ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪ ಸಚಿವರನ್ನು ಉಚ್ಚಾಟಿಸಿ

Last Updated 15 ಅಕ್ಟೋಬರ್ 2011, 19:45 IST
ಅಕ್ಷರ ಗಾತ್ರ

ಬೆಂಗಳೂರು: `ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಜೆಪಿ ಸರ್ಕಾರದ ಸಚಿವರು ಹಾಗೂ ಶಾಸಕರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು~ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಹಲವು ಸಚಿವರು, ಶಾಸಕರು ಅಕ್ರಮಗಳ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಕೆಲ ಸಚಿವರು ಜೈಲಿನಲ್ಲಿದ್ದಾರೆ. ಪಕ್ಷಕ್ಕೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ವಜಾ ಮಾಡಬೇಕು~ ಎಂದು ಕಿಡಿಕಾರಿದರು.

`ಜನ ಚೇತನ ಯಾತ್ರೆ ಕೈಗೊಂಡಿರುವ ಅಡ್ವಾಣಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕ ಹಕ್ಕಿಲ್ಲ. ರಾಜ್ಯದಲ್ಲಿ ಅವರದೇ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿದೆ~ ಎಂದು ದೂರಿದರು.

ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಕೆಲ ಅಂಶಗಳ ಕುರಿತು ಸ್ಪಷ್ಟನೆ ಕೇಳಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT