ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಕ್ತ ವಿ.ವಿ. ಕುಲಪತಿಗೆ ರಾಜ್ಯಪಾಲರ ಸೂಚನೆ

Last Updated 15 ಸೆಪ್ಟೆಂಬರ್ 2013, 19:51 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನೇಮ­ಕಾತಿ­­ಯಲ್ಲಿ ನಡದಿದೆ ಎನ್ನಲಾದ ಅವ್ಯವ­ಹಾರಗಳ ಕುರಿತು ತನಿಖೆಗೆ ಆದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವದ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ­ಪಾಲರು ಮುಕ್ತ ವಿ.ವಿ ಕುಲಪತಿಗೆ ಸೂಚಿಸಿದ್ದಾರೆ.

ಮುಕ್ತ ವಿ.ವಿ ಬೋಧಕರ ಹುದ್ದೆಗಳ ಭರ್ತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ವಿಧಾನಮಂಡಲ ಅಧಿವೇಶನದಲ್ಲೇ ಕೆಲವು ಶಾಸಕರು ಈ ವಿಷಯ ಪ್ರಸ್ತಾಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿತ್ತು.

ತನಿಖೆಗೆ ಆದೇಶಿಸುವ ಸಂಬಂಧ ಇತ್ತೀಚೆಗೆ ರಾಜ್ಯಪಾಲರಿಗೆ ಸರ್ಕಾರ ಕಡತ ರವಾನಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಅವರು ಮುಕ್ತ ವಿ.ವಿ ಕುಲಪತಿ ಎಂ.ಜಿ.ಕೃಷ್ಣನ್‌ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT