ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ‘ಬೆಂಗಳೂರು ಮಹಾಧರ್ಮಕ್ಷೇತ್ರ’ದ ಸಾರ್ವಜನಿಕ ಸಂಪರ್ಕಾಧಿಕಾರಿ ಎ.ಎಸ್. ಆಂಥೋನಿ ಸ್ವಾಮಿ, ‘ಜನರ ಗೌರವಕ್ಕೆ ಪಾತ್ರರಾಗಿರುವ ಸ್ವಾಮೀಜಿಗಳು ಉತ್ತಮ ಮಾತುಗಳಿಂದ ಸಮಾಜ ಕಟ್ಟುವ ಕೆಲಸ ಮಾಡಬೇಕು. ಆದರೆ, ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳಗಾವಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾವೇಶದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜ ಒಡೆಯುವ ಕೆಲಸವನ್ನು ಮಾಡಿದ್ದಾರೆ’ ಎಂದು
ಆರೋಪಿಸಿದ್ದಾರೆ.