ಯಲಹಂಕ: ಟೆಲಿಕಾಂ ಎಂಪ್ಲಾಯೀಸ್ ಕೋ–ಆಪರೇಟಿವ್ ಹೌಸಿಂಗ್ ಸೊಸೈಟಿ ಹಾಗೂ ಟೆಲಿಕಾಂ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ಶ್ರೀರಾಮಪುರ ಸಮೀಪದ ಟೆಲಿಕಾಂ ಬಡಾವಣೆಯಲ್ಲಿ ನಡೆದ ನೂತನ ರಂಗಮಂದಿರ ಗುದ್ದಲಿ ಪೂಜೆ ಹಾಗೂ ಸಂಘದ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ಕೃಷಿ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ₨1 ಕೋಟಿ ವೆಚ್ಚದಲ್ಲಿ ನೂತನ ರಂಗಮಂದಿರವನ್ನು ನಿರ್ಮಾಣ ಮಾಡುವ ಮೂಲಕ ಬಡಾವಣೆಯ ನಿವಾಸಿಗಳಿಗೆ ಮನರಂಜನೆ ಒದಗಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.
ರಂಗಭೂಮಿ ಕಲಾವಿದ ಮಾ.ಹಿರಣ್ಣಯ್ಯ, ಒಬ್ಬ ವ್ಯಕ್ತಿಯು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಲು ರಂಗಭೂಮಿ ನೆರವಾಗುತ್ತದೆ. ಅಲ್ಲದೆ ರಂಗಭೂಮಿಯಿಂದ ವೈಯಕ್ತಿಕ ಬೆಳವಣಿಗೆಯೊಂದಿಗೆ ಸಮಾಜದ ಓರೆ ಕೋರೆಗಳನ್ನು ತಿದ್ದಲು ಸಾಧ್ಯವಾಗುತ್ತದೆ ಎಂದು ಹೇಳಿದರು.