‘ಎಚ್.ಡಿ.ಕುಮಾರಸ್ವಾಮಿ ಪ್ರಕೃತಿ ಚಿಕಿತ್ಸೆ ಪಡೆಯಲು ಕಾಪುಗೆ ತೆರಳಿದ್ದಾರೆ. ಆದರೆ, ಅವರು ರಾಧಿಕಾ ಕುಮಾರಸ್ವಾಮಿ ಜೊತೆಯಲ್ಲಿ ರೆಸಾರ್ಟ್ಗೆ ಹೋಗಿದ್ದಾರೆಂದು ಹಳೇ ಫೋಟೊಗಳನ್ನು ಮಾರ್ಫೀಂಗ್ ಮಾಡಿ ಬಳಸಿಕೊಂಡು ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗಿತ್ತು. ಆ ಮೂಲಕ ಮುಖ್ಯಮಂತ್ರಿ ತೇಜೋವಧೆ ಮಾಡಲಾಗಿತ್ತು. ಈ ಬಗ್ಗೆ ದಿನೇಶ್ ದೂರಿನಲ್ಲಿ ಆರೋಪಿಸಿದ್ದರು’ ಎಂದು ಪೊಲೀಸರು ವಿವರಿಸಿದರು.