ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮುಖ್ಯಮಂತ್ರಿಗಳಾದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಇ.ಕೆ.ಪಳನಿಸ್ವಾಮಿ, ಕೇರಳದ ಪಿನರಾಯ್ ವಿಜಯನ್, ಒರಿಸ್ಸಾದ ನವೀನ್ ಪಟ್ನಾಯಕ್, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು, ತೆಲಂಗಾಣದ ಚಂದ್ರಶೇಖರ್ ರಾವ್, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಶಿವಸೇನೆ ಅಧ್ಯಕ್ಷ ಉದ್ದವ್ ಠಾಕ್ರೆ, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಸೇರಿದಂತೆ ಹಲವರಿಗೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದ್ದಾರೆ.