<p><strong>ಬೆಂಗಳೂರು:</strong> ‘ಹೊಸಪೇಟೆಯ ಗೃಹರಕ್ಷಕ ದಳದ ಕಚೇರಿಯಲ್ಲಿ ಯುವ ಬ್ರಿಗೇಡ್ನ ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಅವರು ಸಿಬ್ಬಂದಿಗಳಿಗೆ ಉಪನ್ಯಾಸ ಮಾಡಿದ್ದ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಎಡಿಜಿಪಿ ಸೌಮೇಂದು ಮುಖರ್ಜಿ ತಿಳಿಸಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಅಪರಾಧ ಹಿನ್ನೆಲೆಯುಳ್ಳ ಜನರಿಂದ ಉಪನ್ಯಾಸ ಕೊಡಿಸಿರುವ ವಿಷಯವ ನನ್ನ ಗಮನಕ್ಕೆ ಬಂದಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>‘ಉಪನ್ಯಾಸ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದೇವೆ. ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಜೆ ವೇಳೆ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದೇವೆ’ ಎಂದರು.</p>.<p>[related]</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೊಸಪೇಟೆಯ ಗೃಹರಕ್ಷಕ ದಳದ ಕಚೇರಿಯಲ್ಲಿ ಯುವ ಬ್ರಿಗೇಡ್ನ ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಅವರು ಸಿಬ್ಬಂದಿಗಳಿಗೆ ಉಪನ್ಯಾಸ ಮಾಡಿದ್ದ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಎಡಿಜಿಪಿ ಸೌಮೇಂದು ಮುಖರ್ಜಿ ತಿಳಿಸಿದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಅಪರಾಧ ಹಿನ್ನೆಲೆಯುಳ್ಳ ಜನರಿಂದ ಉಪನ್ಯಾಸ ಕೊಡಿಸಿರುವ ವಿಷಯವ ನನ್ನ ಗಮನಕ್ಕೆ ಬಂದಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<p>‘ಉಪನ್ಯಾಸ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದೇವೆ. ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಜೆ ವೇಳೆ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದೇವೆ’ ಎಂದರು.</p>.<p>[related]</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>