<p><strong>ಬೆಂಗಳೂರು</strong>: ‘ಸೈದ್ಧಾಂತಿಕ ವಿಚಾರಧಾರೆಗಳಲ್ಲಿ ಸಾಕಷ್ಟು ಭಿನ್ನಾಭಿಪ್ರಾಯವಿದ್ದರೂ, ನೇರನುಡಿ ಮತ್ತು ಆಡುವ ಮಾತಿಗೆ ಬದ್ಧವಾಗಿರುವ ಪಾರದರ್ಶಕ ಗುಣದಿಂದಾಗಿ ಸಾಹಿತಿ ಎಸ್.ಎಲ್. ಭೈರಪ್ಪ ಅವರನ್ನು ಮೆಚ್ಚುತ್ತೇನೆ’ ಎಂದು ಹಿರಿಯ ವಿಮರ್ಶಕ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಡಾ.ನರಹಳ್ಳಿ ಪ್ರತಿಷ್ಠಾನ ಮತ್ತು ಕನ್ನಡ ಜನಶಕ್ತಿ ಕೇಂದ್ರ ಜಂಟಿಯಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕವಿ ಟಿ.ಯಲ್ಲಪ್ಪ ಅವರಿಗೆ ‘ನರಹಳ್ಳಿ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಇತ್ತೀಚಿನ ದಿನಗಳಲ್ಲಿ ಸಾಹಿತಿಗಳಲ್ಲಿ ನುಡಿದಂತೆ ನಡೆಯದ ಇಬ್ಬಂದಿತನ ಹೆಚ್ಚಾಗುತ್ತಿದೆ. ಆದ್ದರಿಂದ, ಟೀಕೆಗಳು ಕೇಳಿ ಬರುತ್ತಿವೆ. ಬರೆಯುವವರ ಬದುಕು, ಬರಹ ಮಾತ್ರವಲ್ಲ, ಆಡುವ ಮಾತೂ ಪಾರದರ್ಶಕವಾಗಿರಬೇಕು. ಸಾಹಿತಿಯಾದವನಲ್ಲಿ ವೇದಿಕೆ ಮೇಲೆ ತನಗನಿಸಿದ್ದನ್ನು ನೇರವಾಗಿ ಹೇಳುವ ಧೈರ್ಯವಿರಬೇಕು’ ಎಂದರು.<br /> <br /> ಪ್ರತಿಷ್ಠಾನದ ಅಧ್ಯಕ್ಷ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಮಾತನಾಡಿ, ‘ನಿಜವಾದ ಕವಿಯಲ್ಲಿ ಗಾಯವನ್ನು ಕೂಡ ಗಾಯನವನ್ನಾಗಿ ಪರಿವರ್ತಿಸುವ ಶಕ್ತಿ ಇರುತ್ತದೆ. ಈ ಗುಣ ಯಲ್ಲಪ್ಪ ಅವರ ಕಾವ್ಯದಲ್ಲಿ ಕಾಣಬಹುದು’ ಎಂದು ಹೇಳಿದರು.<br /> <br /> ಪ್ರಶಸ್ತಿ ಸ್ವೀಕರಿಸಿದ ಕವಿ ಟಿ. ಯಲ್ಲಪ್ಪ ಮಾತನಾಡಿ, ‘ದಲಿತ ಸಮುದಾಯವನ್ನು ಶೋಷಣೆ ಮಾಡಿದವರ ವಿರುದ್ಧ ಸಮರ ಸಾರದ ನಾನು, ಅವರೇ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕವಿತೆಗಳನ್ನು ರಚನೆ ಮಾಡಲು ಆರಂಭಿಸಿದೆ. ನನ್ನ ಕಾವ್ಯ ಕೃಷಿಯ ಆರಂಭದಿಂದಲೂ ಮೇಲ್ವರ್ಗದ ಅನೇಕರು ಬೆನ್ನು ತಟ್ಟುತ್ತಲೇ ಬಂದಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸೈದ್ಧಾಂತಿಕ ವಿಚಾರಧಾರೆಗಳಲ್ಲಿ ಸಾಕಷ್ಟು ಭಿನ್ನಾಭಿಪ್ರಾಯವಿದ್ದರೂ, ನೇರನುಡಿ ಮತ್ತು ಆಡುವ ಮಾತಿಗೆ ಬದ್ಧವಾಗಿರುವ ಪಾರದರ್ಶಕ ಗುಣದಿಂದಾಗಿ ಸಾಹಿತಿ ಎಸ್.ಎಲ್. ಭೈರಪ್ಪ ಅವರನ್ನು ಮೆಚ್ಚುತ್ತೇನೆ’ ಎಂದು ಹಿರಿಯ ವಿಮರ್ಶಕ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಡಾ.ನರಹಳ್ಳಿ ಪ್ರತಿಷ್ಠಾನ ಮತ್ತು ಕನ್ನಡ ಜನಶಕ್ತಿ ಕೇಂದ್ರ ಜಂಟಿಯಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕವಿ ಟಿ.ಯಲ್ಲಪ್ಪ ಅವರಿಗೆ ‘ನರಹಳ್ಳಿ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಇತ್ತೀಚಿನ ದಿನಗಳಲ್ಲಿ ಸಾಹಿತಿಗಳಲ್ಲಿ ನುಡಿದಂತೆ ನಡೆಯದ ಇಬ್ಬಂದಿತನ ಹೆಚ್ಚಾಗುತ್ತಿದೆ. ಆದ್ದರಿಂದ, ಟೀಕೆಗಳು ಕೇಳಿ ಬರುತ್ತಿವೆ. ಬರೆಯುವವರ ಬದುಕು, ಬರಹ ಮಾತ್ರವಲ್ಲ, ಆಡುವ ಮಾತೂ ಪಾರದರ್ಶಕವಾಗಿರಬೇಕು. ಸಾಹಿತಿಯಾದವನಲ್ಲಿ ವೇದಿಕೆ ಮೇಲೆ ತನಗನಿಸಿದ್ದನ್ನು ನೇರವಾಗಿ ಹೇಳುವ ಧೈರ್ಯವಿರಬೇಕು’ ಎಂದರು.<br /> <br /> ಪ್ರತಿಷ್ಠಾನದ ಅಧ್ಯಕ್ಷ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಮಾತನಾಡಿ, ‘ನಿಜವಾದ ಕವಿಯಲ್ಲಿ ಗಾಯವನ್ನು ಕೂಡ ಗಾಯನವನ್ನಾಗಿ ಪರಿವರ್ತಿಸುವ ಶಕ್ತಿ ಇರುತ್ತದೆ. ಈ ಗುಣ ಯಲ್ಲಪ್ಪ ಅವರ ಕಾವ್ಯದಲ್ಲಿ ಕಾಣಬಹುದು’ ಎಂದು ಹೇಳಿದರು.<br /> <br /> ಪ್ರಶಸ್ತಿ ಸ್ವೀಕರಿಸಿದ ಕವಿ ಟಿ. ಯಲ್ಲಪ್ಪ ಮಾತನಾಡಿ, ‘ದಲಿತ ಸಮುದಾಯವನ್ನು ಶೋಷಣೆ ಮಾಡಿದವರ ವಿರುದ್ಧ ಸಮರ ಸಾರದ ನಾನು, ಅವರೇ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕವಿತೆಗಳನ್ನು ರಚನೆ ಮಾಡಲು ಆರಂಭಿಸಿದೆ. ನನ್ನ ಕಾವ್ಯ ಕೃಷಿಯ ಆರಂಭದಿಂದಲೂ ಮೇಲ್ವರ್ಗದ ಅನೇಕರು ಬೆನ್ನು ತಟ್ಟುತ್ತಲೇ ಬಂದಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>