<p><strong>ಬೆಂಗಳೂರು:</strong> ರಸ್ತೆ ಗುಣಮಟ್ಟದ ಮೇಲೆ ನಿಗಾ ಇಡುವ ಜಾಗೃತ ದಳಕ್ಕೆ `ಸ್ವಾಯತ್ತ' ಸ್ಥಾನಮಾನ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್. ಸಿ.ಮಹದೇವಪ್ಪ ಸೋಮವಾರ ಹೇಳಿದರು.<br /> <br /> ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಇದರ ಉಸ್ತುವಾರಿಯ ಜಾಗೃತ ದಳಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲಾಗುವುದು. ಕಳಪೆ ಗುಣಮಟ್ಟದ ರಸ್ತೆ ನಿರ್ಮಿಸಿದ ಗುತ್ತಿಗೆದಾರರು ಮತ್ತು ಉಸ್ತುವಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಅಧಿಕಾರವನ್ನು ಈ ದಳಕ್ಕೆ ನೀಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `ರಸ್ತೆ ತಪಾಸಣಾ ವ್ಯವಸ್ಥೆಯನ್ನು ಜಾರಿ ಮಾಡುವ ಉದ್ದೇಶ ಇದೆ. ಯಾವ ರಸ್ತೆಗೆ ಎಷ್ಟು ಪ್ರಮಾಣದ ಅನುದಾನ ಬಳಸಲಾಗಿದೆ? ಎಷ್ಟು ದಿನದ ನಂತರ ಅದು ದುರಸ್ತಿಗೆ ಬಂದಿದೆ? ಏಕೆ ಬಂತು? ಇತ್ಯಾದಿ ಎಲ್ಲ ಮಾಹಿತಿ ಆನ್ಲೈನ್ನಲ್ಲಿ ಲಭ್ಯವಾಗುವ ಹಾಗೆ ಮಾಡುತ್ತೇವೆ. ಈ ವ್ಯವಸ್ಥೆ ಜಾರಿ ನಂತರ ದುರಸ್ತಿ ಮಾಡಿದ ರಸ್ತೆ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸುವುದಕ್ಕೆ ಅವಕಾಶ ಇರುವುದಿಲ್ಲ. ಪದೇ ಪದೇ ಒಂದೇ ರಸ್ತೆ ಅಭಿವೃದ್ಧಿಗೂ ಕಡಿವಾಣ ಬೀಳಲಿದೆ' ಎಂದು ಅವರು ವಿವರಿಸಿದರು.<br /> <br /> <strong>ಆರು ಪಥದ ರಸ್ತೆ:</strong> ಬೆಂಗಳೂರು- ಮೈಸೂರು ಹೆದ್ದಾರಿಯನ್ನು 6 ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ವಾಹನ ದಟ್ಟಣೆ ಜಾಸ್ತಿಯಾಗಿರುವ ಕಾರಣ ರಸ್ತೆ ಅಗಲ ಮಾಡುವುದು ಅನಿವಾರ್ಯವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆ ಗುಣಮಟ್ಟದ ಮೇಲೆ ನಿಗಾ ಇಡುವ ಜಾಗೃತ ದಳಕ್ಕೆ `ಸ್ವಾಯತ್ತ' ಸ್ಥಾನಮಾನ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್. ಸಿ.ಮಹದೇವಪ್ಪ ಸೋಮವಾರ ಹೇಳಿದರು.<br /> <br /> ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಇದರ ಉಸ್ತುವಾರಿಯ ಜಾಗೃತ ದಳಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲಾಗುವುದು. ಕಳಪೆ ಗುಣಮಟ್ಟದ ರಸ್ತೆ ನಿರ್ಮಿಸಿದ ಗುತ್ತಿಗೆದಾರರು ಮತ್ತು ಉಸ್ತುವಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಅಧಿಕಾರವನ್ನು ಈ ದಳಕ್ಕೆ ನೀಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `ರಸ್ತೆ ತಪಾಸಣಾ ವ್ಯವಸ್ಥೆಯನ್ನು ಜಾರಿ ಮಾಡುವ ಉದ್ದೇಶ ಇದೆ. ಯಾವ ರಸ್ತೆಗೆ ಎಷ್ಟು ಪ್ರಮಾಣದ ಅನುದಾನ ಬಳಸಲಾಗಿದೆ? ಎಷ್ಟು ದಿನದ ನಂತರ ಅದು ದುರಸ್ತಿಗೆ ಬಂದಿದೆ? ಏಕೆ ಬಂತು? ಇತ್ಯಾದಿ ಎಲ್ಲ ಮಾಹಿತಿ ಆನ್ಲೈನ್ನಲ್ಲಿ ಲಭ್ಯವಾಗುವ ಹಾಗೆ ಮಾಡುತ್ತೇವೆ. ಈ ವ್ಯವಸ್ಥೆ ಜಾರಿ ನಂತರ ದುರಸ್ತಿ ಮಾಡಿದ ರಸ್ತೆ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸುವುದಕ್ಕೆ ಅವಕಾಶ ಇರುವುದಿಲ್ಲ. ಪದೇ ಪದೇ ಒಂದೇ ರಸ್ತೆ ಅಭಿವೃದ್ಧಿಗೂ ಕಡಿವಾಣ ಬೀಳಲಿದೆ' ಎಂದು ಅವರು ವಿವರಿಸಿದರು.<br /> <br /> <strong>ಆರು ಪಥದ ರಸ್ತೆ:</strong> ಬೆಂಗಳೂರು- ಮೈಸೂರು ಹೆದ್ದಾರಿಯನ್ನು 6 ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ವಾಹನ ದಟ್ಟಣೆ ಜಾಸ್ತಿಯಾಗಿರುವ ಕಾರಣ ರಸ್ತೆ ಅಗಲ ಮಾಡುವುದು ಅನಿವಾರ್ಯವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>