<p><strong>ಬೆಂಗಳೂರು:</strong> `ಯಾವುದೇ ವ್ಯಕ್ತಿ ಬುದ್ಧಿಮತ್ತೆಯಿಂದ ಶೇ 20ರಷ್ಟು ಯಶಸ್ಸು ಸಾಧಿಸಬಹುದು. ಆದರೆ ಭಾವನಾತ್ಮಕ ಬುದ್ಧಿಶಕ್ತಿಯನ್ನು ಅಭಿವೃದ್ಧಿಪಡಿಸುವ ಮೂಲಕ ಶೇ 80ರಷ್ಟು ಯಶಸ್ಸು ಗಳಿಸಬಹುದು~ ಎಂದು ಬಂಜಾರಾ ಅಕಾಡೆಮಿಯ ಸಂಸ್ಥಾಪಕ ಹಾಗೂ ಶಿಕ್ಷಣ ತಜ್ಞ ಡಾ. ಅಲಿ ಖ್ವಾಜಾ ಅಭಿಪ್ರಾಯಪಟ್ಟರು. <br /> <br /> `ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್~ ಪತ್ರಿಕಾ ಸಮೂಹವು ರಾಜ್ಯ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಗರದ ಶಿಕ್ಷಕರ ಸದನದಲ್ಲಿ ಐಐಟಿ ಪ್ರವೇಶ ಪರೀಕ್ಷೆಯ ಬಗ್ಗೆ ಪೋಷಕರು ಹಾಗೂ ಶಿಕ್ಷಕರಿಗೆ ಭಾನುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> `ಜೀವನದ ಯಾವುದೇ ಹಂತದಲ್ಲೂ ಭಾವನಾತ್ಮಕ ಜಾಣತನವನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಭಾವನಾತ್ಮಕ ಜಾಣತನದ ಅಧಿಕ ಬಳಕೆಯಿಂದ ಜೀವನದಲ್ಲಿ ಶಾಂತಿ, ಸ್ವಾತಂತ್ರ್ಯ, ಸಂತೋಷ, ಸ್ವಯಂನಿಯಂತ್ರಣ ಸಾಧ್ಯ~ ಎಂದು ಅವರು ಪ್ರತಿಪಾದಿಸಿದರು. <br /> <br /> `ಪೋಷಕರು ಮಕ್ಕಳ ಮೇಲೆ ನಿಯಂತ್ರಣ ಹೇರಬಾರದು. ಅವರಿಗೆ ಸ್ಫೂರ್ತಿ ತುಂಬಿದರೆ ಅದ್ಭುತ ಸಾಧನೆಗಳನ್ನು ಮಾಡುತ್ತಾರೆ. ಶಾಲಾ ಬದಲಾವಣೆ ಸೇರಿದಂತೆ ಶೈಕ್ಷಣಿಕ ವಿಚಾರಗಳಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೋಷಕರು ನಿರ್ಧಾರ ತೆಗೆದುಕೊಳ್ಳಬೇಕು~ ಎಂದು ಅವರು ಕಿವಿಮಾತು ಹೇಳಿದರು. <br /> <br /> `ನಮ್ಮಲ್ಲಿ ಸ್ವಯಂಜಾಗೃತಿ ಮುಖ್ಯ. ಒಂದು ಹಂತ ದಾಟಿದ ಬಳಿಕ ವ್ಯಕ್ತಿಗಳು ತಮ್ಮ ಬಗ್ಗೆ ಕಾಳಜಿ ವಹಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಾರೆ. ಈ ಪ್ರವೃತ್ತಿ ಸಲ್ಲದು. ಅಲ್ಲದೆ ಸ್ವಯಂನಿರ್ವಹಣೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ತಂತ್ರಜ್ಞಾನದ ಅಭಿವೃದ್ಧಿಯ ಪರಿಣಾಮದಿಂದ ಮಾನವ ಶ್ರಮದ ಒತ್ತಡ ಕಡಿಮೆಯಾಗಿದೆ. ಆದರೆ, ನಮ್ಮಲ್ಲಿ ಇತರರೊಂದಿಗೆ ಬೆರೆಯುವ ಕೌಶಲದ ಕೊರತೆ ಉಂಟಾಗಿದೆ~ ಎಂದು ಅವರು ಬೇಸರ ವ್ಯಕ್ತಪಡಿಸಿದರು. <br /> <br /> `ಸೂಪರ್ 30~ ಖ್ಯಾತಿಯ ಗಣಿತಶಾಸ್ತ್ರಜ್ಞ ಆನಂದ್ ಕುಮಾರ್ ಮಾತನಾಡಿ, `ಜಾಗತೀಕರಣದಿಂದ ವಿದ್ಯಾರ್ಥಿ ಸಮುದಾಯಕ್ಕೆ ಅಧಿಕ ಸವಾಲು ಎದುರಾಗಿದೆ. ಈ ಸವಾಲುಗಳನ್ನು ಎದುರಿಸಲು ಅವರನ್ನು ನಾವು ಸಜ್ಜುಗೊಳಿಸಬೇಕಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಯಾವುದೇ ವ್ಯಕ್ತಿ ಬುದ್ಧಿಮತ್ತೆಯಿಂದ ಶೇ 20ರಷ್ಟು ಯಶಸ್ಸು ಸಾಧಿಸಬಹುದು. ಆದರೆ ಭಾವನಾತ್ಮಕ ಬುದ್ಧಿಶಕ್ತಿಯನ್ನು ಅಭಿವೃದ್ಧಿಪಡಿಸುವ ಮೂಲಕ ಶೇ 80ರಷ್ಟು ಯಶಸ್ಸು ಗಳಿಸಬಹುದು~ ಎಂದು ಬಂಜಾರಾ ಅಕಾಡೆಮಿಯ ಸಂಸ್ಥಾಪಕ ಹಾಗೂ ಶಿಕ್ಷಣ ತಜ್ಞ ಡಾ. ಅಲಿ ಖ್ವಾಜಾ ಅಭಿಪ್ರಾಯಪಟ್ಟರು. <br /> <br /> `ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್~ ಪತ್ರಿಕಾ ಸಮೂಹವು ರಾಜ್ಯ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಗರದ ಶಿಕ್ಷಕರ ಸದನದಲ್ಲಿ ಐಐಟಿ ಪ್ರವೇಶ ಪರೀಕ್ಷೆಯ ಬಗ್ಗೆ ಪೋಷಕರು ಹಾಗೂ ಶಿಕ್ಷಕರಿಗೆ ಭಾನುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> `ಜೀವನದ ಯಾವುದೇ ಹಂತದಲ್ಲೂ ಭಾವನಾತ್ಮಕ ಜಾಣತನವನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಭಾವನಾತ್ಮಕ ಜಾಣತನದ ಅಧಿಕ ಬಳಕೆಯಿಂದ ಜೀವನದಲ್ಲಿ ಶಾಂತಿ, ಸ್ವಾತಂತ್ರ್ಯ, ಸಂತೋಷ, ಸ್ವಯಂನಿಯಂತ್ರಣ ಸಾಧ್ಯ~ ಎಂದು ಅವರು ಪ್ರತಿಪಾದಿಸಿದರು. <br /> <br /> `ಪೋಷಕರು ಮಕ್ಕಳ ಮೇಲೆ ನಿಯಂತ್ರಣ ಹೇರಬಾರದು. ಅವರಿಗೆ ಸ್ಫೂರ್ತಿ ತುಂಬಿದರೆ ಅದ್ಭುತ ಸಾಧನೆಗಳನ್ನು ಮಾಡುತ್ತಾರೆ. ಶಾಲಾ ಬದಲಾವಣೆ ಸೇರಿದಂತೆ ಶೈಕ್ಷಣಿಕ ವಿಚಾರಗಳಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೋಷಕರು ನಿರ್ಧಾರ ತೆಗೆದುಕೊಳ್ಳಬೇಕು~ ಎಂದು ಅವರು ಕಿವಿಮಾತು ಹೇಳಿದರು. <br /> <br /> `ನಮ್ಮಲ್ಲಿ ಸ್ವಯಂಜಾಗೃತಿ ಮುಖ್ಯ. ಒಂದು ಹಂತ ದಾಟಿದ ಬಳಿಕ ವ್ಯಕ್ತಿಗಳು ತಮ್ಮ ಬಗ್ಗೆ ಕಾಳಜಿ ವಹಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಾರೆ. ಈ ಪ್ರವೃತ್ತಿ ಸಲ್ಲದು. ಅಲ್ಲದೆ ಸ್ವಯಂನಿರ್ವಹಣೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ತಂತ್ರಜ್ಞಾನದ ಅಭಿವೃದ್ಧಿಯ ಪರಿಣಾಮದಿಂದ ಮಾನವ ಶ್ರಮದ ಒತ್ತಡ ಕಡಿಮೆಯಾಗಿದೆ. ಆದರೆ, ನಮ್ಮಲ್ಲಿ ಇತರರೊಂದಿಗೆ ಬೆರೆಯುವ ಕೌಶಲದ ಕೊರತೆ ಉಂಟಾಗಿದೆ~ ಎಂದು ಅವರು ಬೇಸರ ವ್ಯಕ್ತಪಡಿಸಿದರು. <br /> <br /> `ಸೂಪರ್ 30~ ಖ್ಯಾತಿಯ ಗಣಿತಶಾಸ್ತ್ರಜ್ಞ ಆನಂದ್ ಕುಮಾರ್ ಮಾತನಾಡಿ, `ಜಾಗತೀಕರಣದಿಂದ ವಿದ್ಯಾರ್ಥಿ ಸಮುದಾಯಕ್ಕೆ ಅಧಿಕ ಸವಾಲು ಎದುರಾಗಿದೆ. ಈ ಸವಾಲುಗಳನ್ನು ಎದುರಿಸಲು ಅವರನ್ನು ನಾವು ಸಜ್ಜುಗೊಳಿಸಬೇಕಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>