ಬೆಂಗಳೂರು: ಕಾಡುಗೊಂಡನಹಳ್ಳಿ ಸಮೀಪದ ಬಾಗಲೂರು ಲೇಔಟ್ನಲ್ಲಿ ಭಾನುವಾರ ರಾತ್ರಿ ರೌಡಿ ಶೀಟರ್ ವಿನೋದ್ (30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬಾಗಲೂರು ಲೇಔಟ್ ನಿವಾಸಿಯಾದ ವಿನೋದ್ ರಾತ್ರಿ 9.30ರ ಸುಮಾರಿಗೆ ಸ್ನೇಹಿತನ ಮಗನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹೊಟ್ಟೆ ಹಾಗೂ ತಲೆಗೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
2012ರಲ್ಲಿ ರೌಡಿ ಶೀಟರ್ ಡ್ಯಾನಿಯಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ವಿನೋದ್, ಒಂದು ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಡ್ಯಾನಿಯಲ್ನ ಸೋದರರೇ ಕೃತ್ಯ ಎಸಗಿರುವ ಸಾದ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಡುಗೊಂಡನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.