<p><strong>ಬೆಂಗಳೂರು</strong>: ಮಡಿವಾಳದಲ್ಲಿ ₹14 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಸೌಲಭ್ಯವುಳ್ಳ ಮಾರುಕಟ್ಟೆ ಕಾಮಗಾರಿಗೆ ಭಾನುವಾರ ಚಾಲನೆ ದೊರೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು.<br /> ಈ ವೇಳೆ ಮಾತನಾಡಿದ ಬಿ.ಎನ್. ಮಂಜುನಾಥ್ ರೆಡ್ಡಿ, ‘ಮಹಾನಗರದ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮಡಿವಾಳದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.<br /> <br /> ‘ಮಾರುಕಟ್ಟೆ ಪ್ರದೇಶದಲ್ಲಿ ಪ್ರತ್ಯೇಕ ವಾಹನ ನಿಲುಗಡೆ, ಶೌಚಾಲಯ, ಸ್ನಾನಗೃಹ ಮತ್ತು ವಿಶ್ರಾಂತಿ ಕೊಠಡಿಗಳು ಇರಲಿವೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು. <br /> <br /> ‘ಮಾರುಕಟ್ಟೆ ಮುಖ್ಯರಸ್ತೆಯನ್ನು ಈಗಾಗಲೇ ಕಾಂಕ್ರೀಟ್್ ರಸ್ತೆಯನ್ನಾಗಿ ಮಾಡಲಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಪ್ರತಿದಿನವೂ ಕಸದ ವಿಲೇವಾರಿಗೆ ಪಾಲಿಕೆಯು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಡಿವಾಳದಲ್ಲಿ ₹14 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಸೌಲಭ್ಯವುಳ್ಳ ಮಾರುಕಟ್ಟೆ ಕಾಮಗಾರಿಗೆ ಭಾನುವಾರ ಚಾಲನೆ ದೊರೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು.<br /> ಈ ವೇಳೆ ಮಾತನಾಡಿದ ಬಿ.ಎನ್. ಮಂಜುನಾಥ್ ರೆಡ್ಡಿ, ‘ಮಹಾನಗರದ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮಡಿವಾಳದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.<br /> <br /> ‘ಮಾರುಕಟ್ಟೆ ಪ್ರದೇಶದಲ್ಲಿ ಪ್ರತ್ಯೇಕ ವಾಹನ ನಿಲುಗಡೆ, ಶೌಚಾಲಯ, ಸ್ನಾನಗೃಹ ಮತ್ತು ವಿಶ್ರಾಂತಿ ಕೊಠಡಿಗಳು ಇರಲಿವೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು. <br /> <br /> ‘ಮಾರುಕಟ್ಟೆ ಮುಖ್ಯರಸ್ತೆಯನ್ನು ಈಗಾಗಲೇ ಕಾಂಕ್ರೀಟ್್ ರಸ್ತೆಯನ್ನಾಗಿ ಮಾಡಲಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಪ್ರತಿದಿನವೂ ಕಸದ ವಿಲೇವಾರಿಗೆ ಪಾಲಿಕೆಯು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>