<p>ಬೆಂಗಳೂರು: ಸಂಚಾರ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರ ಸಂಚಾರ ಪೊಲೀಸರು `ರಸ್ತೆ ಸುರಕ್ಷತೆ ಬಗ್ಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ~ಯನ್ನು ಏರ್ಪಡಿಸಿದ್ದಾರೆ.<br /> ಭಾನುವಾರ(ಏ.29) ಬೆಳಿಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ನಲ್ಲಿ ಈ ಸ್ಪರ್ಧೆ ನಡೆಯಲಿದೆ. <br /> <br /> ಮಧ್ಯಪಾನ ಮಾಡಿ ವಾಹನ ಚಾಲನೆ, ಸೀಟ್ ಬೆಲ್ಟ್ ಬಳಕೆ, ಚಾಲನೆ ವೇಳೆ ಮೊಬೈಲ್ ಬಳಕೆಯಂತಹ ವಿಷಯಗಳನ್ನು ಆಯ್ದು ಸ್ಪರ್ಧಿಗಳು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.<br /> <br /> ನಗರದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದ 800 ಜನ ಸಾವನ್ನಪ್ಪುತ್ತಿದ್ದು, ಐದು ಸಾವಿರ ಜನ ಗಾಯಗೊಳ್ಳುತ್ತಿದ್ದಾರೆ. ಕಳೆದ ವರ್ಷದ ಮೊದಲ ಮೂರು ತಿಂಗಳಿಗೆ ಹೋಲಿಸಿದರೆ ಈ ವರ್ಷ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇಳಿಮುಖವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಸ್ಪರ್ಧೆಯಲ್ಲಿ ಭಾಗವಹಿಸಲು ವಯಸ್ಸಿನ ಅಂತರವಿಲ್ಲ. ಉತ್ತಮ ಚಿತ್ರ ಬಿಡಿಸಿದ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗುವುದು ಹಾಗೂ ಸ್ಪರ್ಧೆಗೆ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಂಚಾರ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರ ಸಂಚಾರ ಪೊಲೀಸರು `ರಸ್ತೆ ಸುರಕ್ಷತೆ ಬಗ್ಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ~ಯನ್ನು ಏರ್ಪಡಿಸಿದ್ದಾರೆ.<br /> ಭಾನುವಾರ(ಏ.29) ಬೆಳಿಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ನಲ್ಲಿ ಈ ಸ್ಪರ್ಧೆ ನಡೆಯಲಿದೆ. <br /> <br /> ಮಧ್ಯಪಾನ ಮಾಡಿ ವಾಹನ ಚಾಲನೆ, ಸೀಟ್ ಬೆಲ್ಟ್ ಬಳಕೆ, ಚಾಲನೆ ವೇಳೆ ಮೊಬೈಲ್ ಬಳಕೆಯಂತಹ ವಿಷಯಗಳನ್ನು ಆಯ್ದು ಸ್ಪರ್ಧಿಗಳು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.<br /> <br /> ನಗರದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದ 800 ಜನ ಸಾವನ್ನಪ್ಪುತ್ತಿದ್ದು, ಐದು ಸಾವಿರ ಜನ ಗಾಯಗೊಳ್ಳುತ್ತಿದ್ದಾರೆ. ಕಳೆದ ವರ್ಷದ ಮೊದಲ ಮೂರು ತಿಂಗಳಿಗೆ ಹೋಲಿಸಿದರೆ ಈ ವರ್ಷ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇಳಿಮುಖವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಸ್ಪರ್ಧೆಯಲ್ಲಿ ಭಾಗವಹಿಸಲು ವಯಸ್ಸಿನ ಅಂತರವಿಲ್ಲ. ಉತ್ತಮ ಚಿತ್ರ ಬಿಡಿಸಿದ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗುವುದು ಹಾಗೂ ಸ್ಪರ್ಧೆಗೆ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>