<p>ಬೆಂಗಳೂರು: ಪೀಣ್ಯ ಸಮೀಪದ ಪೈಪ್ಲೈನ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಟಿ.ಕೆ.ಹರೀಶ್ (35) ಎಂಬುವರು ನೇಣು ಹಾಕಿಕೊಂಡಿದ್ದು, ರವೀಂದ್ರನಗರದಲ್ಲಿ ಹನುಮಂತಪ್ಪ (42) ಎಂಬ ಪೇಂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ತುಮಕೂರಿನವರಾದ ಹರೀಶ್, ಪೀಣ್ಯದ ಕಾರ್ಖಾನೆಯೊಂದ-ರಲ್ಲಿ ಕೆಲಸ ಮಾಡುತ್ತಿದ್ದರು. ಹತ್ತು ವರ್ಷಗಳ ಹಿಂದೆ ಪದ್ಮಾವತಿ ಎಂಬುವರನ್ನು ವಿವಾಹವಾಗಿದ್ದ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಹರೀಶ್, ಶುಕ್ರವಾರ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.<br /> <br /> ‘ಎರಡು ವರ್ಷದ ಮಗ ಚಿನ್ಮಯ್ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ಮಾಡಿಸಿದರೂ ಆತ ಗುಣಮುಖನಾಗಿರಲಿಲ್ಲ. ವೈದ್ಯರು ಪುನಃ ಶಸ್ತ್ರಚಿಕಿತ್ಸೆ ಮಾಡಬೇಕು ಎಂದಿದ್ದರು. ಮೊದಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಪತಿ, ಈ ವಿಚಾರ ತಿಳಿದು ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪದ್ಮಾವತಿ ಪೊಲೀಸರಿಗೆ ತಿಳಿಸಿದ್ದಾರೆ.<br /> <br /> ‘ರಾತ್ರಿ 8ರ ಸುಮಾರಿಗೆ ಮಗಳನ್ನು ಟ್ಯೂಷನ್ನಿಂದ ಮನೆಗೆ ಕರೆದುಕೊಂಡು ಬರಲು ಹೋಗಿದ್ದೆ. ವಾಪಸ್ ಬಂದಾಗ ಒಳಗಿನಿಂದ ಚಿಲಕ ಹಾಕಿತ್ತು. ಎಷ್ಟೇ ಬಾಗಿಲು ಬಡಿದರೂ ಪ್ರತಿಕ್ರಿಯೆ ಇರಲಿಲ್ಲ. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ನೋಡಿದಾಗ ಪತಿ ನೇಣು ಹಾಕಿಕೊಂಡಿದ್ದರು’ ಎಂದು ಪದ್ಮಾವತಿ ಹೇಳಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ: </strong>ರವೀಂದ್ರನಗರದ ನಾಲ್ಕನೇ ಅಡ್ಡರಸ್ತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹನುಮಂತಪ್ಪ ಮೂಲತಃ ಭದ್ರಾವತಿಯವರು. ಒಂದೂವರೆ ತಿಂಗಳ ಹಿಂದಷ್ಟೆ ನಗರಕ್ಕೆ ಬಂದಿದ್ದ ಅವರು, ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಅವರ ಪತ್ನಿ 15 ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದರು ಎಂದು ಪೀಣ್ಯ ಠಾಣೆಯ ಪೊಲೀಸರು ಹೇಳಿದ್ದಾರೆ.<br /> <br /> <strong>ವ್ಯಕ್ತಿ ಶವ ಪತ್ತೆ</strong>: ತುಮಕೂರು ರಸ್ತೆಯ ಜಾಲಹಳ್ಳಿ ಕ್ರಾಸ್ ಬಳಿ ಶ್ಯಾಮ್ (32) ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ.<br /> <br /> ಮೃತರು ಇದೇ 13ರಂದು ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅದರ ರಶೀದಿ ಜೇಬಿನಲ್ಲಿ ಪತ್ತೆಯಾಗಿದೆ. ಆದರೆ, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.<br /> <br /> ಶವವನ್ನು ಸಂಜೀವಿನಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತರ ಸಂಬಂಧಿಕರು ಠಾಣೆಯ ದೂರವಾಣಿ ಸಂಖ್ಯೆಗೆ (0-80---- ----2294-2532) ಕರೆ ಮಾಡಿ ಶವ ಪಡೆಯಬಹುದು ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪೀಣ್ಯ ಸಮೀಪದ ಪೈಪ್ಲೈನ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಟಿ.ಕೆ.ಹರೀಶ್ (35) ಎಂಬುವರು ನೇಣು ಹಾಕಿಕೊಂಡಿದ್ದು, ರವೀಂದ್ರನಗರದಲ್ಲಿ ಹನುಮಂತಪ್ಪ (42) ಎಂಬ ಪೇಂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ತುಮಕೂರಿನವರಾದ ಹರೀಶ್, ಪೀಣ್ಯದ ಕಾರ್ಖಾನೆಯೊಂದ-ರಲ್ಲಿ ಕೆಲಸ ಮಾಡುತ್ತಿದ್ದರು. ಹತ್ತು ವರ್ಷಗಳ ಹಿಂದೆ ಪದ್ಮಾವತಿ ಎಂಬುವರನ್ನು ವಿವಾಹವಾಗಿದ್ದ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಹರೀಶ್, ಶುಕ್ರವಾರ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.<br /> <br /> ‘ಎರಡು ವರ್ಷದ ಮಗ ಚಿನ್ಮಯ್ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ಮಾಡಿಸಿದರೂ ಆತ ಗುಣಮುಖನಾಗಿರಲಿಲ್ಲ. ವೈದ್ಯರು ಪುನಃ ಶಸ್ತ್ರಚಿಕಿತ್ಸೆ ಮಾಡಬೇಕು ಎಂದಿದ್ದರು. ಮೊದಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಪತಿ, ಈ ವಿಚಾರ ತಿಳಿದು ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪದ್ಮಾವತಿ ಪೊಲೀಸರಿಗೆ ತಿಳಿಸಿದ್ದಾರೆ.<br /> <br /> ‘ರಾತ್ರಿ 8ರ ಸುಮಾರಿಗೆ ಮಗಳನ್ನು ಟ್ಯೂಷನ್ನಿಂದ ಮನೆಗೆ ಕರೆದುಕೊಂಡು ಬರಲು ಹೋಗಿದ್ದೆ. ವಾಪಸ್ ಬಂದಾಗ ಒಳಗಿನಿಂದ ಚಿಲಕ ಹಾಕಿತ್ತು. ಎಷ್ಟೇ ಬಾಗಿಲು ಬಡಿದರೂ ಪ್ರತಿಕ್ರಿಯೆ ಇರಲಿಲ್ಲ. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ನೋಡಿದಾಗ ಪತಿ ನೇಣು ಹಾಕಿಕೊಂಡಿದ್ದರು’ ಎಂದು ಪದ್ಮಾವತಿ ಹೇಳಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ: </strong>ರವೀಂದ್ರನಗರದ ನಾಲ್ಕನೇ ಅಡ್ಡರಸ್ತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹನುಮಂತಪ್ಪ ಮೂಲತಃ ಭದ್ರಾವತಿಯವರು. ಒಂದೂವರೆ ತಿಂಗಳ ಹಿಂದಷ್ಟೆ ನಗರಕ್ಕೆ ಬಂದಿದ್ದ ಅವರು, ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಅವರ ಪತ್ನಿ 15 ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದರು ಎಂದು ಪೀಣ್ಯ ಠಾಣೆಯ ಪೊಲೀಸರು ಹೇಳಿದ್ದಾರೆ.<br /> <br /> <strong>ವ್ಯಕ್ತಿ ಶವ ಪತ್ತೆ</strong>: ತುಮಕೂರು ರಸ್ತೆಯ ಜಾಲಹಳ್ಳಿ ಕ್ರಾಸ್ ಬಳಿ ಶ್ಯಾಮ್ (32) ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ.<br /> <br /> ಮೃತರು ಇದೇ 13ರಂದು ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅದರ ರಶೀದಿ ಜೇಬಿನಲ್ಲಿ ಪತ್ತೆಯಾಗಿದೆ. ಆದರೆ, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.<br /> <br /> ಶವವನ್ನು ಸಂಜೀವಿನಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತರ ಸಂಬಂಧಿಕರು ಠಾಣೆಯ ದೂರವಾಣಿ ಸಂಖ್ಯೆಗೆ (0-80---- ----2294-2532) ಕರೆ ಮಾಡಿ ಶವ ಪಡೆಯಬಹುದು ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>