<p>ಬೆಂಗಳೂರು: `ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಒಂದೆಡೆ ಹೋರಾಟ ನಡೆಯುತ್ತಿದ್ದರೆ, ಇನ್ನೊಂದೆಡೆ ಅದನ್ನು ಉಳಿಸಿಕೊಂಡು ಅನುಸರಿಸುವಂತೆ ಸಮಾಜಘಾತುಕ ಶಕ್ತಿಗಳು ಪ್ರೇರೇಪಿಸುತ್ತಿವೆ. ಈ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸಬೇಕು~ ಎಂದು ಸಾಹಿತಿ ಬಿ.ಟಿ.ಲಲಿತಾನಾಯಕ್ ಹೇಳಿದರು.<br /> <br /> ಪದ್ಮನಾಭನಗರ ವನಿತಾ ಸಮಾಜವು ಪದ್ಮನಾಭ ನಗರದ ಸಹಕಾರಿ ತರಬೇತಿ ಸಂಸ್ಥೆಯ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> `ಮಹಿಳೆಯರು ಮೂಢನಂಬಿಕೆಯನ್ನು ಹೆಚ್ಚಾಗಿ ಪಾಲಿಸುತ್ತಾರೆ ಮತ್ತು ಸಾಮಾಜಿಕ ವಿಷಯಗಳ ಬಗ್ಗೆ ಅರಿವಿರುವುದಿಲ್ಲ ಎಂಬ ಆರೋಪವಿದೆ. ಇದರಿಂದ ಮುಕ್ತಗೊಳ್ಳುವ ನಿಟ್ಟಿನಲ್ಲಿ ಮಹಿಳಾ ಪರ ಸಂಘಟನೆಗಳು ಕಾರ್ಯನಿರ್ವಹಿಸಬೇಕು~ ಎಂದರು.<br /> <br /> `ರಾಜ್ಯದಲ್ಲಿ 18 ಲಕ್ಷ ಮಂದಿ ವೇಶ್ಯೆಯರಿದ್ದಾರೆ ಎಂಬ ಅಘಾತಕಾರಿ ಅಂಶವನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಸಂಗತಿಯಾಗಿದೆ. ಈ ಸಮಸ್ಯೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಮಹಿಳಾಪರ ಸಂಘಟನೆಗಳು ಗಂಭೀರ ಚಿಂತನೆ ನಡೆಸಬೇಕು~ ಎಂದು ಹೇಳಿದರು.<br /> <br /> `ದೇಶಗಳಲ್ಲಿ ಸುಮಾರು 24 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಶೇ 74ರಷ್ಟು ಅಕ್ರಮ ದೇವಾಲಯಗಳೇ ತಲೆಯೆತ್ತಿವೆ. ಪುರೋಹಿತಶಾಹಿ ವರ್ಗವು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ನಡೆಸುತ್ತಿರುವ ದಬ್ಬಾಳಿಕೆ ಯನ್ನು ವಿರೋಧಿಸಿ, ಜನತೆ ಆದರ್ಶ ತತ್ವಗಳನ್ನು ಆಳವಡಿಸಿಕೊಳ್ಳಬೇಕಿದೆ~ ಎಂದರು.<br /> <br /> ಸಚಿವ ಆರ್.ಅಶೋಕ ಮಾತನಾಡಿ, `ದೇಶದಲ್ಲಿ ಅವ್ಯಾಹತವಾಗಿ ಸಂಘ- ಸಂಸ್ಥೆಗಳು ಸ್ಥಾಪನೆಯಾಗುತ್ತಿವೆ. ಆದರೆ, ಸ್ಥಾಪನೆಯ ಉದ್ದೇಶಕ್ಕೆ ಬದ್ದವಾಗಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿರುವ ಸಂಘಟನೆಗಳು ವಿರಳವಾಗಿದ್ದು, ಈ ಪೈಕಿ ವನಿತಾ ಸಂಘಟನೆಯು ಒಂದು~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> `ಸುಶಿಕ್ಷಿತ ಮಹಿಳೆ ಯರು ಈ ಮೊದಲು ವೈದ್ಯ ಮತ್ತು ಶಿಕ್ಷಕ ವೃತ್ತಿಯನ್ನೆ ಹೆಚ್ಚಾಗಿ ನೆಚ್ಚಿ ಕೊಂಡಿದ್ದರು. ಆದರೆ, ಪ್ರಸ್ತುತ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯ. ಮಹಿಳೆ ಯರಿಗೆ ಎಲ್ಲ ರಂಗಗಳಲ್ಲಿಯೂ ಹೆಚ್ಚಿನ ಅವಕಾಶ ದೊರೆಯುವ ಸ್ಥಿತಿ ನಿರ್ಮಾಣವಾಗಬೇಕು~ ಎಂದರು. <br /> <br /> ಲಕ್ಷ್ಮಿನಾರಾಯಣರಾವ್ (ಸಮಾಜ ಸೇವೆ), ಪ್ರೊ.ಬಿ.ಲಲಿತಾಂಬ (ಸಾಹಿತ್ಯ), ರೇಣುಕಾ ವಿಶ್ವನಾಥ್ (ವೇದ ಉಪನಿಷತ್ತು) ಹಾಗೂ ಮೋಹನ್ ಕುಮಾರ್ (ಜನಪದ) ಅವರನ್ನು ಸನ್ಮಾನಿಸಲಾಯಿತು. ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಪದ್ಮನಾಭನಗರ ಬಿಜೆಪಿ ಘಟಕದ ಅಧ್ಯಕ್ಷ ಶಶಿಕುಮಾರ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಒಂದೆಡೆ ಹೋರಾಟ ನಡೆಯುತ್ತಿದ್ದರೆ, ಇನ್ನೊಂದೆಡೆ ಅದನ್ನು ಉಳಿಸಿಕೊಂಡು ಅನುಸರಿಸುವಂತೆ ಸಮಾಜಘಾತುಕ ಶಕ್ತಿಗಳು ಪ್ರೇರೇಪಿಸುತ್ತಿವೆ. ಈ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸಬೇಕು~ ಎಂದು ಸಾಹಿತಿ ಬಿ.ಟಿ.ಲಲಿತಾನಾಯಕ್ ಹೇಳಿದರು.<br /> <br /> ಪದ್ಮನಾಭನಗರ ವನಿತಾ ಸಮಾಜವು ಪದ್ಮನಾಭ ನಗರದ ಸಹಕಾರಿ ತರಬೇತಿ ಸಂಸ್ಥೆಯ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> `ಮಹಿಳೆಯರು ಮೂಢನಂಬಿಕೆಯನ್ನು ಹೆಚ್ಚಾಗಿ ಪಾಲಿಸುತ್ತಾರೆ ಮತ್ತು ಸಾಮಾಜಿಕ ವಿಷಯಗಳ ಬಗ್ಗೆ ಅರಿವಿರುವುದಿಲ್ಲ ಎಂಬ ಆರೋಪವಿದೆ. ಇದರಿಂದ ಮುಕ್ತಗೊಳ್ಳುವ ನಿಟ್ಟಿನಲ್ಲಿ ಮಹಿಳಾ ಪರ ಸಂಘಟನೆಗಳು ಕಾರ್ಯನಿರ್ವಹಿಸಬೇಕು~ ಎಂದರು.<br /> <br /> `ರಾಜ್ಯದಲ್ಲಿ 18 ಲಕ್ಷ ಮಂದಿ ವೇಶ್ಯೆಯರಿದ್ದಾರೆ ಎಂಬ ಅಘಾತಕಾರಿ ಅಂಶವನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಸಂಗತಿಯಾಗಿದೆ. ಈ ಸಮಸ್ಯೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಮಹಿಳಾಪರ ಸಂಘಟನೆಗಳು ಗಂಭೀರ ಚಿಂತನೆ ನಡೆಸಬೇಕು~ ಎಂದು ಹೇಳಿದರು.<br /> <br /> `ದೇಶಗಳಲ್ಲಿ ಸುಮಾರು 24 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಶೇ 74ರಷ್ಟು ಅಕ್ರಮ ದೇವಾಲಯಗಳೇ ತಲೆಯೆತ್ತಿವೆ. ಪುರೋಹಿತಶಾಹಿ ವರ್ಗವು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ನಡೆಸುತ್ತಿರುವ ದಬ್ಬಾಳಿಕೆ ಯನ್ನು ವಿರೋಧಿಸಿ, ಜನತೆ ಆದರ್ಶ ತತ್ವಗಳನ್ನು ಆಳವಡಿಸಿಕೊಳ್ಳಬೇಕಿದೆ~ ಎಂದರು.<br /> <br /> ಸಚಿವ ಆರ್.ಅಶೋಕ ಮಾತನಾಡಿ, `ದೇಶದಲ್ಲಿ ಅವ್ಯಾಹತವಾಗಿ ಸಂಘ- ಸಂಸ್ಥೆಗಳು ಸ್ಥಾಪನೆಯಾಗುತ್ತಿವೆ. ಆದರೆ, ಸ್ಥಾಪನೆಯ ಉದ್ದೇಶಕ್ಕೆ ಬದ್ದವಾಗಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿರುವ ಸಂಘಟನೆಗಳು ವಿರಳವಾಗಿದ್ದು, ಈ ಪೈಕಿ ವನಿತಾ ಸಂಘಟನೆಯು ಒಂದು~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> `ಸುಶಿಕ್ಷಿತ ಮಹಿಳೆ ಯರು ಈ ಮೊದಲು ವೈದ್ಯ ಮತ್ತು ಶಿಕ್ಷಕ ವೃತ್ತಿಯನ್ನೆ ಹೆಚ್ಚಾಗಿ ನೆಚ್ಚಿ ಕೊಂಡಿದ್ದರು. ಆದರೆ, ಪ್ರಸ್ತುತ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯ. ಮಹಿಳೆ ಯರಿಗೆ ಎಲ್ಲ ರಂಗಗಳಲ್ಲಿಯೂ ಹೆಚ್ಚಿನ ಅವಕಾಶ ದೊರೆಯುವ ಸ್ಥಿತಿ ನಿರ್ಮಾಣವಾಗಬೇಕು~ ಎಂದರು. <br /> <br /> ಲಕ್ಷ್ಮಿನಾರಾಯಣರಾವ್ (ಸಮಾಜ ಸೇವೆ), ಪ್ರೊ.ಬಿ.ಲಲಿತಾಂಬ (ಸಾಹಿತ್ಯ), ರೇಣುಕಾ ವಿಶ್ವನಾಥ್ (ವೇದ ಉಪನಿಷತ್ತು) ಹಾಗೂ ಮೋಹನ್ ಕುಮಾರ್ (ಜನಪದ) ಅವರನ್ನು ಸನ್ಮಾನಿಸಲಾಯಿತು. ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಪದ್ಮನಾಭನಗರ ಬಿಜೆಪಿ ಘಟಕದ ಅಧ್ಯಕ್ಷ ಶಶಿಕುಮಾರ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>