ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಅಥವಾ ಯಾವುದೇ ರಾಜಕಾರಣಿಯ ಶಿಫಾರಸು ಪತ್ರ ಆಧರಿಸಿ ನಡೆದ ವರ್ಗಾವಣೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂದು ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಪಾಲಿಕೆಯ ಬಿ.ಟಿ. ಮೋಹನ ಕೃಷ್ಣ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಅವರು ಈ ನಿರ್ದೇಶನ ನೀಡಿದ್ದಾರೆ.
ರಾಜಕಾರಣಿಗಳ ಶಿಫಾರಸು ಪತ್ರ ಆಧರಿಸಿ ತಮ್ಮ ಜಾಗಕ್ಕೆ ಬೇರೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಅರ್ಜಿಯಲ್ಲಿ ದೂರಿದ್ದರು. ಅರ್ಜಿ ಮಾನ್ಯ ಮಾಡಲಾಗಿದ್ದು, ವರ್ಗಾವಣೆ ಆದೇಶ ರದ್ದುಗೊಳಿಸಲಾಗಿದೆ.