ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ನೀಡೆವು: ನಿರಾಣಿ ಸ್ಪಷ್ಟನೆ

Last Updated 4 ಸೆಪ್ಟೆಂಬರ್ 2011, 20:05 IST
ಅಕ್ಷರ ಗಾತ್ರ

ಬೆಂಗಳೂರು: ಪಾಷ್ ಸ್ಪೇಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಕಂಪೆನಿಗೆ ನೀಡಿರುವ ಭೂಮಿಯನ್ನು ಬೇರೆ ಯಾವುದೇ ಕಂಪೆನಿಗೆ ನೀಡುವುದಿಲ್ಲ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ಪಾಷ್ ಕಂಪೆನಿಗೆ ನೀಡಲಾದ ಭೂಮಿಯನ್ನು ನಿರಾಣಿ ಅವರು ಪ್ರೈಸಾಕ್ ಹೌಸಿಂಗ್ ಕನ್‌ಸ್ಟ್ರಕ್ಷನ್ ಲಿಮಿಟೆಡ್ ಕಂಪೆನಿಗೆ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿರುವ ಕುರಿತು `ಪ್ರಜಾವಾಣಿ~ಯಲ್ಲಿ ಭಾನುವಾರ ವರದಿ ಪ್ರಕಟವಾಗಿತ್ತು.

`ಪಾಷ್ ಕಂಪೆನಿಗೆ ನೀಡಲಾದ ಭೂಮಿಯನ್ನು ಬೇರೆ ಯಾವುದೇ ಕಂಪೆನಿಗೆ ಹಸ್ತಾಂತರಿಸಿಲ್ಲ~ ಎಂದು ನಿರಾಣಿ ಅವರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. `ದೊಡ್ಡತೋಗೂರಿನಲ್ಲಿ ಪಾಷ್ ಕಂಪೆನಿಗೆ ನೀಡಲಾದ ಭೂಮಿಯಲ್ಲೇ ಪ್ರೈಸಾಕ್ ಕಂಪೆನಿಯು ಯೋಜನೆಯೊಂದನ್ನು ಕೈಗೆತ್ತಿಕೊಳ್ಳಲು ಮುಂದಾಗಿತ್ತು. ಆದರೆ ಪ್ರೈಸಾಕ್‌ನ  ಈ ಪ್ರಸ್ತಾವ ತಿರಸ್ಕರಿಸಲಾಗಿದೆ~ ಎಂದು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT