<p><strong>ನೆಲಮಂಗಲ:</strong> ತಾಲ್ಲೂಕಿನ ಮಾಚೋನಾಯಕನಹಳ್ಳಿ, ನರಸಿಂಹಯ್ಯನಪಾಳ್ಯ, ಅಹೋಬಲಪಾಳ್ಯದ ರೈತರ ಜಮೀನುಗಳನ್ನು ಗೃಹ ಮಂಡಳಿಯವರು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದ್ದು, ಈ ಸಂಬಂಧ ಸ್ಥಳ ಪರಿಶೀಲನೆಗಾಗಿ ಬಂದಿದ್ದ ಗೃಹಮಂಡಳಿ ಅಧಿಕಾರಿಗಳ ತಂಡಕ್ಕೆ ರೈತರು ದಿಗ್ಬಂಧನ ಹಾಕಿದ ಘಟನೆ ನಡೆದಿದೆ.<br /> <br /> ಗೃಹ ಮಂಡಳಿ ಸಹಾಯಕ ನಿರ್ದೆಶಕ ವೀರೇಂದ್ರನಾಥ್, ಕಾರ್ಯನಿರ್ವಹಣಾಧಿಕಾರಿ ಅರುಣ್ಕುಮಾರ್, ಎಂಜಿನಿಯರ್ ಗುರುಪ್ರಸಾದ್, ಭೂಸ್ವಾಧೀನಾಧಿಕಾರಿ ಶಿವಯ್ಯ, ಸರ್ವೇಯರ್ ಚೌಡಯ್ಯ ನೇತೃತ್ವದ ತಂಡ ಮಾಚೋನಾಯಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಆಗಮಿಸಿತ್ತು. ಈ ವೇಳೆ ರೈತರು ದಿಗ್ಬಂದನ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಈ ಹಿಂದೆ ಕೆಐಎಡಿಬಿ ಸ್ವಾಧೀನಪಡಿಸಿಕೊಂಡ 250 ಎಕರೆ ಜಮೀನಿಗೆ ಹೊಂದಿಕೊಂಡಿರುವ 350 ಎಕರೆ ಕೃಷಿ ಜಮೀನನ್ನು ಗೃಹ ಮಂಡಳಿಯವರು ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ.</p>.<p>ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿರುವ ಪಕ್ಕದಲ್ಲೇ ರಿಯಲ್ ಎಸ್ಟೇಟ್ ಕಂಪೆನಿಗೆ ಸೇರಿದ 100 ಎಕರೆ ಜಮೀನಿದೆ. ಸ್ವಾಧೀನ ಪ್ರಕ್ರಿಯೆಯ ಹಿಂದೆ ಪ್ರಭಾವಿಗಳ ಕೈವಾಡವಿದೆ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು' ಎಂದು ರೈತರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ತಾಲ್ಲೂಕಿನ ಮಾಚೋನಾಯಕನಹಳ್ಳಿ, ನರಸಿಂಹಯ್ಯನಪಾಳ್ಯ, ಅಹೋಬಲಪಾಳ್ಯದ ರೈತರ ಜಮೀನುಗಳನ್ನು ಗೃಹ ಮಂಡಳಿಯವರು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದ್ದು, ಈ ಸಂಬಂಧ ಸ್ಥಳ ಪರಿಶೀಲನೆಗಾಗಿ ಬಂದಿದ್ದ ಗೃಹಮಂಡಳಿ ಅಧಿಕಾರಿಗಳ ತಂಡಕ್ಕೆ ರೈತರು ದಿಗ್ಬಂಧನ ಹಾಕಿದ ಘಟನೆ ನಡೆದಿದೆ.<br /> <br /> ಗೃಹ ಮಂಡಳಿ ಸಹಾಯಕ ನಿರ್ದೆಶಕ ವೀರೇಂದ್ರನಾಥ್, ಕಾರ್ಯನಿರ್ವಹಣಾಧಿಕಾರಿ ಅರುಣ್ಕುಮಾರ್, ಎಂಜಿನಿಯರ್ ಗುರುಪ್ರಸಾದ್, ಭೂಸ್ವಾಧೀನಾಧಿಕಾರಿ ಶಿವಯ್ಯ, ಸರ್ವೇಯರ್ ಚೌಡಯ್ಯ ನೇತೃತ್ವದ ತಂಡ ಮಾಚೋನಾಯಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಆಗಮಿಸಿತ್ತು. ಈ ವೇಳೆ ರೈತರು ದಿಗ್ಬಂದನ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಈ ಹಿಂದೆ ಕೆಐಎಡಿಬಿ ಸ್ವಾಧೀನಪಡಿಸಿಕೊಂಡ 250 ಎಕರೆ ಜಮೀನಿಗೆ ಹೊಂದಿಕೊಂಡಿರುವ 350 ಎಕರೆ ಕೃಷಿ ಜಮೀನನ್ನು ಗೃಹ ಮಂಡಳಿಯವರು ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ.</p>.<p>ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿರುವ ಪಕ್ಕದಲ್ಲೇ ರಿಯಲ್ ಎಸ್ಟೇಟ್ ಕಂಪೆನಿಗೆ ಸೇರಿದ 100 ಎಕರೆ ಜಮೀನಿದೆ. ಸ್ವಾಧೀನ ಪ್ರಕ್ರಿಯೆಯ ಹಿಂದೆ ಪ್ರಭಾವಿಗಳ ಕೈವಾಡವಿದೆ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು' ಎಂದು ರೈತರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>