<p>ಬೆಂಗಳೂರು: ‘ಇತ್ತೀಚೆಗೆ ಕನ್ನಡಿಗರ ಸ್ವಾಭಿಮಾನ ಮಂಕಾಗಿ, ಇಂಗ್ಲಿಷ್ ವ್ಯಾಮೋಹ ಹೆಚ್ಚುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ’ ಎಂದು ಹಿರಿಯ ಕವಿ ಚೆನ್ನವೀರ ಕಣವಿ ಆತಂಕ ವ್ಯಕ್ತಪಡಿಸಿದರು.<br /> <br /> ಗೋಕಾಕ್ ಚಳವಳಿಗೆ 33 ವರ್ಷ ತುಂಬಿದ ನೆನಪಿಗಾಗಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯು ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಗೋಕಾಕ್ ಚಳವಳಿ –33, ಸ್ಮರಣೆ ಮತ್ತು ಪ್ರೇರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ನಮ್ಮ ಮಕ್ಕಳಿಗೆ ಕನ್ನಡದ ಸಂಸ್ಕಾರ ಸಿಗುತ್ತಿಲ್ಲ. ಕನ್ನಡ ಭಾಷೆ ತುಳಿತಕ್ಕೆ ಒಳಗಾಗಿದೆ. ಕನ್ನಡದ ಉಳಿವಿಗಾಗಿ ಕನ್ನಡಿಗರೆಲ್ಲರೂ ಕನ್ನಡದ ಕಾವಲುನಾಯಿಗಳಾಗಬೇಕಿದೆ. ಕನ್ನಡಕ್ಕಾಗಿ ಕನ್ನಡಿಗರೆಲ್ಲರೂ ಒಂದಾಗಬೇಕಿದೆ’ ಎಂದರು.<br /> <br /> ‘ಗೋಕಾಕ್ ಚಳವಳಿಗೆ ನಟ ಡಾ.ರಾಜ್ಕುಮಾರ್ ಪ್ರವೇಶಿಸಿದ ಬಳಿಕ ಚಳವಳಿಯ ಸ್ವರೂಪ ತೀವ್ರವಾಯಿತು. ಗೋಕಾಕ್ ಚಳವಳಿಯ ಯಶಸ್ಸಿನ ಬಹುಪಾಲು ಶ್ರೇಯಸ್ಸು ಡಾ.ರಾಜ್ಕುಮಾರ್ ಅವರಿಗೆ ಸಲ್ಲಬೇಕು’ ಎಂದು ಹೇಳಿದರು.<br /> <br /> ‘ಕನ್ನಡದ ಹೋರಾಟದಲ್ಲಿ ಪಾಲ್ಗೊಳ್ಳುವ ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಸ್ಥೂಲ ಪರಿಚಯವಾದರೂ ಇರಬೇಕು. ಇದಕ್ಕಾಗಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯು ಒಂದು ತರಬೇತಿ ಶಾಲೆ ಆರಂಭಿಸಬೇಕು’ ಎಂದು ಸಲಹೆ ನೀಡಿದರು.<br /> <br /> ವೇದಿಕೆಯ ಅಧ್ಯಕ್ಷ ಹಾಗೂ ಸಾಹಿತಿ ಚಂದ್ರಶೇಖರ ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಕನ್ನಡ ಭಾಷೆ ಬದುಕಿದ್ದರೆ ಅದು ಕನ್ನಡ ಸಂಘಟನೆಗಳ ಕಾರ್ಯಕರ್ತರಿಂದ ಮಾತ್ರ. ಕನ್ನಡದ ಉಳಿವು ಹಾಗೂ ಬೆಳವಣಿಗೆಯ ಹೋರಾಟಕ್ಕೆ ಸಂಘಟನೆಗಳು ಒಗ್ಗೂಡಬೇಕು’ ಎಂದರು.<br /> <br /> ‘ರಾಜ್ಯದಲ್ಲಿ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಪಠ್ಯದಲ್ಲಿ ಸೇರಿಸಲು ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಮತ್ತು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉತ್ಸುಕರಾಗಿದ್ದರು. ಈ ವಿಚಾರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ವಿ.ಕೃ.ಗೋಕಾಕ್ ಅವರ ನೇತೃತ್ವದಲ್ಲಿ ಸಮಿತಿ ನೇಮಿಸ ಲಾಗಿತ್ತು. ವಿ.ಕೃ.ಗೋಕಾಕ್ ಧಾರ ವಾಡಕ್ಕೆ ಬಂದಿದ್ದಾಗ ಗೋಕಾಕ್– ಗೋಬ್ಯಾಕ್ ಎಂಬ ಘೋಷಣೆಯಡಿ ಪ್ರತಿಭಟನೆ ನಡೆಸಿದೆವು’ ಎಂದರು.<br /> <br /> ‘ಆನಂತರ ಗೋಕಾಕರು ಕನ್ನಡದ ಪರವಾಗಿ ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಲು ವಿಳಂಬ ಧೋರಣೆ ಅನುಸರಿಸುತ್ತಿತ್ತು. ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದ ಶಂಬಾಜೋಶಿಯವರ ನೇತೃತ್ವದಲ್ಲಿ ಚಳವಳಿ ಆರಂಭಿಸಲಾಯಿತು’ ಎಂದು ಹೇಳಿದರು.<br /> <br /> ಚಂದ್ರಶೇಖರ ಪಾಟೀಲ ಅವರ ‘ಗೋಕಾಕ್ ಗೋಬ್ಯಾಕ್’ ಕೃತಿಯನ್ನು ಚೆನ್ನವೀರ ಕಣವಿ ಬಿಡುಗಡೆಗೊಳಿಸಿದರು. ಸಂಕ್ರಮಣ ಪ್ರಕಾಶನ ಹೊರತಂದಿರುವ ಪುಸ್ತಕದ ಬೆಲೆ ₨ 50.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಇತ್ತೀಚೆಗೆ ಕನ್ನಡಿಗರ ಸ್ವಾಭಿಮಾನ ಮಂಕಾಗಿ, ಇಂಗ್ಲಿಷ್ ವ್ಯಾಮೋಹ ಹೆಚ್ಚುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ’ ಎಂದು ಹಿರಿಯ ಕವಿ ಚೆನ್ನವೀರ ಕಣವಿ ಆತಂಕ ವ್ಯಕ್ತಪಡಿಸಿದರು.<br /> <br /> ಗೋಕಾಕ್ ಚಳವಳಿಗೆ 33 ವರ್ಷ ತುಂಬಿದ ನೆನಪಿಗಾಗಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯು ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಗೋಕಾಕ್ ಚಳವಳಿ –33, ಸ್ಮರಣೆ ಮತ್ತು ಪ್ರೇರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ನಮ್ಮ ಮಕ್ಕಳಿಗೆ ಕನ್ನಡದ ಸಂಸ್ಕಾರ ಸಿಗುತ್ತಿಲ್ಲ. ಕನ್ನಡ ಭಾಷೆ ತುಳಿತಕ್ಕೆ ಒಳಗಾಗಿದೆ. ಕನ್ನಡದ ಉಳಿವಿಗಾಗಿ ಕನ್ನಡಿಗರೆಲ್ಲರೂ ಕನ್ನಡದ ಕಾವಲುನಾಯಿಗಳಾಗಬೇಕಿದೆ. ಕನ್ನಡಕ್ಕಾಗಿ ಕನ್ನಡಿಗರೆಲ್ಲರೂ ಒಂದಾಗಬೇಕಿದೆ’ ಎಂದರು.<br /> <br /> ‘ಗೋಕಾಕ್ ಚಳವಳಿಗೆ ನಟ ಡಾ.ರಾಜ್ಕುಮಾರ್ ಪ್ರವೇಶಿಸಿದ ಬಳಿಕ ಚಳವಳಿಯ ಸ್ವರೂಪ ತೀವ್ರವಾಯಿತು. ಗೋಕಾಕ್ ಚಳವಳಿಯ ಯಶಸ್ಸಿನ ಬಹುಪಾಲು ಶ್ರೇಯಸ್ಸು ಡಾ.ರಾಜ್ಕುಮಾರ್ ಅವರಿಗೆ ಸಲ್ಲಬೇಕು’ ಎಂದು ಹೇಳಿದರು.<br /> <br /> ‘ಕನ್ನಡದ ಹೋರಾಟದಲ್ಲಿ ಪಾಲ್ಗೊಳ್ಳುವ ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಸ್ಥೂಲ ಪರಿಚಯವಾದರೂ ಇರಬೇಕು. ಇದಕ್ಕಾಗಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯು ಒಂದು ತರಬೇತಿ ಶಾಲೆ ಆರಂಭಿಸಬೇಕು’ ಎಂದು ಸಲಹೆ ನೀಡಿದರು.<br /> <br /> ವೇದಿಕೆಯ ಅಧ್ಯಕ್ಷ ಹಾಗೂ ಸಾಹಿತಿ ಚಂದ್ರಶೇಖರ ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಕನ್ನಡ ಭಾಷೆ ಬದುಕಿದ್ದರೆ ಅದು ಕನ್ನಡ ಸಂಘಟನೆಗಳ ಕಾರ್ಯಕರ್ತರಿಂದ ಮಾತ್ರ. ಕನ್ನಡದ ಉಳಿವು ಹಾಗೂ ಬೆಳವಣಿಗೆಯ ಹೋರಾಟಕ್ಕೆ ಸಂಘಟನೆಗಳು ಒಗ್ಗೂಡಬೇಕು’ ಎಂದರು.<br /> <br /> ‘ರಾಜ್ಯದಲ್ಲಿ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಪಠ್ಯದಲ್ಲಿ ಸೇರಿಸಲು ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಮತ್ತು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉತ್ಸುಕರಾಗಿದ್ದರು. ಈ ವಿಚಾರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ವಿ.ಕೃ.ಗೋಕಾಕ್ ಅವರ ನೇತೃತ್ವದಲ್ಲಿ ಸಮಿತಿ ನೇಮಿಸ ಲಾಗಿತ್ತು. ವಿ.ಕೃ.ಗೋಕಾಕ್ ಧಾರ ವಾಡಕ್ಕೆ ಬಂದಿದ್ದಾಗ ಗೋಕಾಕ್– ಗೋಬ್ಯಾಕ್ ಎಂಬ ಘೋಷಣೆಯಡಿ ಪ್ರತಿಭಟನೆ ನಡೆಸಿದೆವು’ ಎಂದರು.<br /> <br /> ‘ಆನಂತರ ಗೋಕಾಕರು ಕನ್ನಡದ ಪರವಾಗಿ ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಲು ವಿಳಂಬ ಧೋರಣೆ ಅನುಸರಿಸುತ್ತಿತ್ತು. ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದ ಶಂಬಾಜೋಶಿಯವರ ನೇತೃತ್ವದಲ್ಲಿ ಚಳವಳಿ ಆರಂಭಿಸಲಾಯಿತು’ ಎಂದು ಹೇಳಿದರು.<br /> <br /> ಚಂದ್ರಶೇಖರ ಪಾಟೀಲ ಅವರ ‘ಗೋಕಾಕ್ ಗೋಬ್ಯಾಕ್’ ಕೃತಿಯನ್ನು ಚೆನ್ನವೀರ ಕಣವಿ ಬಿಡುಗಡೆಗೊಳಿಸಿದರು. ಸಂಕ್ರಮಣ ಪ್ರಕಾಶನ ಹೊರತಂದಿರುವ ಪುಸ್ತಕದ ಬೆಲೆ ₨ 50.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>