<p>ಆಲಮಟ್ಟಿ (ವಿಜಾಪುರ ಜಿಲ್ಲೆ): ಮಲಘಾಣದಲ್ಲಿ ಒಂದೇ ವರ್ಷದಲ್ಲಿ 25 ಬಾರಿ ಭೂಕಂಪವಾಗಿದ್ದು, ಮಲಘಾಣ ಸುತ್ತಮುತ್ತಲಿನ ಪ್ರದೇಶದ ಅಧ್ಯಯನ, ಜನತೆ ಹಾಗೂ ಅಧಿಕಾರಿಗಳ ಜೊತೆ ಸಂವಾದ ನಡೆಸಲು ಉನ್ನತ ಮಟ್ಟದ ಅಧ್ಯಯನ ಸಮಿತಿಯೊಂದು ಫೆ. 14ರಂದು ವಿಜಾಪುರ ಜಿಲ್ಲೆಗೆ ಆಗಮಿಸಲಿದೆ.<br /> <br /> “ಕಳೆದ ವರ್ಷ ಮೇ ತಿಂಗಳಿನಲ್ಲಿಯೇ ವಿಜ್ಞಾನಿಗಳ ತಂಡ ಭೂಕಂಪ ಬಾಧಿತ ಸ್ಥಳಕ್ಕೆ ತೆರಳಿ ಸೂಕ್ತ ಅಧ್ಯಯನ ನಡೆಸಿದೆ. <br /> ಅದಾಗ್ಯೂ ಮೇಲಿಂದ ಮೇಲೆ ಭೂಕಂಪ ಸಂಭವಿಸುತ್ತಿದೆ. ಈ ಬಗ್ಗೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭೂಕಂಪನದ ಕಾರಣದ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಘಟನೆಯ ಸತ್ಯಾಸತ್ಯತೆ ತಿಳಿಸಲಿದ್ದಾರೆ” ಎಂದು ಕರ್ನಾಟಕ ಪ್ರಕೃತಿ ವಿಕೋಪ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ ಅವರು ‘ಪ್ರಜಾವಾಣಿ’ ಪ್ರತಿನಿಧಿಗೆ ತಿಳಿಸಿದ್ದಾರೆ.<br /> <br /> ಜನರ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಜಿಲ್ಲಾಡಳಿತ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ. ಸುಮಾರು 14 ಜನರನ್ನೊಳಗೊಂಡ ಉನ್ನತ ಮಟ್ಟದ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲಮಟ್ಟಿ (ವಿಜಾಪುರ ಜಿಲ್ಲೆ): ಮಲಘಾಣದಲ್ಲಿ ಒಂದೇ ವರ್ಷದಲ್ಲಿ 25 ಬಾರಿ ಭೂಕಂಪವಾಗಿದ್ದು, ಮಲಘಾಣ ಸುತ್ತಮುತ್ತಲಿನ ಪ್ರದೇಶದ ಅಧ್ಯಯನ, ಜನತೆ ಹಾಗೂ ಅಧಿಕಾರಿಗಳ ಜೊತೆ ಸಂವಾದ ನಡೆಸಲು ಉನ್ನತ ಮಟ್ಟದ ಅಧ್ಯಯನ ಸಮಿತಿಯೊಂದು ಫೆ. 14ರಂದು ವಿಜಾಪುರ ಜಿಲ್ಲೆಗೆ ಆಗಮಿಸಲಿದೆ.<br /> <br /> “ಕಳೆದ ವರ್ಷ ಮೇ ತಿಂಗಳಿನಲ್ಲಿಯೇ ವಿಜ್ಞಾನಿಗಳ ತಂಡ ಭೂಕಂಪ ಬಾಧಿತ ಸ್ಥಳಕ್ಕೆ ತೆರಳಿ ಸೂಕ್ತ ಅಧ್ಯಯನ ನಡೆಸಿದೆ. <br /> ಅದಾಗ್ಯೂ ಮೇಲಿಂದ ಮೇಲೆ ಭೂಕಂಪ ಸಂಭವಿಸುತ್ತಿದೆ. ಈ ಬಗ್ಗೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭೂಕಂಪನದ ಕಾರಣದ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಘಟನೆಯ ಸತ್ಯಾಸತ್ಯತೆ ತಿಳಿಸಲಿದ್ದಾರೆ” ಎಂದು ಕರ್ನಾಟಕ ಪ್ರಕೃತಿ ವಿಕೋಪ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ ಅವರು ‘ಪ್ರಜಾವಾಣಿ’ ಪ್ರತಿನಿಧಿಗೆ ತಿಳಿಸಿದ್ದಾರೆ.<br /> <br /> ಜನರ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಜಿಲ್ಲಾಡಳಿತ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ. ಸುಮಾರು 14 ಜನರನ್ನೊಳಗೊಂಡ ಉನ್ನತ ಮಟ್ಟದ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>