ಬೆಂಗಳೂರು: ಯಾವುದೇ ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ದೊಡ್ಡದಿದೆ ಎಂದು ಸ್ಪಂದನಾ ಕ್ರೆಡಿಟ್ ಕೋ ಆಪರೇಟೀವ್ ಸೊಸೈಟಿ ಲಿಮಿಟೆಡ್ ಅಧ್ಯಕ್ಷ ಎನ್.ನಂಜುಂಡೇಶ್ ತಿಳಿಸಿದರು.
ಕೊಡಿಗೆಹಳ್ಳಿಯಲ್ಲಿ ಸ್ಪಂದನಾ ಕ್ರೆಡಿಟ್ ಕೋ ಆಪರೇಟೀವ್ ಸೊಸೈಟಿ ಲಿಮಿಟೆಡ್ನ ಮೂರನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ವಿಶ್ವಾಸ, ಪ್ರಾಮಾಣಿಕತೆಯೇ ವ್ಯವಹಾರ ನಡೆಸಲು ರಹದಾರಿ. ಗ್ರಾಮೀಣ ಪ್ರದೇಶದ ಜನರ ಆರ್ಥಿಕ, ಸಾಮಾಜಿಕ ಸುಧಾರಣೆಗೆ ಬ್ಯಾಂಕು ಹೆಚ್ಚಿನ ಆದ್ಯತೆ ನೀಡಿದೆ. ಗ್ರಾಹಕರ ನಂಬಿಕೆಗೆ ಪಾತ್ರವಾಗಿದೆ ಎಂದರು.
ಗ್ರಾಹಕರು ಬ್ಯಾಂಕು ಒದಗಿಸುವ ಸಾಲಸೌಲಭ್ಯ ಪಡೆದು, ಜೀವನಮಟ್ಟ ಉತ್ತಮಪಡಿಸಿಕೊಳ್ಳಬೇಕು. ಸಾಲ ಸಕಾಲಕ್ಕೆ ಮರುಪಾವತಿಸುವ ಮೂಲಕ ಬ್ಯಾಂಕಿನ ಜತೆಗೆ, ಉತ್ತಮ ಬಾಂಧವ್ಯ ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.