಿ ರಾಜಕೀಯ ಮಾಡುತ್ತಿರುವ ಅವರು ದಲಿತರನ್ನು ಕಡೆಗಣಿಸಿದ್ದಾರೆ’ ಎಂದು ಆರೋಪಿಸಿದರು.