<p><strong>ಬೆಂಗಳೂರು:`</strong>ರಾಜನೀತಿ ಇಂದು ಕುಲಗೆಟ್ಟು ಹೋಗಿದೆ. ಇದನ್ನು ಸರಿದಾರಿಗೆ ತರುವ ಕಾರ್ಯ ತುರ್ತಾಗಿ ನಡೆಯಬೇಕಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.<br /> <br /> `ಅಧಿಕಾರದಲ್ಲಿರುವವರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವುದು ನಡೆದೇ ಇದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಹೊಣೆಗಾರಿಕೆ ಮರೆತು ಕಾಲಹರಣ ಮಾಡುವುದು ಕೂಡ ನಡೆಯುತ್ತಲೇ ಇದೆ~ ಎಂದು ನುಡಿದರು.<br /> <br /> `ವಿರೋಧ ಪಕ್ಷಗಳು ರಚನಾತ್ಮಕ ಟೀಕೆ ಮಾಡಬೇಕು. ಕೇವಲ ಟೀಕೆ ಮಾಡುವುದೇ ಕೆಲಸವಾಗಬಾರದು. ಒಟ್ಟಿನಲ್ಲಿ ಹದಗೆಟ್ಟಿರುವ ರಾಜಕಾರಣ ಸರಿಪಡಿಸಬೇಕಿದೆ~ ಎಂದರು.<br /> <br /> `ಮೂರು ವರ್ಷಗಳ ಆಡಳಿತಾವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 187 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆ ಮೂಲಕ 1.24 ಲಕ್ಷ ಮಂದಿ ಅರ್ಹ ಫಲಾನುಭವಿಗಳಿಗೆ ವಿವಿಧ ಸಲವತ್ತುಗಳನ್ನು ಒದಗಿಸಲಾಗಿದೆ~ ಎಂದು ಹೇಳಿದರು.<br /> <br /> `ಕ್ರೈಸ್ತರಿಗೆ ವಿವಿಧ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 50 ಕೋಟಿ ರೂಪಾಯಿ ಪ್ರತ್ಯೇಕ ಅನುದಾನ ನೀಡಲಾಗಿದೆ. ಈ ಅನುದಾನದ ಸಮರ್ಪಕ ಬಳಕೆಗೆ ಮೂರು ದಿನಗಳಲ್ಲಿ ಸಮಿತಿಗರಚಿಸಲಾಗುವುದು. ಹಾಗೆಯೇ ಹಜ್ ಯಾತ್ರೆಗೆ ಹೆಚ್ಚಿನ ಅನುದಾನ ನೀಡಲು ಚಿಂತಿಸಲಾಗುವುದು~ ಎಂದರು.<br /> <br /> ನಿಗಮದ ಅಧ್ಯಕ್ಷ ಎನ್.ಬಿ. ಅಬೂಬಕರ್, `ಅಲ್ಪಸಂಖ್ಯಾತರು ನಿವೇಶನ ಖರೀದಿಸಲು ಹಾಗೂ ಮನೆ ನಿರ್ಮಿಸಲು ಮೂರು ಲಕ್ಷ ರೂಪಾಯಿವರೆಗೆ ಸಾಲ ನೀಡುವ ಸೌಲಭ್ಯ ಕಲ್ಪಿಸಬೇಕು~ ಎಂದು ಮನವಿ ಮಾಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಅಬ್ದುಲ್ ಅಜೀಂ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ (ಅಲ್ಪಸಂಖ್ಯಾತರ ಕಲ್ಯಾಣ) ಸೈಯದ್ ಜಮೀರ್ ಪಾಷಾ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> <strong> <br /> ಜೆಡಿಎಸ್ ಶಾಸಕರ ಮೆಚ್ಚುಗೆ</strong>:`ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಿದೆ~ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್ನ ಅಬ್ದುಲ್ ಅಜೀಂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:`</strong>ರಾಜನೀತಿ ಇಂದು ಕುಲಗೆಟ್ಟು ಹೋಗಿದೆ. ಇದನ್ನು ಸರಿದಾರಿಗೆ ತರುವ ಕಾರ್ಯ ತುರ್ತಾಗಿ ನಡೆಯಬೇಕಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.<br /> <br /> `ಅಧಿಕಾರದಲ್ಲಿರುವವರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವುದು ನಡೆದೇ ಇದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಹೊಣೆಗಾರಿಕೆ ಮರೆತು ಕಾಲಹರಣ ಮಾಡುವುದು ಕೂಡ ನಡೆಯುತ್ತಲೇ ಇದೆ~ ಎಂದು ನುಡಿದರು.<br /> <br /> `ವಿರೋಧ ಪಕ್ಷಗಳು ರಚನಾತ್ಮಕ ಟೀಕೆ ಮಾಡಬೇಕು. ಕೇವಲ ಟೀಕೆ ಮಾಡುವುದೇ ಕೆಲಸವಾಗಬಾರದು. ಒಟ್ಟಿನಲ್ಲಿ ಹದಗೆಟ್ಟಿರುವ ರಾಜಕಾರಣ ಸರಿಪಡಿಸಬೇಕಿದೆ~ ಎಂದರು.<br /> <br /> `ಮೂರು ವರ್ಷಗಳ ಆಡಳಿತಾವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 187 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆ ಮೂಲಕ 1.24 ಲಕ್ಷ ಮಂದಿ ಅರ್ಹ ಫಲಾನುಭವಿಗಳಿಗೆ ವಿವಿಧ ಸಲವತ್ತುಗಳನ್ನು ಒದಗಿಸಲಾಗಿದೆ~ ಎಂದು ಹೇಳಿದರು.<br /> <br /> `ಕ್ರೈಸ್ತರಿಗೆ ವಿವಿಧ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 50 ಕೋಟಿ ರೂಪಾಯಿ ಪ್ರತ್ಯೇಕ ಅನುದಾನ ನೀಡಲಾಗಿದೆ. ಈ ಅನುದಾನದ ಸಮರ್ಪಕ ಬಳಕೆಗೆ ಮೂರು ದಿನಗಳಲ್ಲಿ ಸಮಿತಿಗರಚಿಸಲಾಗುವುದು. ಹಾಗೆಯೇ ಹಜ್ ಯಾತ್ರೆಗೆ ಹೆಚ್ಚಿನ ಅನುದಾನ ನೀಡಲು ಚಿಂತಿಸಲಾಗುವುದು~ ಎಂದರು.<br /> <br /> ನಿಗಮದ ಅಧ್ಯಕ್ಷ ಎನ್.ಬಿ. ಅಬೂಬಕರ್, `ಅಲ್ಪಸಂಖ್ಯಾತರು ನಿವೇಶನ ಖರೀದಿಸಲು ಹಾಗೂ ಮನೆ ನಿರ್ಮಿಸಲು ಮೂರು ಲಕ್ಷ ರೂಪಾಯಿವರೆಗೆ ಸಾಲ ನೀಡುವ ಸೌಲಭ್ಯ ಕಲ್ಪಿಸಬೇಕು~ ಎಂದು ಮನವಿ ಮಾಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಅಬ್ದುಲ್ ಅಜೀಂ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ (ಅಲ್ಪಸಂಖ್ಯಾತರ ಕಲ್ಯಾಣ) ಸೈಯದ್ ಜಮೀರ್ ಪಾಷಾ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<br /> <strong> <br /> ಜೆಡಿಎಸ್ ಶಾಸಕರ ಮೆಚ್ಚುಗೆ</strong>:`ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಿದೆ~ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್ನ ಅಬ್ದುಲ್ ಅಜೀಂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>