<p><strong>ಬೆಂಗಳೂರು: </strong>ನಗರದ ಹೊರವರ್ತುಲ ರಸ್ತೆಯಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಪರಿಸರವಾದಿಗಳು ಶನಿವಾರ (ಮೇ 19) ಪ್ರತಿಭಟನೆ ನಡೆಸಲಿದ್ದಾರೆ.</p>.<p>ಬೆಳ್ಳಂದೂರು ಪ್ರದೇಶದ ಇಬ್ಬಲೂರಿನ ಸರ್ವೀಸ್ ರಸ್ತೆಯಲ್ಲಿ ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸ್ಥಳೀಯ ನಿವಾಸಿಗಳು ಹಾಗೂ ಪರಿಸರವಾದಿಗಳು ವಿವಿಧ ಸಂಘಟನೆಗಳ ಜೊತೆಗೂಡಿ ಶಾಂತಿಯುತ ಮಾನವ ಸರಪಳಿ ನಿರ್ಮಿಸಲಿದ್ದಾರೆ.</p>.<p>‘ಮರಗಳು ಹಾಗೂ ಅವುಗಳ ಕೊಂಬೆಗಳನ್ನು ಕತ್ತರಿಸುವುದಕ್ಕೆ ನಾವು ವಿರೋಧ ವ್ಯಕ್ತ ಮಾಡುತ್ತಲೇ ಇದ್ದೇವೆ. ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ದೂರನ್ನೂ ನೀಡಿದ್ದೇವೆ. ಆದರೆ, ಪಾಲಿಕೆ ಇದಕ್ಕೆ ಕಿವಿಗೊಟ್ಟಿಲ್ಲ. ಈ ಪ್ರದೇಶದಲ್ಲಿ ಪದೇ ಪದೇ ಮರಗಳನ್ನು ಕತ್ತರಿಸಲಾಗುತ್ತಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಫಲಕಗಳಿಗೆ ಅಡ್ಡ: ‘ಜಾಹೀರಾತು ಫಲಕಗಳು ಸ್ಪಷ್ಟವಾಗಿ ಕಾಣಿಸಲಿ ಎಂಬ ಉದ್ದೇಶದಿಂದ ಫಲಕಗಳಿಗೆ ಅಡ್ಡ ಬಂದ ದೊಡ್ಡ ದೊಡ್ಡ ಕೊಂಬೆಗಳನ್ನು ಹಾಗೂ ಅವುಗಳಿಗೆ ಸಮೀಪದ ಮರಗಳನ್ನು ಕತ್ತರಿಸಲಾಗುತ್ತಿದೆ. ಕಳೆದ 10ರಂದು ಕೂಡಾ 25 ಮರಗಳನ್ನು ಕತ್ತರಿಸಲಾಗಿದೆ’ ಎಂದು ನಗರದ ಪರಿಸರವಾದಿ ವಿಜಯ್ ನಿಶಾಂತ್ ಹೇಳಿದರು.</p>.<p>‘ಪಾಲಿಕೆ ವ್ಯಾಪ್ತಿಯಲ್ಲಿ ಮರಗಳನ್ನು ಎಗ್ಗಿಲ್ಲದೆ ಕತ್ತರಿಸಲಾಗುತ್ತಿದೆ. ಅರಣ್ಯ ಇಲಾಖೆ ಮತ್ತು ಪಾಲಿಕೆಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ಹೊರ ವರ್ತುಲ ರಸ್ತೆ ಪ್ರದೇಶದಲ್ಲಿ ಕಳೆದ 10 ತಿಂಗಳಲ್ಲಿ 4 ಬಾರಿ ಮರಗಳನ್ನು ಕತ್ತರಿಸಲಾಗಿದೆ. ಪ್ರತಿಬಾರಿ ಏನಿಲ್ಲವೆಂದರೂ ಕನಿಷ್ಠ 25 ರಿಂದ 30 ಮರಗಳನ್ನು ಕತ್ತರಿಸಲಾಗುತ್ತಿದೆ’ ಎಂದು ನಿಶಾಂತ್ ದೂರಿದರು.</p>.<p>ಜಾಗೃತಿ ಉದ್ದೇಶ: ‘ಮರ ಹಾಗೂ ಅವುಗಳ ಕೊಂಬೆ ಕತ್ತರಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ನಾವು ಈ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸುಮಾರು 200ರಷ್ಟು ಸಂಖ್ಯೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಪರಿಸರವಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಾರ್ವಜನಿಕರಲ್ಲಿ ಜಾಗೃತ ಮೂಡಿಸುವುದೇ ನಮ್ಮ ಉದ್ದೇಶ’ ಎನ್ನುತ್ತಾರೆ ಐ.ಟಿ ತಂತ್ರಜ್ಞ ಮತ್ತು ಪರಿಸರವಾದಿ ಸುನೀಲ್ ರೆಡ್ಡಿ.</p>.<p>ಕಾರ್ಯಕ್ರಮದ ಸಂಘಟಕರೂ ಆದ ಅವರು, ‘ಹಲವಾರು ಜಾಹೀರಾತು ಸಂಸ್ಥೆಗಳು ಹಾಗೂ ಜಾಹೀರಾತುಗಳ ಮಾಲೀಕರು ಮರ ಕತ್ತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಹೊರವರ್ತುಲ ರಸ್ತೆಯಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಪರಿಸರವಾದಿಗಳು ಶನಿವಾರ (ಮೇ 19) ಪ್ರತಿಭಟನೆ ನಡೆಸಲಿದ್ದಾರೆ.</p>.<p>ಬೆಳ್ಳಂದೂರು ಪ್ರದೇಶದ ಇಬ್ಬಲೂರಿನ ಸರ್ವೀಸ್ ರಸ್ತೆಯಲ್ಲಿ ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸ್ಥಳೀಯ ನಿವಾಸಿಗಳು ಹಾಗೂ ಪರಿಸರವಾದಿಗಳು ವಿವಿಧ ಸಂಘಟನೆಗಳ ಜೊತೆಗೂಡಿ ಶಾಂತಿಯುತ ಮಾನವ ಸರಪಳಿ ನಿರ್ಮಿಸಲಿದ್ದಾರೆ.</p>.<p>‘ಮರಗಳು ಹಾಗೂ ಅವುಗಳ ಕೊಂಬೆಗಳನ್ನು ಕತ್ತರಿಸುವುದಕ್ಕೆ ನಾವು ವಿರೋಧ ವ್ಯಕ್ತ ಮಾಡುತ್ತಲೇ ಇದ್ದೇವೆ. ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ದೂರನ್ನೂ ನೀಡಿದ್ದೇವೆ. ಆದರೆ, ಪಾಲಿಕೆ ಇದಕ್ಕೆ ಕಿವಿಗೊಟ್ಟಿಲ್ಲ. ಈ ಪ್ರದೇಶದಲ್ಲಿ ಪದೇ ಪದೇ ಮರಗಳನ್ನು ಕತ್ತರಿಸಲಾಗುತ್ತಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಫಲಕಗಳಿಗೆ ಅಡ್ಡ: ‘ಜಾಹೀರಾತು ಫಲಕಗಳು ಸ್ಪಷ್ಟವಾಗಿ ಕಾಣಿಸಲಿ ಎಂಬ ಉದ್ದೇಶದಿಂದ ಫಲಕಗಳಿಗೆ ಅಡ್ಡ ಬಂದ ದೊಡ್ಡ ದೊಡ್ಡ ಕೊಂಬೆಗಳನ್ನು ಹಾಗೂ ಅವುಗಳಿಗೆ ಸಮೀಪದ ಮರಗಳನ್ನು ಕತ್ತರಿಸಲಾಗುತ್ತಿದೆ. ಕಳೆದ 10ರಂದು ಕೂಡಾ 25 ಮರಗಳನ್ನು ಕತ್ತರಿಸಲಾಗಿದೆ’ ಎಂದು ನಗರದ ಪರಿಸರವಾದಿ ವಿಜಯ್ ನಿಶಾಂತ್ ಹೇಳಿದರು.</p>.<p>‘ಪಾಲಿಕೆ ವ್ಯಾಪ್ತಿಯಲ್ಲಿ ಮರಗಳನ್ನು ಎಗ್ಗಿಲ್ಲದೆ ಕತ್ತರಿಸಲಾಗುತ್ತಿದೆ. ಅರಣ್ಯ ಇಲಾಖೆ ಮತ್ತು ಪಾಲಿಕೆಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ಹೊರ ವರ್ತುಲ ರಸ್ತೆ ಪ್ರದೇಶದಲ್ಲಿ ಕಳೆದ 10 ತಿಂಗಳಲ್ಲಿ 4 ಬಾರಿ ಮರಗಳನ್ನು ಕತ್ತರಿಸಲಾಗಿದೆ. ಪ್ರತಿಬಾರಿ ಏನಿಲ್ಲವೆಂದರೂ ಕನಿಷ್ಠ 25 ರಿಂದ 30 ಮರಗಳನ್ನು ಕತ್ತರಿಸಲಾಗುತ್ತಿದೆ’ ಎಂದು ನಿಶಾಂತ್ ದೂರಿದರು.</p>.<p>ಜಾಗೃತಿ ಉದ್ದೇಶ: ‘ಮರ ಹಾಗೂ ಅವುಗಳ ಕೊಂಬೆ ಕತ್ತರಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ನಾವು ಈ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸುಮಾರು 200ರಷ್ಟು ಸಂಖ್ಯೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಪರಿಸರವಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಾರ್ವಜನಿಕರಲ್ಲಿ ಜಾಗೃತ ಮೂಡಿಸುವುದೇ ನಮ್ಮ ಉದ್ದೇಶ’ ಎನ್ನುತ್ತಾರೆ ಐ.ಟಿ ತಂತ್ರಜ್ಞ ಮತ್ತು ಪರಿಸರವಾದಿ ಸುನೀಲ್ ರೆಡ್ಡಿ.</p>.<p>ಕಾರ್ಯಕ್ರಮದ ಸಂಘಟಕರೂ ಆದ ಅವರು, ‘ಹಲವಾರು ಜಾಹೀರಾತು ಸಂಸ್ಥೆಗಳು ಹಾಗೂ ಜಾಹೀರಾತುಗಳ ಮಾಲೀಕರು ಮರ ಕತ್ತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>