<p><strong>ಬೆಂಗಳೂರು: </strong>ತುಮಕೂರಿನ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ಕಟ್ಟಡದ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಪಾಲನೆ ಮಾಡದ ಪ್ರಾಚ್ಯವಸ್ತು ಸರ್ವೇಕ್ಷಣಾ ನಿರ್ದೇಶನಾಲಯ ಹೈಕೋರ್ಟ್ನಿಂದ ತೀವ್ರ ತರಾಟೆಗೆ ಒಳಗಾಯಿತು.<br /> <br /> ಮರು ನಿರ್ಮಾಣದ ಕುರಿತ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವ ಸಂಬಂಧ ಸಮೀಕ್ಷೆ ನಡೆಸುವಂತೆ ನಿರ್ದೇಶನಾಲಯಕ್ಕೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಹಿಂದೆ ಹಲವು ಬಾರಿ ಆದೇಶಿಸಿತ್ತು. <br /> <br /> ಶುಕ್ರವಾರ ಕೋರ್ಟ್ನಲ್ಲಿ ಹಾಜರು ಇದ್ದ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕ ಎಸ್.ವಿ. ವೆಂಕಟೇಶಯ್ಯ ಅವರು ಇನ್ನೂ ಕಾಲಾವಕಾಶ ಕೋರಿದರು. ಇದು ನ್ಯಾಯಮೂರ್ತಿಗಳ ಸಿಟ್ಟಿಗೆ ಕಾರಣವಾಯಿತು. `ಕೋರ್ಟ್ ಆದೇಶ ಎಂದರೆ ಏನು ತಿಳಿದುಕೊಂಡಿದ್ದೀರಿ. ನಿಮ್ಮನ್ನು ಜೈಲಿಗೆ ಕಳುಹಿಸಿದರಷ್ಟೇ ಬುದ್ಧಿ ಬರುತ್ತದೆ. <br /> <br /> ಕೊನೆಯ ಗಡುವು ನೀಡಲಾಗುತ್ತಿದೆ. ಮುಂದೆಯೂ ಆದೇಶ ಪಾಲನೆಗೆ ವಿಫಲವಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ~ ಎಂದ ಪೀಠ ಸಮೀಕ್ಷೆಗೆ ಕೊನೆಯ ಗಡುವು ನೀಡಿತು.ದೇವಾಲಯ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಹಲವಾರು ಭಕ್ತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳು ನಡೆಸುತ್ತಿದ್ದಾರೆ. ಶತಮಾನದಷ್ಟು ಹಳೆಯದಾಗಿರುವ ಈ ದೇವಾಲಯವನ್ನು ನೆಲಸಮ ಮಾಡುವುದು ಸರಿಯಲ್ಲ ಎನ್ನುವುದು ಅರ್ಜಿದಾರರ ವಾದ. <br /> <br /> <strong> ಜಮೀನಿನ ಸಮೀಕ್ಷೆಗೆ ಆದೇಶ: </strong>ಯಲಹಂಕದ ಬಳಿ ಇರುವ ಸಿಂಗಾಪುರ ಗ್ರಾಮದಲ್ಲಿನ ವಿವಾದಿತ ಸುಮಾರು ಒಂಬತ್ತು ಎಕರೆ ಜಮೀನು ಸರ್ಕಾರದ್ದೋ ಅಥವಾ ಖಾಸಗಿಯವರಿಗೆ ಸೇರಿದ್ದೋ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ತಹಶೀಲ್ದಾರ್ ಅವರಿಗೆ ಶುಕ್ರವಾರ ಆದೇಶಿಸಿದೆ.<br /> <br /> ಸರ್ಕಾರದ ಜಮೀನಿನಲ್ಲಿ ಖಾಸಗಿಯವರಿಗೆ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಲಾಗಿದೆ ಎಂದು ದೂರಿ ಸಾಬಣ್ಣ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. <br /> <br /> `ಈ ಸಮೀಕ್ಷೆ ನಡೆಸಿದ ನಂತರ ಆ ಬಗ್ಗೆ ನಗರ ಜಿಲ್ಲಾಧಿಕಾರಿಗಳು ವರದಿ ನೀಡಬೇಕು. ಈ ವರದಿಗೆ ಅರ್ಜಿದಾರರು ಹಾಗೂ ಜಮೀನು ಒತ್ತುವರಿ ಮಾಡಿಕೊಂಡಿರುವ ಆರೋಪ ಹೊತ್ತ ಶಾರದಮ್ಮ ಹಾಗೂ ಇತರರು ಬದ್ಧರಾಗಿರಬೇಕು~ ಎಂದು ಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತುಮಕೂರಿನ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ಕಟ್ಟಡದ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಪಾಲನೆ ಮಾಡದ ಪ್ರಾಚ್ಯವಸ್ತು ಸರ್ವೇಕ್ಷಣಾ ನಿರ್ದೇಶನಾಲಯ ಹೈಕೋರ್ಟ್ನಿಂದ ತೀವ್ರ ತರಾಟೆಗೆ ಒಳಗಾಯಿತು.<br /> <br /> ಮರು ನಿರ್ಮಾಣದ ಕುರಿತ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವ ಸಂಬಂಧ ಸಮೀಕ್ಷೆ ನಡೆಸುವಂತೆ ನಿರ್ದೇಶನಾಲಯಕ್ಕೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಹಿಂದೆ ಹಲವು ಬಾರಿ ಆದೇಶಿಸಿತ್ತು. <br /> <br /> ಶುಕ್ರವಾರ ಕೋರ್ಟ್ನಲ್ಲಿ ಹಾಜರು ಇದ್ದ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕ ಎಸ್.ವಿ. ವೆಂಕಟೇಶಯ್ಯ ಅವರು ಇನ್ನೂ ಕಾಲಾವಕಾಶ ಕೋರಿದರು. ಇದು ನ್ಯಾಯಮೂರ್ತಿಗಳ ಸಿಟ್ಟಿಗೆ ಕಾರಣವಾಯಿತು. `ಕೋರ್ಟ್ ಆದೇಶ ಎಂದರೆ ಏನು ತಿಳಿದುಕೊಂಡಿದ್ದೀರಿ. ನಿಮ್ಮನ್ನು ಜೈಲಿಗೆ ಕಳುಹಿಸಿದರಷ್ಟೇ ಬುದ್ಧಿ ಬರುತ್ತದೆ. <br /> <br /> ಕೊನೆಯ ಗಡುವು ನೀಡಲಾಗುತ್ತಿದೆ. ಮುಂದೆಯೂ ಆದೇಶ ಪಾಲನೆಗೆ ವಿಫಲವಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ~ ಎಂದ ಪೀಠ ಸಮೀಕ್ಷೆಗೆ ಕೊನೆಯ ಗಡುವು ನೀಡಿತು.ದೇವಾಲಯ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಹಲವಾರು ಭಕ್ತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳು ನಡೆಸುತ್ತಿದ್ದಾರೆ. ಶತಮಾನದಷ್ಟು ಹಳೆಯದಾಗಿರುವ ಈ ದೇವಾಲಯವನ್ನು ನೆಲಸಮ ಮಾಡುವುದು ಸರಿಯಲ್ಲ ಎನ್ನುವುದು ಅರ್ಜಿದಾರರ ವಾದ. <br /> <br /> <strong> ಜಮೀನಿನ ಸಮೀಕ್ಷೆಗೆ ಆದೇಶ: </strong>ಯಲಹಂಕದ ಬಳಿ ಇರುವ ಸಿಂಗಾಪುರ ಗ್ರಾಮದಲ್ಲಿನ ವಿವಾದಿತ ಸುಮಾರು ಒಂಬತ್ತು ಎಕರೆ ಜಮೀನು ಸರ್ಕಾರದ್ದೋ ಅಥವಾ ಖಾಸಗಿಯವರಿಗೆ ಸೇರಿದ್ದೋ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ತಹಶೀಲ್ದಾರ್ ಅವರಿಗೆ ಶುಕ್ರವಾರ ಆದೇಶಿಸಿದೆ.<br /> <br /> ಸರ್ಕಾರದ ಜಮೀನಿನಲ್ಲಿ ಖಾಸಗಿಯವರಿಗೆ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಲಾಗಿದೆ ಎಂದು ದೂರಿ ಸಾಬಣ್ಣ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. <br /> <br /> `ಈ ಸಮೀಕ್ಷೆ ನಡೆಸಿದ ನಂತರ ಆ ಬಗ್ಗೆ ನಗರ ಜಿಲ್ಲಾಧಿಕಾರಿಗಳು ವರದಿ ನೀಡಬೇಕು. ಈ ವರದಿಗೆ ಅರ್ಜಿದಾರರು ಹಾಗೂ ಜಮೀನು ಒತ್ತುವರಿ ಮಾಡಿಕೊಂಡಿರುವ ಆರೋಪ ಹೊತ್ತ ಶಾರದಮ್ಮ ಹಾಗೂ ಇತರರು ಬದ್ಧರಾಗಿರಬೇಕು~ ಎಂದು ಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>