<p><strong>ಬೆಂಗಳೂರು: </strong>`ದೇಶದ ಮತದಾರರ ಮನಸ್ಥಿತಿ ಈಗಲಾದರೂ ಬದಲಾಗಬೇಕು. ಇಲ್ಲದಿದ್ದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹೆಚ್ಚುಕಾಲ ಉಳಿಯುವುದಿಲ್ಲ~ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.<br /> <br /> ಸರ್ವೋದಯ ಇಂಟರ್ನ್ಯಾಷನಲ್ ಟ್ರಸ್ಟ್ ನಗರದ ಸೆಂಟ್ರಲ್ ಕಾಲೇಜು ಬಳಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿನ ಉಪನ್ಯಾಸ ಕೊಠಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಮಾಧವ ಗೋಡ್ಬೋಲೆ ಅವರ `ಪ್ರಯೋಗದ ಹಾದಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವ~ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಪ್ರಜಾಪ್ರಭುತ್ವವೆಂದರೆ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಸರ್ಕಾರ ಎಂಬ ಜನಪ್ರಿಯ ಮಾತಿದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಕೆಲವರಿಂದ, ಕೆಲವರಿಗಾಗಿ, ಕೆಲವರಿಗೋಸ್ಕರ ಇರುವ ಸರ್ಕಾರ ಎಂಬಂತಾಗಿದೆ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಸಂಸತ್ನಲ್ಲಿ ಕೆಲವೇ ನಿಮಿಷಗಳಲ್ಲಿ ಮಹತ್ವದ ಮಸೂದೆಗಳ ಬಗ್ಗೆ ಚರ್ಚೆ ನಡೆಯದೇ ಅನುಮೋದನೆ ನೀಡಲಾಗುತ್ತದೆ. ಬಹುಪಾಲು ಸಂಸದರಿಗೆ ಮಸೂದೆಯ ಶೀರ್ಷಿಕೆಗಳು ಸಹ ಗೊತ್ತಿರುವುದಿಲ್ಲ. ಈ ರೀತಿ ನಡೆದರೆ ಪ್ರಜಾಪ್ರಭುತ್ವದ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವೇ ಇಲ್ಲ~ ಎಂದರು.<br /> <br /> `ಮಹತ್ವದ ವಿಷಯಗಳ ಬಗ್ಗೆ ಸಂಸತ್ನಲ್ಲಿ ಚರ್ಚೆ ನಡೆಯುತ್ತಿಲ್ಲ. ಹಾಗಾಗಿ ಜನಲೋಕಪಾಲ್ ಮಸೂದೆಯ ಬಗ್ಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚಿಂತಿಸುವಂತೆ ಮಾಡಲು ಗಾಂಧಿವಾಧಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸಬೇಕಾಯಿತು~ ಎಂದು ಹೇಳಿದರು.<br /> <br /> `ಮತದಾನ ಮಾಡುವುದು ಕಡ್ಡಾಯವಾಗಬೇಕು. ಬಹಳಷ್ಟು ಸಂಸದರು ಅಧಿವೇಶನದ ಸಂದರ್ಭದಲ್ಲಿ ಮಾತನಾಡುವುದೇ ಇಲ್ಲ. ಹಾಗಾಗಿ ಜನರಿಗೆ ಸ್ಪಂದಿಸದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಜನಪ್ರತಿನಿಧಿಯನ್ನು ವಾಪಸ್ ಕರೆಸಿಕೊಳ್ಳುವ ವ್ಯವಸ್ಥೆ ಬರಬೇಕು~ ಎಂದು ಅಭಿಪ್ರಾಯಪಟ್ಟರು.<br /> <br /> ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, `ಸಂವಿಧಾನದ ನೈತಿಕ ಮೌಲ್ಯಗಳನ್ನು ಪಾಲಿಸದಿದ್ದರೆ ಸಂವಿಧಾನದ ಆಶಯ ಈಡೇರುವುದಿಲ್ಲ. ಕೊನೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಕುಸಿದು ಬೀಳುವ ಅಪಾಯವಿದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಿದೆ~ ಎಂದರು.<br /> `ಕೇವಲ ರಾಜಕಾರಣಿಯ ಮನಸ್ಥಿತಿ ಬದಲಾದರಷ್ಟೇ ಸಾಲದು, ಮತದಾರರ ಮನೋಭಾವವು ಬದಲಾಗಬೇಕು~ ಎಂದು ಹೇಳಿದರು.<br /> <br /> ಮಾಧವ ಗೋಡ್ಬೋಲೆ ಮಾತನಾಡಿ, `ದೇಶದ ಸಾರ್ವಭೌಮತೆಯ ಪ್ರತೀಕದಂತಿರುವ ಸಂಸತ್ತಿನ ಮೌಲ್ಯ ಕುಸಿಯುತ್ತಿದ್ದು, ಅದರ ಪಾವಿತ್ರ್ಯ ಕಳೆದುಕೊಳ್ಳುತ್ತಿದೆ. ಈಚಿನ ವರ್ಷಗಳಲ್ಲಿ ವಾಣಿಜ್ಯೀಕರಣಗೊಂಡಂತಾಗಿದೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> `ಸಂಸತ್ನಲ್ಲಿ ಹಾಲಿ ವ್ಯವಸ್ಥೆಯನ್ನು ತುರ್ತಾಗಿ ಬದಲಾಯಿಸಬೇಕಿದೆ. ಇಂದಿನ ಪರಿಸ್ಥಿತಿಗೆ ಹೊಂದುವಂತಹ ಹಾಗೂ ಪ್ರಜಾಪ್ರಭುತ್ವದ ಉದ್ದೇಶ ಈಡೇರುವ ರೀತಿಯಲ್ಲಿ ಮಾರ್ಪಾಡು ಮಾಡಬೇಕಿದೆ~ ಎಂದರು.</p>.<p>`ಜನಲೋಕಪಾಲ್ ಮಸೂದೆ ಜಾರಿಯಿಂದ ಭ್ರಷ್ಟಾಚಾರ ನಿಯಂತ್ರಣವಾಗಲಿದೆ ಎಂಬ ಆಶಯವಿದೆ. ಆದರೆ ರಾಜಕಾರಣಿಯ ಮನಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಲಿದೆ ಎಂಬ ವಿಶ್ವಾಸವಿಲ್ಲ~ ಎಂದರು. <br /> <br /> ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟ್ ಪಿ.ಎ. ನಜರತ್, ಬೆಂಗಳೂರು ವಿ.ವಿ. ಕುಲಪತಿ ಡಾ.ಎನ್.ಪ್ರಭುದೇವ್, ವಿ.ವಿಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಎಸ್. ಜಯರಾಮು ಉಪಸ್ಥಿತರಿದ್ದರು.<br /> <br /> <strong>ರಾಮದೇವ್ಗೆ ಬೆಂಬಲ</strong><br /> `ಭ್ರಷ್ಟಾಚಾರದ ವಿರುದ್ಧ ಬಾಬಾ ರಾಮದೇವ್ ನಡೆಸುವ ಹೋರಾಟಕ್ಕೆ ನನ್ನ ಬೆಂಬಲವಿದೆ~ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಹೇಳಿದರು.`ನಾವು ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ರಚನೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಇಬ್ಬರ ಉದ್ದೇಶ ಒಂದೇ ಆಗಿರುವುದರಿಂದ ಯಾವುದೇ ತಿಕ್ಕಾಟವಿಲ್ಲ~ ಎಂದರು.<br /> <br /> `ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಅಂತಿಮ ವರದಿ ಸಿದ್ಧವಾಗುತ್ತಿದ್ದು, ಜೂನ್ ತಿಂಗಳ ಅಂತ್ಯದೊಳಗೆ ಸಲ್ಲಿಸಲಾಗುವುದು~ ಎಂದು ಸಂತೋಷ್ ಹೆಗ್ಡೆ ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ದೇಶದ ಮತದಾರರ ಮನಸ್ಥಿತಿ ಈಗಲಾದರೂ ಬದಲಾಗಬೇಕು. ಇಲ್ಲದಿದ್ದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹೆಚ್ಚುಕಾಲ ಉಳಿಯುವುದಿಲ್ಲ~ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.<br /> <br /> ಸರ್ವೋದಯ ಇಂಟರ್ನ್ಯಾಷನಲ್ ಟ್ರಸ್ಟ್ ನಗರದ ಸೆಂಟ್ರಲ್ ಕಾಲೇಜು ಬಳಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿನ ಉಪನ್ಯಾಸ ಕೊಠಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಮಾಧವ ಗೋಡ್ಬೋಲೆ ಅವರ `ಪ್ರಯೋಗದ ಹಾದಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವ~ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಪ್ರಜಾಪ್ರಭುತ್ವವೆಂದರೆ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಸರ್ಕಾರ ಎಂಬ ಜನಪ್ರಿಯ ಮಾತಿದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಕೆಲವರಿಂದ, ಕೆಲವರಿಗಾಗಿ, ಕೆಲವರಿಗೋಸ್ಕರ ಇರುವ ಸರ್ಕಾರ ಎಂಬಂತಾಗಿದೆ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಸಂಸತ್ನಲ್ಲಿ ಕೆಲವೇ ನಿಮಿಷಗಳಲ್ಲಿ ಮಹತ್ವದ ಮಸೂದೆಗಳ ಬಗ್ಗೆ ಚರ್ಚೆ ನಡೆಯದೇ ಅನುಮೋದನೆ ನೀಡಲಾಗುತ್ತದೆ. ಬಹುಪಾಲು ಸಂಸದರಿಗೆ ಮಸೂದೆಯ ಶೀರ್ಷಿಕೆಗಳು ಸಹ ಗೊತ್ತಿರುವುದಿಲ್ಲ. ಈ ರೀತಿ ನಡೆದರೆ ಪ್ರಜಾಪ್ರಭುತ್ವದ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವೇ ಇಲ್ಲ~ ಎಂದರು.<br /> <br /> `ಮಹತ್ವದ ವಿಷಯಗಳ ಬಗ್ಗೆ ಸಂಸತ್ನಲ್ಲಿ ಚರ್ಚೆ ನಡೆಯುತ್ತಿಲ್ಲ. ಹಾಗಾಗಿ ಜನಲೋಕಪಾಲ್ ಮಸೂದೆಯ ಬಗ್ಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚಿಂತಿಸುವಂತೆ ಮಾಡಲು ಗಾಂಧಿವಾಧಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸಬೇಕಾಯಿತು~ ಎಂದು ಹೇಳಿದರು.<br /> <br /> `ಮತದಾನ ಮಾಡುವುದು ಕಡ್ಡಾಯವಾಗಬೇಕು. ಬಹಳಷ್ಟು ಸಂಸದರು ಅಧಿವೇಶನದ ಸಂದರ್ಭದಲ್ಲಿ ಮಾತನಾಡುವುದೇ ಇಲ್ಲ. ಹಾಗಾಗಿ ಜನರಿಗೆ ಸ್ಪಂದಿಸದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಜನಪ್ರತಿನಿಧಿಯನ್ನು ವಾಪಸ್ ಕರೆಸಿಕೊಳ್ಳುವ ವ್ಯವಸ್ಥೆ ಬರಬೇಕು~ ಎಂದು ಅಭಿಪ್ರಾಯಪಟ್ಟರು.<br /> <br /> ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, `ಸಂವಿಧಾನದ ನೈತಿಕ ಮೌಲ್ಯಗಳನ್ನು ಪಾಲಿಸದಿದ್ದರೆ ಸಂವಿಧಾನದ ಆಶಯ ಈಡೇರುವುದಿಲ್ಲ. ಕೊನೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಕುಸಿದು ಬೀಳುವ ಅಪಾಯವಿದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಿದೆ~ ಎಂದರು.<br /> `ಕೇವಲ ರಾಜಕಾರಣಿಯ ಮನಸ್ಥಿತಿ ಬದಲಾದರಷ್ಟೇ ಸಾಲದು, ಮತದಾರರ ಮನೋಭಾವವು ಬದಲಾಗಬೇಕು~ ಎಂದು ಹೇಳಿದರು.<br /> <br /> ಮಾಧವ ಗೋಡ್ಬೋಲೆ ಮಾತನಾಡಿ, `ದೇಶದ ಸಾರ್ವಭೌಮತೆಯ ಪ್ರತೀಕದಂತಿರುವ ಸಂಸತ್ತಿನ ಮೌಲ್ಯ ಕುಸಿಯುತ್ತಿದ್ದು, ಅದರ ಪಾವಿತ್ರ್ಯ ಕಳೆದುಕೊಳ್ಳುತ್ತಿದೆ. ಈಚಿನ ವರ್ಷಗಳಲ್ಲಿ ವಾಣಿಜ್ಯೀಕರಣಗೊಂಡಂತಾಗಿದೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> `ಸಂಸತ್ನಲ್ಲಿ ಹಾಲಿ ವ್ಯವಸ್ಥೆಯನ್ನು ತುರ್ತಾಗಿ ಬದಲಾಯಿಸಬೇಕಿದೆ. ಇಂದಿನ ಪರಿಸ್ಥಿತಿಗೆ ಹೊಂದುವಂತಹ ಹಾಗೂ ಪ್ರಜಾಪ್ರಭುತ್ವದ ಉದ್ದೇಶ ಈಡೇರುವ ರೀತಿಯಲ್ಲಿ ಮಾರ್ಪಾಡು ಮಾಡಬೇಕಿದೆ~ ಎಂದರು.</p>.<p>`ಜನಲೋಕಪಾಲ್ ಮಸೂದೆ ಜಾರಿಯಿಂದ ಭ್ರಷ್ಟಾಚಾರ ನಿಯಂತ್ರಣವಾಗಲಿದೆ ಎಂಬ ಆಶಯವಿದೆ. ಆದರೆ ರಾಜಕಾರಣಿಯ ಮನಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಲಿದೆ ಎಂಬ ವಿಶ್ವಾಸವಿಲ್ಲ~ ಎಂದರು. <br /> <br /> ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟ್ ಪಿ.ಎ. ನಜರತ್, ಬೆಂಗಳೂರು ವಿ.ವಿ. ಕುಲಪತಿ ಡಾ.ಎನ್.ಪ್ರಭುದೇವ್, ವಿ.ವಿಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಎಸ್. ಜಯರಾಮು ಉಪಸ್ಥಿತರಿದ್ದರು.<br /> <br /> <strong>ರಾಮದೇವ್ಗೆ ಬೆಂಬಲ</strong><br /> `ಭ್ರಷ್ಟಾಚಾರದ ವಿರುದ್ಧ ಬಾಬಾ ರಾಮದೇವ್ ನಡೆಸುವ ಹೋರಾಟಕ್ಕೆ ನನ್ನ ಬೆಂಬಲವಿದೆ~ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಹೇಳಿದರು.`ನಾವು ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ರಚನೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಇಬ್ಬರ ಉದ್ದೇಶ ಒಂದೇ ಆಗಿರುವುದರಿಂದ ಯಾವುದೇ ತಿಕ್ಕಾಟವಿಲ್ಲ~ ಎಂದರು.<br /> <br /> `ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಅಂತಿಮ ವರದಿ ಸಿದ್ಧವಾಗುತ್ತಿದ್ದು, ಜೂನ್ ತಿಂಗಳ ಅಂತ್ಯದೊಳಗೆ ಸಲ್ಲಿಸಲಾಗುವುದು~ ಎಂದು ಸಂತೋಷ್ ಹೆಗ್ಡೆ ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>