ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ನಲ್ಲಿ ಆದ್ಯತೆ- ಎಬಿವಿಪಿ
ಬೆಂಗಳೂರು: ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ದೊರೆತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಕ್ರಿಯೆ ನೀಡಿದೆ.
ಉನ್ನತ ಶಿಕ್ಷಣಕ್ಕೆ ರೂ 2002 ಕೋಟಿ ಸೇರಿದಂತೆ ಒಟ್ಟು ಶಿಕ್ಷಣ ರಂಗಕ್ಕೆ ರೂ 12,850 ಕೋಟಿ ಮೀಸಲಿಟ್ಟಿರುವುದು, ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಮೇಲ್ದರ್ಜೆಗೆ ಏರಿಸಲು ರೂ 5 ಕೋಟಿ, ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಿರುವುದು, ಎಸ್.ಸಿ/ಎಸ್.ಟಿ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಮಾಸಿಕ ವೇತನ ರೂ 850ಕ್ಕೆ ಹೆಚ್ಚಳ ಮಾಡಿರುವುದು ಹಾಗೂ ಇತರೆ ಕ್ರಮಗಳು ಸ್ವಾಗತಾರ್ಹ ಎಂದು ಎಬಿವಿಪಿ ರಾಜ್ಯ ಘಟಕದ ಅಧ್ಯಕ್ಷ ಡಾ.ಶ್ರೀನಿವಾಸ ಬಳ್ಳಿ, ಕಾರ್ಯದರ್ಶಿ ವಿನಯ್ ಬಿದರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.