<p>ಬೆಂಗಳೂರು: ರೈತರೊಬ್ಬರ ಹೆಸರಿಗೆ ಜಮೀನು ಮಂಜೂರು ಮಾಡಲು 10 ಸಾವಿರ ರೂಪಾಯಿ ಲಂಚ ಕೇಳಿದ ಭೂಸ್ವಾಧೀನ ಮಂಜೂರಾತಿ ಇಲಾಖೆಯ ಶಾಖಾಧಿಕಾರಿ ವೈ.ಎನ್. ರುದ್ರಪ್ಪ ಅವರಿಗೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ 14 ತಿಂಗಳ ಕಠಿಣ ಶಿಕ್ಷೆ ಮತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.<br /> <br /> ತಿಮ್ಮರಾಯಪ್ಪ ಎಂಬುವರು ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಐಮರೆಡ್ಡಿ ಹಳ್ಳಿಯಲ್ಲಿ 35 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು ಉಳುಮೆ ನಡೆಸುತ್ತಿದ್ದರು.<br /> <br /> ಇ ಸರ್ಕಾರಿ ಜಮೀನನ್ನು ಸಕ್ರಮಗೊಳಿಸಿ ತಿಮ್ಮರಾಯಪ್ಪ ಅವರ ಹೆಸರಿಗೆ ಮಾಡಿಕೊಡಲು, ರುದ್ರಪ್ಪ ಅವರು ಲಂಚ ಕೇಳಿದ್ದರು. ಲಂಚ ಕೊಡಲು ಮನಸ್ಸು ಮಾಡದ ತಿಮ್ಮರಾಯಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> ರುದ್ರಪ್ಪ ಅವರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರೈತರೊಬ್ಬರ ಹೆಸರಿಗೆ ಜಮೀನು ಮಂಜೂರು ಮಾಡಲು 10 ಸಾವಿರ ರೂಪಾಯಿ ಲಂಚ ಕೇಳಿದ ಭೂಸ್ವಾಧೀನ ಮಂಜೂರಾತಿ ಇಲಾಖೆಯ ಶಾಖಾಧಿಕಾರಿ ವೈ.ಎನ್. ರುದ್ರಪ್ಪ ಅವರಿಗೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ 14 ತಿಂಗಳ ಕಠಿಣ ಶಿಕ್ಷೆ ಮತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.<br /> <br /> ತಿಮ್ಮರಾಯಪ್ಪ ಎಂಬುವರು ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಐಮರೆಡ್ಡಿ ಹಳ್ಳಿಯಲ್ಲಿ 35 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು ಉಳುಮೆ ನಡೆಸುತ್ತಿದ್ದರು.<br /> <br /> ಇ ಸರ್ಕಾರಿ ಜಮೀನನ್ನು ಸಕ್ರಮಗೊಳಿಸಿ ತಿಮ್ಮರಾಯಪ್ಪ ಅವರ ಹೆಸರಿಗೆ ಮಾಡಿಕೊಡಲು, ರುದ್ರಪ್ಪ ಅವರು ಲಂಚ ಕೇಳಿದ್ದರು. ಲಂಚ ಕೊಡಲು ಮನಸ್ಸು ಮಾಡದ ತಿಮ್ಮರಾಯಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> ರುದ್ರಪ್ಪ ಅವರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>