<p><strong>ನೆಲಮಂಗಲ:</strong> ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲ್ಕಾರು ಬಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರ ಪೈಕಿ ಯುವಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ರಾತ್ರಿ 8 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಮಹದೇವಪುರದ ಬಳಿ ಸಂಭವಿಸಿದೆ. <br /> <br /> ಮೃತರನ್ನು ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಸುರೇಶ್ (42), ರಘುರಾಮ್ (38) ಎಂದು ಗುರುತಿಸಲಾಗಿದೆ. ಕುಣಿಗಲ್ ತಾಲ್ಲೂಕಿನ ಗಿಡದಪಾಳ್ಯದ ಗಂಗಾಧರ್ (38) ತೀವ್ರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ಗಂಗಾಧರ್ ಗುತ್ತಿಗೆದಾರರಾಗಿದ್ದು, ಕುಣಿಗಲ್ನಲ್ಲಿ ಖಾಸಗಿ ಆಸ್ಪತ್ರೆಯ ಕಟ್ಟಡ ನಿರ್ಮಿಸುತ್ತಿದ್ದಾರೆ. ಕಟ್ಟಡದ ಮೇಲ್ವಿಚಾರಣೆ ನೋಡಿಕೊಂಡು ಇಂಡಿಕಾ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರಂತ ಸಂಭವಿಸಿತು.<br /> <br /> ನಾಯಿ ಅಡ್ಡ ಬಂದಾಗ ತಪ್ಪಿಸಲು ಹೋದಾಗ ಕಾರು ಎಕ್ಸ್ಪ್ರೆಸ್ ಹೈವೆಯ ತಡೆಗೋಡೆಗೆ ಡಿಕ್ಕಿ ಹೊಡೆಯಿತು. ಅಲ್ಲಿಂದ ಪರ್ಯಾಯ ರಸ್ತೆಗೆ ಪಲ್ಟಿ ಹೊಡೆದ ಕಾರು ರಸ್ತೆ ಪಕ್ಕದ ಜಮೀನಿಗೆ ಹೋಗಿ ಬಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲ್ಕಾರು ಬಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರ ಪೈಕಿ ಯುವಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ರಾತ್ರಿ 8 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಮಹದೇವಪುರದ ಬಳಿ ಸಂಭವಿಸಿದೆ. <br /> <br /> ಮೃತರನ್ನು ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಸುರೇಶ್ (42), ರಘುರಾಮ್ (38) ಎಂದು ಗುರುತಿಸಲಾಗಿದೆ. ಕುಣಿಗಲ್ ತಾಲ್ಲೂಕಿನ ಗಿಡದಪಾಳ್ಯದ ಗಂಗಾಧರ್ (38) ತೀವ್ರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ಗಂಗಾಧರ್ ಗುತ್ತಿಗೆದಾರರಾಗಿದ್ದು, ಕುಣಿಗಲ್ನಲ್ಲಿ ಖಾಸಗಿ ಆಸ್ಪತ್ರೆಯ ಕಟ್ಟಡ ನಿರ್ಮಿಸುತ್ತಿದ್ದಾರೆ. ಕಟ್ಟಡದ ಮೇಲ್ವಿಚಾರಣೆ ನೋಡಿಕೊಂಡು ಇಂಡಿಕಾ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರಂತ ಸಂಭವಿಸಿತು.<br /> <br /> ನಾಯಿ ಅಡ್ಡ ಬಂದಾಗ ತಪ್ಪಿಸಲು ಹೋದಾಗ ಕಾರು ಎಕ್ಸ್ಪ್ರೆಸ್ ಹೈವೆಯ ತಡೆಗೋಡೆಗೆ ಡಿಕ್ಕಿ ಹೊಡೆಯಿತು. ಅಲ್ಲಿಂದ ಪರ್ಯಾಯ ರಸ್ತೆಗೆ ಪಲ್ಟಿ ಹೊಡೆದ ಕಾರು ರಸ್ತೆ ಪಕ್ಕದ ಜಮೀನಿಗೆ ಹೋಗಿ ಬಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>