<p><strong>ಬೆಂಗಳೂರು</strong>: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಡಾ.ಸರೋಜಿನಿ ಮಹಿಷಿ ವರದಿ ಪರಿಷ್ಕರಿಸಲು ಸದ್ಯದಲ್ಲೇ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಲ್ಲಿ ಹೇಳಿದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ `ಕರ್ನಾಟಕ ಸಂಗಾತಿ' ಪರಿಷ್ಕೃತ ಆವೃತ್ತಿಯನ್ನು ಗೃಹ ಕಚೇರಿ `ಕೃಷ್ಣಾ'ದಲ್ಲಿ ಬಿಡುಗಡೆ ಮಾಡಿದ ನಂತರ ಅವರು ಮಾತನಾಡಿದರು.<br /> <br /> ಸರೋಜಿನಿ ಮಹಿಷಿ ವರದಿ ನೀಡುವಾಗ ವೇತನ ಶ್ರೇಣಿ ಕಡಿಮೆ ಇತ್ತು. ಅಲ್ಲದೆ, ಆ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ವಲಯ ಇರಲಿಲ್ಲ. ಹೀಗಾಗಿ ಈಗಿನ ವೇತನ ಶ್ರೇಣಿಗಳು ಸೇರಿದಂತೆ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರದಿಯನ್ನು ಪರಿಷ್ಕರಿಸಬೇಕಾದ ಅಗತ್ಯ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು ಸಲಹೆ ನೀಡಿದರು.<br /> <br /> ಈ ಸಂಬಂಧ ಹೇಳಿಕೆ ನೀಡಿದ ಸಿದ್ದರಾಮಯ್ಯ `ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವುದು ನಮ್ಮೆಲ್ಲರ ಬಯಕೆ. ಅದಕ್ಕೆ ಪೂರಕವಾಗಿ ವರದಿ ಪರಿಷ್ಕರಿಸಲು ಸಮಿತಿ ರಚಿಸಲಾಗುವುದು' ಎಂದರು.<br /> <br /> ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ನಂತರ ಕನ್ನಡಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸುವ ಮತ್ತು ಕಾರ್ಯಕ್ರಮ ರೂಪಿಸುವ ಜವಾಬ್ದಾರಿಯನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನಕ್ಕೆ ವಹಿಸಲಾಗಿತ್ತು. ಇದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ ವ್ಯಕ್ತಪಡಿಸಿದರು.<br /> <br /> `ಇದರ ಬದಲು, ಸರ್ಕಾರವೇ ಕಾರ್ಯಕ್ರಮಗಳನ್ನು ರೂಪಿಸಬೇಕು. ಕೇಂದ್ರ ಸರ್ಕಾರ ನೀಡುವ ಅನುದಾನ ಕೂಡ ರಾಜ್ಯ ಸರ್ಕಾರಕ್ಕೇ ಬರಬೇಕು. ತಮಿಳುನಾಡಿನಲ್ಲಿ ಇದೇ ವ್ಯವಸ್ಥೆ ಇದೆ. ಆ ಪ್ರಕಾರ ಮಾಡಬೇಕು' ಎಂದು ಆಗ್ರಹಪಡಿಸಿದರು. ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.<br /> <br /> <strong>ಎರಡು ತಿಂಗಳಲ್ಲಿ ಯೂನಿಕೋಡ್</strong>: ಇಂಟರ್ನೆಟ್ನಲ್ಲಿ ಕನ್ನಡದ ಶಿಷ್ಟತೆಯಾಗಿ ಯೂನಿಕೋಡ್ ಅನ್ನು ಎರಡು ತಿಂಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.<br /> <br /> <strong>ವಿಧಾನಸೌಧದಲ್ಲೇ ಇಲ್ಲ:</strong> ಆಡಳಿತದ ಕೆಳಹಂತದಲ್ಲಿ ಕನ್ನಡ ಬಳಕೆ ಇದೆ. ಆದರೆ, ವಿಧಾನಸೌಧದಲ್ಲೇ ಕನ್ನಡ ಬಳಕೆ ಕಡಿಮೆ ಆಗಿದೆ. ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಕನ್ನಡದಲ್ಲಿ ಇರದ ಕಡತಗಳನ್ನು ಹಿಂದಕ್ಕೆ ಕಳುಹಿಸುವಂತೆಯೂ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.<br /> <br /> ಸ್ಪರ್ಧಾತ್ಮಾಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ `ಕರ್ನಾಟಕ ಸಂಗಾತಿ' ಹೆಚ್ಚು ಉಪಯೋಗ ಆಗಲಿದೆ. 720 ಪುಟಗಳ ಪುಸ್ತಕದಲ್ಲಿ ಕರ್ನಾಟಕ ಕುರಿತ ಎಲ್ಲ ರೀತಿಯ ಮಾಹಿತಿ ಇದೆ ಎಂದು ಚಂದ್ರು ವಿವರಿಸಿದರು.<br /> <br /> ಸಾಹಿತಿಗಳಾದ ಹಂಪ ನಾಗರಾಜಯ್ಯ, ನಾಗತಿಹಳ್ಳಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.<br /> <br /> <strong>ಅನುದಾನ: ತನಿಖೆ</strong><br /> ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ಸಂದರ್ಭದಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಿಡುಗಡೆ ಮಾಡಿರುವ ಅನುದಾನ ಹೇಗೆ ಬಳಕೆಯಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> `ಕರ್ನಾಟಕ ಸಂಗಾತಿ' ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಈ ಸಂಬಂಧ ವಿಷಯ ಪ್ರಸ್ತಾಪಿಸಿ, ತನಿಖೆಗೆ ಆಗ್ರಹಿಸಿದರು.<br /> <br /> `ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಸಲುವಾಗಿ ಎಲ್ಲ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡಿತ್ತು. ಇದನ್ನು ಕಟ್ಟಡ ನಿರ್ಮಾಣ ಸೇರಿದಂತೆ ಇತರ ಅನುಪಯುಕ್ತ ಕೆಲಸಗಳಿಗೆ ಬಳಸಲಾಗಿದೆ. ಈ ಕುರಿತು ತನಿಖೆ ನಡೆಸಬೇಕು' ಎಂದು ಬರಗೂರು ಒತ್ತಾಯಿಸಿದರು.<br /> <br /> `ಆ ರೀತಿ ಆಗಿದ್ದರೆ ಅದು ತಪ್ಪು. ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಡಾ.ಸರೋಜಿನಿ ಮಹಿಷಿ ವರದಿ ಪರಿಷ್ಕರಿಸಲು ಸದ್ಯದಲ್ಲೇ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಲ್ಲಿ ಹೇಳಿದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ `ಕರ್ನಾಟಕ ಸಂಗಾತಿ' ಪರಿಷ್ಕೃತ ಆವೃತ್ತಿಯನ್ನು ಗೃಹ ಕಚೇರಿ `ಕೃಷ್ಣಾ'ದಲ್ಲಿ ಬಿಡುಗಡೆ ಮಾಡಿದ ನಂತರ ಅವರು ಮಾತನಾಡಿದರು.<br /> <br /> ಸರೋಜಿನಿ ಮಹಿಷಿ ವರದಿ ನೀಡುವಾಗ ವೇತನ ಶ್ರೇಣಿ ಕಡಿಮೆ ಇತ್ತು. ಅಲ್ಲದೆ, ಆ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ವಲಯ ಇರಲಿಲ್ಲ. ಹೀಗಾಗಿ ಈಗಿನ ವೇತನ ಶ್ರೇಣಿಗಳು ಸೇರಿದಂತೆ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರದಿಯನ್ನು ಪರಿಷ್ಕರಿಸಬೇಕಾದ ಅಗತ್ಯ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು ಸಲಹೆ ನೀಡಿದರು.<br /> <br /> ಈ ಸಂಬಂಧ ಹೇಳಿಕೆ ನೀಡಿದ ಸಿದ್ದರಾಮಯ್ಯ `ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವುದು ನಮ್ಮೆಲ್ಲರ ಬಯಕೆ. ಅದಕ್ಕೆ ಪೂರಕವಾಗಿ ವರದಿ ಪರಿಷ್ಕರಿಸಲು ಸಮಿತಿ ರಚಿಸಲಾಗುವುದು' ಎಂದರು.<br /> <br /> ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ನಂತರ ಕನ್ನಡಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸುವ ಮತ್ತು ಕಾರ್ಯಕ್ರಮ ರೂಪಿಸುವ ಜವಾಬ್ದಾರಿಯನ್ನು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನಕ್ಕೆ ವಹಿಸಲಾಗಿತ್ತು. ಇದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ ವ್ಯಕ್ತಪಡಿಸಿದರು.<br /> <br /> `ಇದರ ಬದಲು, ಸರ್ಕಾರವೇ ಕಾರ್ಯಕ್ರಮಗಳನ್ನು ರೂಪಿಸಬೇಕು. ಕೇಂದ್ರ ಸರ್ಕಾರ ನೀಡುವ ಅನುದಾನ ಕೂಡ ರಾಜ್ಯ ಸರ್ಕಾರಕ್ಕೇ ಬರಬೇಕು. ತಮಿಳುನಾಡಿನಲ್ಲಿ ಇದೇ ವ್ಯವಸ್ಥೆ ಇದೆ. ಆ ಪ್ರಕಾರ ಮಾಡಬೇಕು' ಎಂದು ಆಗ್ರಹಪಡಿಸಿದರು. ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.<br /> <br /> <strong>ಎರಡು ತಿಂಗಳಲ್ಲಿ ಯೂನಿಕೋಡ್</strong>: ಇಂಟರ್ನೆಟ್ನಲ್ಲಿ ಕನ್ನಡದ ಶಿಷ್ಟತೆಯಾಗಿ ಯೂನಿಕೋಡ್ ಅನ್ನು ಎರಡು ತಿಂಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.<br /> <br /> <strong>ವಿಧಾನಸೌಧದಲ್ಲೇ ಇಲ್ಲ:</strong> ಆಡಳಿತದ ಕೆಳಹಂತದಲ್ಲಿ ಕನ್ನಡ ಬಳಕೆ ಇದೆ. ಆದರೆ, ವಿಧಾನಸೌಧದಲ್ಲೇ ಕನ್ನಡ ಬಳಕೆ ಕಡಿಮೆ ಆಗಿದೆ. ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಕನ್ನಡದಲ್ಲಿ ಇರದ ಕಡತಗಳನ್ನು ಹಿಂದಕ್ಕೆ ಕಳುಹಿಸುವಂತೆಯೂ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.<br /> <br /> ಸ್ಪರ್ಧಾತ್ಮಾಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ `ಕರ್ನಾಟಕ ಸಂಗಾತಿ' ಹೆಚ್ಚು ಉಪಯೋಗ ಆಗಲಿದೆ. 720 ಪುಟಗಳ ಪುಸ್ತಕದಲ್ಲಿ ಕರ್ನಾಟಕ ಕುರಿತ ಎಲ್ಲ ರೀತಿಯ ಮಾಹಿತಿ ಇದೆ ಎಂದು ಚಂದ್ರು ವಿವರಿಸಿದರು.<br /> <br /> ಸಾಹಿತಿಗಳಾದ ಹಂಪ ನಾಗರಾಜಯ್ಯ, ನಾಗತಿಹಳ್ಳಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.<br /> <br /> <strong>ಅನುದಾನ: ತನಿಖೆ</strong><br /> ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ಸಂದರ್ಭದಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಿಡುಗಡೆ ಮಾಡಿರುವ ಅನುದಾನ ಹೇಗೆ ಬಳಕೆಯಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> `ಕರ್ನಾಟಕ ಸಂಗಾತಿ' ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಈ ಸಂಬಂಧ ವಿಷಯ ಪ್ರಸ್ತಾಪಿಸಿ, ತನಿಖೆಗೆ ಆಗ್ರಹಿಸಿದರು.<br /> <br /> `ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಸಲುವಾಗಿ ಎಲ್ಲ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡಿತ್ತು. ಇದನ್ನು ಕಟ್ಟಡ ನಿರ್ಮಾಣ ಸೇರಿದಂತೆ ಇತರ ಅನುಪಯುಕ್ತ ಕೆಲಸಗಳಿಗೆ ಬಳಸಲಾಗಿದೆ. ಈ ಕುರಿತು ತನಿಖೆ ನಡೆಸಬೇಕು' ಎಂದು ಬರಗೂರು ಒತ್ತಾಯಿಸಿದರು.<br /> <br /> `ಆ ರೀತಿ ಆಗಿದ್ದರೆ ಅದು ತಪ್ಪು. ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>