<p><strong>ಬೆಂಗಳೂರು:</strong> ‘ಕರ್ನಾಟಕ ಜ್ಞಾನ ಆಯೋಗದ ಶಿಫಾರಸಿನಂತೆ 1ರಿಂದ 4ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ನಿಯಮವನ್ನು ಕೇಂದ್ರ ಸರ್ಕಾರ ರೂಪಿಸಬೇಕು’ ಎಂದು ಪ್ರೊ. ಎಂ.ಎಚ್.ಕೃಷ್ಣಯ್ಯ ಒತ್ತಾಯಿಸಿದರು.<br /> <br /> ಕರ್ನಾಟಕ ಲೇಖಕಿಯರ ಸಂಘ ಭಾನುವಾರ ಏರ್ಪಡಿಸಿದ್ದ ಲೇಖಕಿ ಡಾ.ಎನ್.ಗಾಯತ್ರಿ ಅವರಿಗೆ ಎಚ್.ವಿ. ಸಾವಿತ್ರಮ್ಮ ದತ್ತಿ ಪ್ರಶಸ್ತಿ ಪ್ರದಾನ ಸಮಾ ರಂಭದಲ್ಲಿ ಅವರು ಮಾತನಾಡಿದರು.<br /> <br /> ‘ವಸಾಹತುಶಾಹಿಗಳ ಪ್ರಭಾವದಿಂದ ಇಂಗ್ಲಿಷ್ ಅನ್ನು ಆಡಳಿತ ಭಾಷೆಯನ್ನಾಗಿಸಿಕೊಂಡ ದೇಶಗಳು ಬಡತನದಿಂದ ನಲುಗುತ್ತಿವೆ. ಪ್ರಾಂತೀಯ ಭಾಷೆಗಳನ್ನು ಆಡಳಿತದಲ್ಲಿ ಬಳಸಿದ ದೇಶಗಳು ಮುಂದುವರೆದಿರುವುದು ಸಂಶೋಧನೆಗಳಿಂದ ದೃಢಪಟ್ಟಿದೆ’ ಎಂದರು.<br /> <br /> ‘ಗಾಯತ್ರಿ ಅವರು ವಿಶಿಷ್ಟ, ವಿಭಿನ್ನ ನೆಲೆಯ ಚಿಂತಕಿ. ಸಾಂಪ್ರದಾಯಿಕ ಚಿಂತನೆಗಳಿಂತ ಹೊರಬಂದು ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಅವರು ಸಂಪಾದಿಸಿರುವ ‘ಲೋಕ ತತ್ವಶಾಸ್ತ್ರದ ಪ್ರವೇಶಿಕೆ’ ಸಂಪುಟಗಳನ್ನು ಪ್ರತಿಯೊಬ್ಬರು ಓದಲೇಬೇಕು’ ಎಂದು ಹೇಳಿದರು.<br /> <br /> ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಸಂಸ್ಥೆಯ ನಿರ್ದೇ ಶಕಿ ಡಾ.ಪ್ರೀತಿ ಶುಭಚಂದ್ರ ಮಾತನಾಡಿ, ‘ಗಾಯತ್ರಿ ಅವರು ಬರವಣಿಗೆ ಆರಂಭಿಸಿದಾಗ ಪ್ರೋತ್ಸಾಹದಾಯಕ ವಾತಾವರಣ ಇರಲಿಲ್ಲ. ಹಲವಾರು ಅಡೆತಡೆಗಳನ್ನು ಎದುರಿಸಿದ ಅವರು, ಅಚಲ, ಮಾನಸ, ಜಾಗೃತಿ ಎಂಬ ಪತ್ರಿಕೆಗಳನ್ನು ಮುನ್ನಡೆಸಿದ್ದರು. ಆ ಪತ್ರಿಕೆಗಳಲ್ಲಿ ಪ್ರಕಟಗೊಂಡ ಬರಹಗಳು ಸ್ತ್ರೀವಾದಿ ನೆಲೆಯ ಸಂಶೋಧನೆಗಳಿಗೆ ಸಹಾಯಕವಾಗಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕ ಜ್ಞಾನ ಆಯೋಗದ ಶಿಫಾರಸಿನಂತೆ 1ರಿಂದ 4ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ನಿಯಮವನ್ನು ಕೇಂದ್ರ ಸರ್ಕಾರ ರೂಪಿಸಬೇಕು’ ಎಂದು ಪ್ರೊ. ಎಂ.ಎಚ್.ಕೃಷ್ಣಯ್ಯ ಒತ್ತಾಯಿಸಿದರು.<br /> <br /> ಕರ್ನಾಟಕ ಲೇಖಕಿಯರ ಸಂಘ ಭಾನುವಾರ ಏರ್ಪಡಿಸಿದ್ದ ಲೇಖಕಿ ಡಾ.ಎನ್.ಗಾಯತ್ರಿ ಅವರಿಗೆ ಎಚ್.ವಿ. ಸಾವಿತ್ರಮ್ಮ ದತ್ತಿ ಪ್ರಶಸ್ತಿ ಪ್ರದಾನ ಸಮಾ ರಂಭದಲ್ಲಿ ಅವರು ಮಾತನಾಡಿದರು.<br /> <br /> ‘ವಸಾಹತುಶಾಹಿಗಳ ಪ್ರಭಾವದಿಂದ ಇಂಗ್ಲಿಷ್ ಅನ್ನು ಆಡಳಿತ ಭಾಷೆಯನ್ನಾಗಿಸಿಕೊಂಡ ದೇಶಗಳು ಬಡತನದಿಂದ ನಲುಗುತ್ತಿವೆ. ಪ್ರಾಂತೀಯ ಭಾಷೆಗಳನ್ನು ಆಡಳಿತದಲ್ಲಿ ಬಳಸಿದ ದೇಶಗಳು ಮುಂದುವರೆದಿರುವುದು ಸಂಶೋಧನೆಗಳಿಂದ ದೃಢಪಟ್ಟಿದೆ’ ಎಂದರು.<br /> <br /> ‘ಗಾಯತ್ರಿ ಅವರು ವಿಶಿಷ್ಟ, ವಿಭಿನ್ನ ನೆಲೆಯ ಚಿಂತಕಿ. ಸಾಂಪ್ರದಾಯಿಕ ಚಿಂತನೆಗಳಿಂತ ಹೊರಬಂದು ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಅವರು ಸಂಪಾದಿಸಿರುವ ‘ಲೋಕ ತತ್ವಶಾಸ್ತ್ರದ ಪ್ರವೇಶಿಕೆ’ ಸಂಪುಟಗಳನ್ನು ಪ್ರತಿಯೊಬ್ಬರು ಓದಲೇಬೇಕು’ ಎಂದು ಹೇಳಿದರು.<br /> <br /> ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಸಂಸ್ಥೆಯ ನಿರ್ದೇ ಶಕಿ ಡಾ.ಪ್ರೀತಿ ಶುಭಚಂದ್ರ ಮಾತನಾಡಿ, ‘ಗಾಯತ್ರಿ ಅವರು ಬರವಣಿಗೆ ಆರಂಭಿಸಿದಾಗ ಪ್ರೋತ್ಸಾಹದಾಯಕ ವಾತಾವರಣ ಇರಲಿಲ್ಲ. ಹಲವಾರು ಅಡೆತಡೆಗಳನ್ನು ಎದುರಿಸಿದ ಅವರು, ಅಚಲ, ಮಾನಸ, ಜಾಗೃತಿ ಎಂಬ ಪತ್ರಿಕೆಗಳನ್ನು ಮುನ್ನಡೆಸಿದ್ದರು. ಆ ಪತ್ರಿಕೆಗಳಲ್ಲಿ ಪ್ರಕಟಗೊಂಡ ಬರಹಗಳು ಸ್ತ್ರೀವಾದಿ ನೆಲೆಯ ಸಂಶೋಧನೆಗಳಿಗೆ ಸಹಾಯಕವಾಗಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>