‘ತುರ್ತು ಸಂದರ್ಭವನ್ನು ನಿಭಾಯಿಸಲು ನಿಗಮ ಸೆಪ್ಟೆಂಬರ್ನಿಂದಲೇ ಸಿಬ್ಬಂದಿಗೆ ವಿಶೇಷ ತರಬೇತಿ ನೀಡುತ್ತಿದೆ. ಎಸ್ಮಾ ಜಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬಳಿಕ, ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್ಗಳು ಸಹಿತ 39 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಅವರನ್ನು ಎರಡು ತಂಡಗಳನ್ನಾಗಿ ವಿಂಗಡಿಸಿ ಹೆಚ್ಚುವರಿ ತರಬೇತಿ ನೀಡಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.