<p><strong>ರಾಜರಾಜೇಶ್ವರಿ ನಗರ: </strong>ಬೆಂಗಳೂರು ದಕ್ಷಿಣ ತಾಲ್ಲೂಕು ರಾಮೋಹಳ್ಳಿಯಲ್ಲಿ ಇತಿಹಾಸ ಪ್ರಸಿದ್ದ ರಾಮಚಂದ್ರಸ್ವಾಮಿ ದೇವರ ಬ್ರಹ್ಮ ರಥೋತ್ಸವವು ಸಡಗರ, ಸಂಭ್ರಮದಿಂದ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಭಕ್ತರು ಇದಕ್ಕೆ ಸಾಕ್ಷಿಯಾಗಿದ್ದರು. ರಾಮಚಂದ್ರಸ್ವಾಮಿ, ಆಂಜನೇಯ, ಸೀತಾ, ಲಕ್ಷ್ಮಣ, ಭರತ, ಶತೃಘ್ನ ದೇವರುಗಳ ವಿಗ್ರಹಗಳನ್ನಿಟ್ಟು ಪೂಜೆ ಸಲ್ಲಿಸುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. <br /> </p>.<p>ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಸತಿ ಮಹಾಮಂಡಳದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ದೇವಸ್ಥಾನ ಆಡಳಿತ ಮಂಡಳಿಯ ವಿ.ವೇಣುಗೋಪಾಲ್, ಆರ್.ಪಿ. ಸೋಮಶೇಖರ್, ಆರ್.ಪಿ. ಪ್ರಕಾಶ್, ಆರ್.ಎಂ.ವಿ.ಸ್ವಾಮಿ, ಶ್ರಿನಿವಾಸ ರೆಡ್ಡಿ, ಎಂ.ಕೃಷ್ಣಪ್ಪ, ವಿಜಯಲಕ್ಷ್ಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವೆಂಕಟಮ್ಮ ರೇವಣಸಿದ್ದಯ್ಯ, ಜಿ.ಪಂ. ಸದಸ್ಯೆ ಸರ್ವಮಂಗಳ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<p>ಭಕ್ತಾದಿಗಳು ಜಯಘೋಷದೊಂದಿಗೆ ರಥವನ್ನು ಎಳೆದು ಹೂವು, ಬಾಳೆಹಣ್ಣುಗಳನ್ನು ಎಸೆಯುವುದರ ಮೂಲಕ ಕುಣಿದು ಕುಪ್ಪಳಿಸಿದರು.ನಾಡಿನ ವಿವಿಧ ಜಾನಪದ ಕಲಾ ಉತ್ಸವಗಳು, ಪೂಜಾ ಕುಣಿತ, ಪಟ್ಟದ ಕುಣಿತ ಸೇರಿದಂತೆ ಹಲವು ಪ್ರದರ್ಶನಗಳು ಜನರ ಗಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ: </strong>ಬೆಂಗಳೂರು ದಕ್ಷಿಣ ತಾಲ್ಲೂಕು ರಾಮೋಹಳ್ಳಿಯಲ್ಲಿ ಇತಿಹಾಸ ಪ್ರಸಿದ್ದ ರಾಮಚಂದ್ರಸ್ವಾಮಿ ದೇವರ ಬ್ರಹ್ಮ ರಥೋತ್ಸವವು ಸಡಗರ, ಸಂಭ್ರಮದಿಂದ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಭಕ್ತರು ಇದಕ್ಕೆ ಸಾಕ್ಷಿಯಾಗಿದ್ದರು. ರಾಮಚಂದ್ರಸ್ವಾಮಿ, ಆಂಜನೇಯ, ಸೀತಾ, ಲಕ್ಷ್ಮಣ, ಭರತ, ಶತೃಘ್ನ ದೇವರುಗಳ ವಿಗ್ರಹಗಳನ್ನಿಟ್ಟು ಪೂಜೆ ಸಲ್ಲಿಸುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. <br /> </p>.<p>ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಸತಿ ಮಹಾಮಂಡಳದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ದೇವಸ್ಥಾನ ಆಡಳಿತ ಮಂಡಳಿಯ ವಿ.ವೇಣುಗೋಪಾಲ್, ಆರ್.ಪಿ. ಸೋಮಶೇಖರ್, ಆರ್.ಪಿ. ಪ್ರಕಾಶ್, ಆರ್.ಎಂ.ವಿ.ಸ್ವಾಮಿ, ಶ್ರಿನಿವಾಸ ರೆಡ್ಡಿ, ಎಂ.ಕೃಷ್ಣಪ್ಪ, ವಿಜಯಲಕ್ಷ್ಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವೆಂಕಟಮ್ಮ ರೇವಣಸಿದ್ದಯ್ಯ, ಜಿ.ಪಂ. ಸದಸ್ಯೆ ಸರ್ವಮಂಗಳ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<p>ಭಕ್ತಾದಿಗಳು ಜಯಘೋಷದೊಂದಿಗೆ ರಥವನ್ನು ಎಳೆದು ಹೂವು, ಬಾಳೆಹಣ್ಣುಗಳನ್ನು ಎಸೆಯುವುದರ ಮೂಲಕ ಕುಣಿದು ಕುಪ್ಪಳಿಸಿದರು.ನಾಡಿನ ವಿವಿಧ ಜಾನಪದ ಕಲಾ ಉತ್ಸವಗಳು, ಪೂಜಾ ಕುಣಿತ, ಪಟ್ಟದ ಕುಣಿತ ಸೇರಿದಂತೆ ಹಲವು ಪ್ರದರ್ಶನಗಳು ಜನರ ಗಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>