<p><strong>ಬೆಂಗಳೂರು</strong>: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಇಂದಿರಾನಗರ ಮತ್ತು ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರ ಚಿನ್ನದ ಸರಗಳನ್ನು ದುಷ್ಕರ್ಮಿಗಳು ಶನಿವಾರ ಬೆಳಿಗ್ಗೆ ದೋಚಿದ್ದಾರೆ.<br /> <br /> ಮಹಿಳೆಗೆ ಚಾಕುವಿನಿಂದ ಬೆದರಿಸಿ ಸರ ದರೋಡೆ ಮಾಡಿರುವ ಘಟನೆ ಎಚ್ಎಎಲ್ ಎರಡನೇ ಹಂತದ 13ನೇ ಮುಖ್ಯರಸ್ತೆಯಲ್ಲಿ ನಡೆದಿದೆ.<br /> <br /> ಶಾರದಮ್ಮ ಎಂಬುವರು ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಮನೆಯ ಸಮೀಪವೇ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಅವರ ಬೆನ್ನಿಗೆ ಹೊಡೆದಿದ್ದಾನೆ. ಚಾಕುವಿನಿಂದ ಬೆದರಿಸಿದ ಆತ 48 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.<br /> <br /> ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ.<br /> <br /> ಹಾಲು ತರಲು ಹೋಗುತ್ತಿದ್ದ ಡಾ.ಚಿತ್ತಮ್ಮ ಎಂಬುವರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಚ್ಎಸ್ಆರ್ ಲೇಔಟ್ನ ಎರಡನೇ ಸೆಕ್ಟರ್ನಲ್ಲಿ ನಡೆದಿದೆ.<br /> <br /> ಚಿತ್ತಮ್ಮ ಅವರು ಬೆಳಿಗ್ಗೆ ಹಾಲು ತರಲು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 25 ಗ್ರಾಂ ತೂಕದ ಸರ ದೋಚಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ, ಎಚ್ಎಸ್ಆರ್ ಲೇಔಟ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ಹೆಬ್ಬೆಟ್ಟು ಮಂಜನ ಸಹಚರರ ಬಂಧನ</strong><br /> ಕೊಲೆ ಮತ್ತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ರೌಡಿ ಹೆಬ್ಬೆಟ್ಟು ಮಂಜನ ನಾಲ್ಕು ಮಂದಿ ಸಹಚರರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.<br /> <br /> ಜ್ಞಾನಭಾರತಿಯ ಮುನೇಶ್ವರನಗರದ ನಂದೀಶ (20), ಸುಂಕದಕಟ್ಟೆಯ ಅಂಜನಾನಗರದ ಧನಂಜಯ (24), ಚನ್ನಪಟ್ಟಣದ ರಾಜೇಶ (21) ಮತ್ತು ಬ್ಯಾಟರಾಯನಪುರದ ಆವಲಹಳ್ಳಿಯ ಪ್ರಮೋದ್ (19) ಬಂಧಿತರು. <br /> <br /> ಹನುಮಂತನಗರ ಸಮೀಪ ಇರುವ ಮದ್ದೂರಮ್ಮ ಆಟದ ಮೈದಾನದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು. ಕಿರಣ, ಚಂದ್ರ ಮತ್ತು ರಮೇಶ್ ಎಂಬುವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಧಾರವಾಡದಲ್ಲಿ ದರೋಡೆ ಮಾಡಲು ಯತ್ನಿಸಿದ್ದ ತಂಡದಲ್ಲಿದ್ದ ನಂದೀಶ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಉಳಿದ ಆರೋಪಿಗಳ ಮೇಲೂ ಸಹ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳಿವೆ ಎಂದು ಪೊಲೀಸರು ಹೇಳಿದ್ದಾರೆ. <br /> <br /> |ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.<br /> <br /> <strong>ವರದಕ್ಷಿಣೆ ಕಿರುಕುಳ: ಆತ್ಮಹತ್ಯೆ</strong><br /> ಪತಿ ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿಲೇಔಟ್ನ ಜೆ.ಸಿ.ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.<br /> <br /> ಕಾವ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತಿ ರವಿಶಾಸ್ತ್ರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ರವಿಶಾಸ್ತ್ರಿ ಅವರನ್ನು ಕಾವ್ಯಾ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ತನ್ಮಯ್ ಎಂಬ ಒಂದೂವರೆ ವರ್ಷದ ಮಗನಿದ್ದಾನೆ.<br /> <br /> ಮದ್ಯ ವ್ಯಸನಿಯಾಗಿದ್ದ ರವಿಶಾಸ್ತ್ರಿ ಹಣ ತರುವಂತೆ ಪತ್ನಿಗೆ ಪೀಡಿಸುತ್ತಿದ್ದರು. ಆಗಾಗ್ಗೆ ಮಾನಸಿಕ- ದೈಹಿಕ ಹಿಂಸೆಯನ್ನೂ ನೀಡುತ್ತಿದ್ದರು. ಶುಕ್ರವಾರ ರಾತ್ರಿ ಸಹ ಪಾನಮತ್ತರಾಗಿ ಬಂದು ಪತ್ನಿಯ ಜತೆ ಜಗಳವಾಡಿದ್ದರು. ಇದರಿಂದ ಮನನೊಂದ ಅವರು ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಾವ್ಯಾ ಅವರ ತಾಯಿ ನಾಗಮಣಿ ಅವರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ಬೆಂಕಿ: ಆತಂಕ</strong><br /> ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಸಿಗ್ಮಾ ಮಾಲ್ನ ನೆಲ ಮಹಡಿಯ ಡಕ್ಟ್ನಲ್ಲಿ (ವಿದ್ಯುತ್ ವಯರ್ಗಳಿರುವ ಸ್ಥಳ) ಬೆಂಕಿ ಹೊತ್ತಿಕೊಂಡ ಪರಿಣಾಮ ಶನಿವಾರ ಬೆಳಿಗ್ಗೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.<br /> <br /> ಮೂರು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕಿಟ್ನಿಂದ ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.<br /> <br /> ಬೆಂಕಿ ಹೊತ್ತಿಕೊಂಡ ತಕ್ಷಣ ಮಾಲ್ನಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಯಿತು. ಬೆಂಕಿ ನಂದಿಸಿದ ನಂತರ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಇಂದಿರಾನಗರ ಮತ್ತು ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರ ಚಿನ್ನದ ಸರಗಳನ್ನು ದುಷ್ಕರ್ಮಿಗಳು ಶನಿವಾರ ಬೆಳಿಗ್ಗೆ ದೋಚಿದ್ದಾರೆ.<br /> <br /> ಮಹಿಳೆಗೆ ಚಾಕುವಿನಿಂದ ಬೆದರಿಸಿ ಸರ ದರೋಡೆ ಮಾಡಿರುವ ಘಟನೆ ಎಚ್ಎಎಲ್ ಎರಡನೇ ಹಂತದ 13ನೇ ಮುಖ್ಯರಸ್ತೆಯಲ್ಲಿ ನಡೆದಿದೆ.<br /> <br /> ಶಾರದಮ್ಮ ಎಂಬುವರು ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಮನೆಯ ಸಮೀಪವೇ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಅವರ ಬೆನ್ನಿಗೆ ಹೊಡೆದಿದ್ದಾನೆ. ಚಾಕುವಿನಿಂದ ಬೆದರಿಸಿದ ಆತ 48 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.<br /> <br /> ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ.<br /> <br /> ಹಾಲು ತರಲು ಹೋಗುತ್ತಿದ್ದ ಡಾ.ಚಿತ್ತಮ್ಮ ಎಂಬುವರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಚ್ಎಸ್ಆರ್ ಲೇಔಟ್ನ ಎರಡನೇ ಸೆಕ್ಟರ್ನಲ್ಲಿ ನಡೆದಿದೆ.<br /> <br /> ಚಿತ್ತಮ್ಮ ಅವರು ಬೆಳಿಗ್ಗೆ ಹಾಲು ತರಲು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 25 ಗ್ರಾಂ ತೂಕದ ಸರ ದೋಚಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ, ಎಚ್ಎಸ್ಆರ್ ಲೇಔಟ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ಹೆಬ್ಬೆಟ್ಟು ಮಂಜನ ಸಹಚರರ ಬಂಧನ</strong><br /> ಕೊಲೆ ಮತ್ತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ರೌಡಿ ಹೆಬ್ಬೆಟ್ಟು ಮಂಜನ ನಾಲ್ಕು ಮಂದಿ ಸಹಚರರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.<br /> <br /> ಜ್ಞಾನಭಾರತಿಯ ಮುನೇಶ್ವರನಗರದ ನಂದೀಶ (20), ಸುಂಕದಕಟ್ಟೆಯ ಅಂಜನಾನಗರದ ಧನಂಜಯ (24), ಚನ್ನಪಟ್ಟಣದ ರಾಜೇಶ (21) ಮತ್ತು ಬ್ಯಾಟರಾಯನಪುರದ ಆವಲಹಳ್ಳಿಯ ಪ್ರಮೋದ್ (19) ಬಂಧಿತರು. <br /> <br /> ಹನುಮಂತನಗರ ಸಮೀಪ ಇರುವ ಮದ್ದೂರಮ್ಮ ಆಟದ ಮೈದಾನದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು. ಕಿರಣ, ಚಂದ್ರ ಮತ್ತು ರಮೇಶ್ ಎಂಬುವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಧಾರವಾಡದಲ್ಲಿ ದರೋಡೆ ಮಾಡಲು ಯತ್ನಿಸಿದ್ದ ತಂಡದಲ್ಲಿದ್ದ ನಂದೀಶ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಉಳಿದ ಆರೋಪಿಗಳ ಮೇಲೂ ಸಹ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳಿವೆ ಎಂದು ಪೊಲೀಸರು ಹೇಳಿದ್ದಾರೆ. <br /> <br /> |ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.<br /> <br /> <strong>ವರದಕ್ಷಿಣೆ ಕಿರುಕುಳ: ಆತ್ಮಹತ್ಯೆ</strong><br /> ಪತಿ ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿಲೇಔಟ್ನ ಜೆ.ಸಿ.ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.<br /> <br /> ಕಾವ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತಿ ರವಿಶಾಸ್ತ್ರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ರವಿಶಾಸ್ತ್ರಿ ಅವರನ್ನು ಕಾವ್ಯಾ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ತನ್ಮಯ್ ಎಂಬ ಒಂದೂವರೆ ವರ್ಷದ ಮಗನಿದ್ದಾನೆ.<br /> <br /> ಮದ್ಯ ವ್ಯಸನಿಯಾಗಿದ್ದ ರವಿಶಾಸ್ತ್ರಿ ಹಣ ತರುವಂತೆ ಪತ್ನಿಗೆ ಪೀಡಿಸುತ್ತಿದ್ದರು. ಆಗಾಗ್ಗೆ ಮಾನಸಿಕ- ದೈಹಿಕ ಹಿಂಸೆಯನ್ನೂ ನೀಡುತ್ತಿದ್ದರು. ಶುಕ್ರವಾರ ರಾತ್ರಿ ಸಹ ಪಾನಮತ್ತರಾಗಿ ಬಂದು ಪತ್ನಿಯ ಜತೆ ಜಗಳವಾಡಿದ್ದರು. ಇದರಿಂದ ಮನನೊಂದ ಅವರು ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಾವ್ಯಾ ಅವರ ತಾಯಿ ನಾಗಮಣಿ ಅವರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ಬೆಂಕಿ: ಆತಂಕ</strong><br /> ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಸಿಗ್ಮಾ ಮಾಲ್ನ ನೆಲ ಮಹಡಿಯ ಡಕ್ಟ್ನಲ್ಲಿ (ವಿದ್ಯುತ್ ವಯರ್ಗಳಿರುವ ಸ್ಥಳ) ಬೆಂಕಿ ಹೊತ್ತಿಕೊಂಡ ಪರಿಣಾಮ ಶನಿವಾರ ಬೆಳಿಗ್ಗೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.<br /> <br /> ಮೂರು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕಿಟ್ನಿಂದ ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.<br /> <br /> ಬೆಂಕಿ ಹೊತ್ತಿಕೊಂಡ ತಕ್ಷಣ ಮಾಲ್ನಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಯಿತು. ಬೆಂಕಿ ನಂದಿಸಿದ ನಂತರ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>