<p><strong>ಬೆಂಗಳೂರು:</strong> ‘ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾದಾಗ ಮಾತ್ರ ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನಿವಾರಿಸಬಹುದು’ ಎಂದು ಬೆಂಗಳೂರು ಕೃಷಿ ವಿಶ್ವವಿ ದ್ಯಾಲಯದ ಕುಲಪತಿ ಡಾ.ಕೆ.ನಾರಾ ಯಣಗೌಡ ಹೇಳಿದರು.<br /> <br /> ಕೃಷಿಕ್ ಸರ್ವೋದಯ ಫೌಂಡೇಶನ್ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಂಸ್ಥೆಯ ಆಜೀವ ಸದಸ್ಯರ ಸಮಾವೇಶ, ರೈತರಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಯುವಕರು ಕೃಷಿಯಲ್ಲಿ ತೊಡಗದೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾಗಿ ಪರಸ್ಪರ ಸಹಕಾರದಿಂದ ಕೃಷಿ ಕೆಲಸಗಳನ್ನು ನಿರ್ವ ಹಿಸಿದರೆ ಕಾರ್ಮಿಕರ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.<br /> <br /> ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ಉತ್ತಮ ಸ್ಥಾನಕ್ಕೇರಲು ಸಾಧ್ಯ. ಆ ನಿಟ್ಟಿನಲ್ಲಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಶ್ಲಾಘಿಸಿದರು.<br /> <br /> ‘ಸ್ಪರ್ಧಾತ್ಮಕ ಪರೀಕ್ಷೆ ತೆಗೆದು ಕೊಳ್ಳುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ವೈಯಕ್ತಿಕವಾಗಿ ಸಂಸ್ಥೆಗೆ ಪ್ರತಿವರ್ಷ ₨ 50 ಲಕ್ಷ ನೀಡುತ್ತೇನೆ. ಇದೇ 15ರಂದು ₨10 ಲಕ್ಷ ನೀಡಲಾ ಗುವುದು. ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗರ ಸಂಘವು ಸಹ ಸಂಸ್ಥೆಗೆ ವಾರ್ಷಿಕ ತಲಾ ₨50 ಲಕ್ಷ ನೀಡಬೇಕು’ ಎಂದು ಮನವಿ ಮಾಡಿದರು.<br /> <br /> ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಸಂಸ್ಥೆಯ ಎಲ್ಲ ಕೆಲಸಗಳಲ್ಲಿಯೂ ಮಠವು ಕೈಜೋ ಡಿಸಲಿದೆ ಎಂದು ಭರವಸೆ ನೀಡಿದರು.<br /> <br /> ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ 74 ವಿದ್ಯಾರ್ಥಿಗಳಗೆ ₨10 ಲಕ್ಷ ವಿದ್ಯಾರ್ಥಿ ವೇತನದ ಚೆಕ್ ವಿತರಿಸ ಲಾಯಿತು. ಪ್ರಗತಿಪರ ಕೃಷಿಕರಾದ ಉಡುಪಿ ಜಿಲ್ಲೆಯ ತಿಮ್ಮಣ್ಣ ಹೆಗಡೆ, ಚಿತ್ರದುರ್ಗ ಜಿಲ್ಲೆಯ ವಿರುಪಮ್ಮ ಅವರನ್ನು ಸನ್ಮಾನಿಸಲಾಯಿತು.<br /> <br /> <strong>ರೈತರಿಗೆ ಆನ್ಲೈನ್ನಲ್ಲಿ ಕೃಷಿ ಮಾಹಿತಿ<br /> ಬೆಂಗಳೂರು: </strong>ಆಯಾ ಜಿಲ್ಲೆಗಳಲ್ಲಿನ ಕೃಷಿ ಚಟುವಟಿಕೆಗಳಿಗೆ ಸಂಬಂ ಧಿಸಿದ ಪೂರ್ಣ ಮಾಹಿತಿಯನ್ನು ನಿತ್ಯವೂ ರೈತರಿಗೆ ಸುಲಭವಾಗಿ ತಲುಪಿಸಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಯೋಜನೆ ರೂಪಿಸಿದೆ.<br /> <br /> ಹಳ್ಳಿಗಳಲ್ಲಿರುವ ಹಾಲು ಉತ್ಪಾ ದಕರ ಸಹಕಾರ ಸಂಘಗಳ ಮೂಲಕ ರೈತರಿಗೆ ಅಗತ್ಯ ಹಾಗೂ ಸೂಕ್ತ ಮಾಹಿತಿಯನ್ನು ಒದಗಿಸು ವುದು ₨ 2 ಕೋಟಿ ವೆಚ್ಚದ ಈ ಯೋಜನೆಯ ಮುಖ್ಯ ಉದ್ದೇಶ.<br /> <br /> ರಾಜ್ಯ ಸರ್ಕಾರ ಇದಕ್ಕೆ ಹಸಿರು ನಿಶಾನೆ ತೋರಿಸಿದ್ದು ಶೀಘ್ರದಲ್ಲೇ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬ ಳ್ಳಾಪುರ ಜಿಲ್ಲೆಗಳಲ್ಲಿ ಪ್ರಾಯೋಗಿ ಕವಾಗಿ ಜಾರಿಗೆ ತರಲಾಗುವುದು. ಈ ಸಂಬಂಧ ಈಗಾಗಲೇ ಕೆಎಂ ಎಫ್ ಜತೆಗೆ ಚರ್ಚಿಸಲಾಗಿದ್ದು, 200 ಹಳ್ಳಿಗಳನ್ನು ಗುರುತಿಸ ಲಾಗಿದೆ ಎಂದು ಬೆಂಗಳೂರು ಕೃಷಿ ವಿ.ವಿ ವಿಸ್ತರಣಾ ವಿಭಾಗದ ನಿರ್ದೇ ಶಕ ಎನ್. ನಾಗರಾಜ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾದಾಗ ಮಾತ್ರ ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನಿವಾರಿಸಬಹುದು’ ಎಂದು ಬೆಂಗಳೂರು ಕೃಷಿ ವಿಶ್ವವಿ ದ್ಯಾಲಯದ ಕುಲಪತಿ ಡಾ.ಕೆ.ನಾರಾ ಯಣಗೌಡ ಹೇಳಿದರು.<br /> <br /> ಕೃಷಿಕ್ ಸರ್ವೋದಯ ಫೌಂಡೇಶನ್ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಂಸ್ಥೆಯ ಆಜೀವ ಸದಸ್ಯರ ಸಮಾವೇಶ, ರೈತರಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಯುವಕರು ಕೃಷಿಯಲ್ಲಿ ತೊಡಗದೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾಗಿ ಪರಸ್ಪರ ಸಹಕಾರದಿಂದ ಕೃಷಿ ಕೆಲಸಗಳನ್ನು ನಿರ್ವ ಹಿಸಿದರೆ ಕಾರ್ಮಿಕರ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.<br /> <br /> ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ಉತ್ತಮ ಸ್ಥಾನಕ್ಕೇರಲು ಸಾಧ್ಯ. ಆ ನಿಟ್ಟಿನಲ್ಲಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಶ್ಲಾಘಿಸಿದರು.<br /> <br /> ‘ಸ್ಪರ್ಧಾತ್ಮಕ ಪರೀಕ್ಷೆ ತೆಗೆದು ಕೊಳ್ಳುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ವೈಯಕ್ತಿಕವಾಗಿ ಸಂಸ್ಥೆಗೆ ಪ್ರತಿವರ್ಷ ₨ 50 ಲಕ್ಷ ನೀಡುತ್ತೇನೆ. ಇದೇ 15ರಂದು ₨10 ಲಕ್ಷ ನೀಡಲಾ ಗುವುದು. ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗರ ಸಂಘವು ಸಹ ಸಂಸ್ಥೆಗೆ ವಾರ್ಷಿಕ ತಲಾ ₨50 ಲಕ್ಷ ನೀಡಬೇಕು’ ಎಂದು ಮನವಿ ಮಾಡಿದರು.<br /> <br /> ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಸಂಸ್ಥೆಯ ಎಲ್ಲ ಕೆಲಸಗಳಲ್ಲಿಯೂ ಮಠವು ಕೈಜೋ ಡಿಸಲಿದೆ ಎಂದು ಭರವಸೆ ನೀಡಿದರು.<br /> <br /> ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ 74 ವಿದ್ಯಾರ್ಥಿಗಳಗೆ ₨10 ಲಕ್ಷ ವಿದ್ಯಾರ್ಥಿ ವೇತನದ ಚೆಕ್ ವಿತರಿಸ ಲಾಯಿತು. ಪ್ರಗತಿಪರ ಕೃಷಿಕರಾದ ಉಡುಪಿ ಜಿಲ್ಲೆಯ ತಿಮ್ಮಣ್ಣ ಹೆಗಡೆ, ಚಿತ್ರದುರ್ಗ ಜಿಲ್ಲೆಯ ವಿರುಪಮ್ಮ ಅವರನ್ನು ಸನ್ಮಾನಿಸಲಾಯಿತು.<br /> <br /> <strong>ರೈತರಿಗೆ ಆನ್ಲೈನ್ನಲ್ಲಿ ಕೃಷಿ ಮಾಹಿತಿ<br /> ಬೆಂಗಳೂರು: </strong>ಆಯಾ ಜಿಲ್ಲೆಗಳಲ್ಲಿನ ಕೃಷಿ ಚಟುವಟಿಕೆಗಳಿಗೆ ಸಂಬಂ ಧಿಸಿದ ಪೂರ್ಣ ಮಾಹಿತಿಯನ್ನು ನಿತ್ಯವೂ ರೈತರಿಗೆ ಸುಲಭವಾಗಿ ತಲುಪಿಸಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಯೋಜನೆ ರೂಪಿಸಿದೆ.<br /> <br /> ಹಳ್ಳಿಗಳಲ್ಲಿರುವ ಹಾಲು ಉತ್ಪಾ ದಕರ ಸಹಕಾರ ಸಂಘಗಳ ಮೂಲಕ ರೈತರಿಗೆ ಅಗತ್ಯ ಹಾಗೂ ಸೂಕ್ತ ಮಾಹಿತಿಯನ್ನು ಒದಗಿಸು ವುದು ₨ 2 ಕೋಟಿ ವೆಚ್ಚದ ಈ ಯೋಜನೆಯ ಮುಖ್ಯ ಉದ್ದೇಶ.<br /> <br /> ರಾಜ್ಯ ಸರ್ಕಾರ ಇದಕ್ಕೆ ಹಸಿರು ನಿಶಾನೆ ತೋರಿಸಿದ್ದು ಶೀಘ್ರದಲ್ಲೇ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬ ಳ್ಳಾಪುರ ಜಿಲ್ಲೆಗಳಲ್ಲಿ ಪ್ರಾಯೋಗಿ ಕವಾಗಿ ಜಾರಿಗೆ ತರಲಾಗುವುದು. ಈ ಸಂಬಂಧ ಈಗಾಗಲೇ ಕೆಎಂ ಎಫ್ ಜತೆಗೆ ಚರ್ಚಿಸಲಾಗಿದ್ದು, 200 ಹಳ್ಳಿಗಳನ್ನು ಗುರುತಿಸ ಲಾಗಿದೆ ಎಂದು ಬೆಂಗಳೂರು ಕೃಷಿ ವಿ.ವಿ ವಿಸ್ತರಣಾ ವಿಭಾಗದ ನಿರ್ದೇ ಶಕ ಎನ್. ನಾಗರಾಜ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>