<p><strong>ಬೆಂಗಳೂರು:</strong> `ಯುವ ಶಕ್ತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ~ ಎಂದು ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಇತ್ತೀಚೆಗೆ ನಡೆದ `ಇಂಟೆಪ್ಸ್ -2012~ ತಾಂತ್ರಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಭಾರತ ಕ್ರಿಯಾಶೀಲ ಹಾಗೂ ಬಲಿಷ್ಠ ರಾಷ್ಟ್ರವಾಗಿದ್ದು, ಯುವ ಜನರ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣದ ಪಠ್ಯಕ್ಕಷ್ಟೇ ಸೀಮಿತವಾಗದೇ ಇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು. <br /> <br /> ತಂತ್ರಜ್ಞಾನದ ಕೌಶಲಗಳನ್ನು ರೂಢಿಸಿಕೊಂಡರೆ ಉತ್ತಮವಾದ ಉದ್ಯೋಗಾವಕಾಶಗಳು ಯುವ ಜನರಿಗೆ ಲಭ್ಯವಾಗಲಿವೆ~ ಎಂದು ಅವರು ಸಲಹೆ ಮಾಡಿದರು.ಕಾಲೇಜಿನ ಹಿರಿಯ ವಿದ್ಯಾರ್ಥಿ ಗೋಪಿನಾಥ್ ಮಾತನಾಡಿ, ಹೊಸ ಚಿಂತನೆ ಹಾಗೂ ಆವಿಷ್ಕಾರಗಳಿಗೆ ವಿದ್ಯಾರ್ಥಿಗಳು ಮುಂದಾಗಬೇಕು. <br /> <br /> ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಿದೆ ಎಂದರು.ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ತಾಂತ್ರಿಕ ಉತ್ಸವದಲ್ಲಿ ಚರ್ಚೆಗಳು ಹಾಗೂ ವಸ್ತು ಪ್ರದರ್ಶನಗಳು ನಡೆದವು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಯುವ ಶಕ್ತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ~ ಎಂದು ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಇತ್ತೀಚೆಗೆ ನಡೆದ `ಇಂಟೆಪ್ಸ್ -2012~ ತಾಂತ್ರಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಭಾರತ ಕ್ರಿಯಾಶೀಲ ಹಾಗೂ ಬಲಿಷ್ಠ ರಾಷ್ಟ್ರವಾಗಿದ್ದು, ಯುವ ಜನರ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣದ ಪಠ್ಯಕ್ಕಷ್ಟೇ ಸೀಮಿತವಾಗದೇ ಇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು. <br /> <br /> ತಂತ್ರಜ್ಞಾನದ ಕೌಶಲಗಳನ್ನು ರೂಢಿಸಿಕೊಂಡರೆ ಉತ್ತಮವಾದ ಉದ್ಯೋಗಾವಕಾಶಗಳು ಯುವ ಜನರಿಗೆ ಲಭ್ಯವಾಗಲಿವೆ~ ಎಂದು ಅವರು ಸಲಹೆ ಮಾಡಿದರು.ಕಾಲೇಜಿನ ಹಿರಿಯ ವಿದ್ಯಾರ್ಥಿ ಗೋಪಿನಾಥ್ ಮಾತನಾಡಿ, ಹೊಸ ಚಿಂತನೆ ಹಾಗೂ ಆವಿಷ್ಕಾರಗಳಿಗೆ ವಿದ್ಯಾರ್ಥಿಗಳು ಮುಂದಾಗಬೇಕು. <br /> <br /> ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಿದೆ ಎಂದರು.ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ತಾಂತ್ರಿಕ ಉತ್ಸವದಲ್ಲಿ ಚರ್ಚೆಗಳು ಹಾಗೂ ವಸ್ತು ಪ್ರದರ್ಶನಗಳು ನಡೆದವು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>