<p><strong>ಬೆಂಗಳೂರು:</strong> ನಗರದ ಜ್ಞಾನಭಾರತಿ, ಗಿರಿನಗರ ಮತ್ತು ಆರ್ಎಂಸಿ ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಕೇವಲ ಎರಡು ತಾಸುಗಳ ಅಂತರದಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದಾರೆ.</p>.<p>ಡ್ರಾಪ್ ನೀಡುವ ನೆಪದಲ್ಲಿ ಸುರೇಂದ್ರಬಾಬು ಎಂಬುವವರನ್ನು ಕಾರಿನಲ್ಲಿ ಕರೆದೊಯ್ದ ದುಷ್ಕರ್ಮಿಗಳು ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ನಾಗರಬಾವಿ ವರ್ತುಲ ರಸ್ತೆಯಲ್ಲಿ ನಡೆದಿದೆ.</p>.<p>ರಾಮಕೃಷ್ಣನಗರ ನಿವಾಸಿಯಾದ ಸುರೇಂದ್ರಬಾಬು, ಟೈಲ್ಸ್ ಕಂಪೆನಿಯೊಂದರಲ್ಲಿ ವ್ಯವಸ್ಥಾಪಕರಾಗಿದ್ದಾರೆ. ತಮಿಳುನಾಡಿಗೆ ಹೊರಟಿದ್ದ ಅವರು, ಮನೆಯಿಂದ ನಂದಿನಿಲೇಔಟ್ ವರ್ತುಲ ರಸ್ತೆಗೆ ನಡೆದು ಬಂದು ಶಾಂತಿನಗರಕ್ಕೆ ಹೋಗಲು ಬಿಎಂಟಿಸಿ ಬಸ್ಗೆ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಡ್ರಾಪ್ ನೀಡುವುದಾಗಿ ಹೇಳಿ ಅವರನ್ನು ವಾಹನಕ್ಕೆ ಹತ್ತಿಸಿಕೊಂಡರು. ನಂತರ ನಾಗರಬಾವಿ ವರ್ತುಲ ರಸ್ತೆಗೆ ಕರೆದೊಯ್ದು ಮಾರಕಾಸ್ತ್ರಗಳಿಂದ ಬೆದರಿಸಿ 15 ಗ್ರಾಂ ಚಿನ್ನದ ಸರ, 9 ಸಾವಿರ ನಗದು ಮತ್ತು ಎಟಿಎಂ ಕಾರ್ಡ್ ಕಿತ್ತುಕೊಂಡಿದ್ದಾರೆ. ಬಳಿಕ ಕಾರಿನಿಂದ ಕೆಳಗಿಳಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ಗಿರಿನಗರ:</strong> ನಾಯಂಡಹಳ್ಳಿ ಜಂಕ್ಷನ್ನಲ್ಲೂ ಇದೇ ರೀತಿಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ಚಿಂತನ್ ಎಂಬುವರ ಚಿನ್ನದ ಸರ, ಉಂಗುರ ಮತ್ತು ಹಣ ದರೋಡೆ ಮಾಡಿದ್ದಾರೆ.</p>.<p>ಬನ್ನೇರುಘಟ್ಟ ರಸ್ತೆಯ ರಾಮಯ್ಯಲೇಔಟ್ ನಿವಾಸಿಯಾದ ಚಿಂತನ್, ಮಂಗಳವಾರ ಮೈಸೂರಿಗೆ ಹೋಗಿದ್ದರು. ರಾತ್ರಿ 11.45ರ ಸುಮಾರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ನಗರಕ್ಕೆ ಬಂದ ಅವರು ನಾಯಂಡಹಳ್ಳಿ ಜಂಕ್ಷನ್ನಲ್ಲಿ ಇಳಿದು ಆಟೊಗೆ ಕಾಯುತ್ತಿದ್ದರು.</p>.<p>ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತರು, ಡ್ರಾಪ್ ನೀಡುವ ಸೋಗಿನಲ್ಲಿ ಅವರನ್ನು ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ. ದರೋಡೆಯಾಗಿರುವ ವಸ್ತುಗಳ ಮೌಲ್ಯ ಸುಮಾರು ಒಂದು ಲಕ್ಷ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><strong>ಆರ್ಎಂಸಿ ಯಾರ್ಡ್:</strong> ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ ಕೇಶವಮೂರ್ತಿ ಎಂಬುವರ ಚಿನ್ನದ ಸರ, ಉಂಗುರ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.</p>.<p>ಕೇಶವಮೂರ್ತಿ ಕೆಲಸ ಮುಗಿಸಿಕೊಂಡು ಹೆಬ್ಬಾಳಕ್ಕೆ ಹೋಗಲೆಂದು ಬಿಎಂಟಿಸಿ ಬಸ್ಗೆ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡ್ರಾಪ್ ನೀಡುವ ನೆಪದಲ್ಲಿ ಅವರನ್ನು ಕರೆದೊಯ್ದು ದರೋಡೆ ನಡೆಸಿದ್ದಾರೆ.</p>.<p>ಹಣ ಸೇರಿದಂತೆ 35 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ಒಂದೇ ತಂಡದ ಕೃತ್ಯ?:</strong> `ಕೇವಲ ಎರಡು ತಾಸಿನ ಅಂತರದಲ್ಲಿ ಈ ಮೂರು ದರೋಡೆ ಪ್ರಕರಣಗಳು ನಡೆದಿವೆ. ಮೂರು ಸ್ಥಳಗಳಲ್ಲೂ ಕೃತ್ಯಕ್ಕೆ ಬಳಸಿರುವ ಕಾರಿನ ಲಕ್ಷಣಗಳ ನಡುವೆ ಸಾಮ್ಯತೆ ಇದೆ. ಜತೆಗೆ ಮೂರೂ ಪ್ರಕರಣಗಳು ಒಂದು ರೀತಿಯಲ್ಲಿ ನಡೆದಿವೆ. ಈ ಅಂಶಗಳನ್ನು ಗಮನಿಸಿದರೆ ಒಂದೇ ತಂಡದವರು ಈ ಕೃತ್ಯ ಎಸಗಿರುವ ಶಂಕೆ ಮೂಡುತ್ತದೆ. ಈ ಪ್ರಕರಣಗಳ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಸದ್ಯದಲ್ಲೇ ಅವರನ್ನು ಬಂಧಿಸಲಾಗುತ್ತದೆ~ ಎಂದು ಅಪರಾಧ ವಿಭಾಗದ (ಪಶ್ಚಿಮ) ಜಂಟಿ ಪೊಲೀಸ್ ಕಮಿಷನರ್ ಪ್ರಣವ್ ಮೊಹಾಂತಿ `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ದೂರುದಾರರಿಂದ ಮಾಹಿತಿ ಪಡೆದುಕೊಂಡ ಮೊಹಾಂತಿ ಅವರು, ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಲ್ಲದೇ, ದರೋಡೆ ನಡೆದಿರುವ ಠಾಣಾ ವ್ಯಾಪ್ತಿಯ ಸಿಬ್ಬಂದಿ ಮತ್ತು ಉಪ ವಿಭಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಜ್ಞಾನಭಾರತಿ, ಗಿರಿನಗರ ಮತ್ತು ಆರ್ಎಂಸಿ ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಕೇವಲ ಎರಡು ತಾಸುಗಳ ಅಂತರದಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದಾರೆ.</p>.<p>ಡ್ರಾಪ್ ನೀಡುವ ನೆಪದಲ್ಲಿ ಸುರೇಂದ್ರಬಾಬು ಎಂಬುವವರನ್ನು ಕಾರಿನಲ್ಲಿ ಕರೆದೊಯ್ದ ದುಷ್ಕರ್ಮಿಗಳು ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ನಾಗರಬಾವಿ ವರ್ತುಲ ರಸ್ತೆಯಲ್ಲಿ ನಡೆದಿದೆ.</p>.<p>ರಾಮಕೃಷ್ಣನಗರ ನಿವಾಸಿಯಾದ ಸುರೇಂದ್ರಬಾಬು, ಟೈಲ್ಸ್ ಕಂಪೆನಿಯೊಂದರಲ್ಲಿ ವ್ಯವಸ್ಥಾಪಕರಾಗಿದ್ದಾರೆ. ತಮಿಳುನಾಡಿಗೆ ಹೊರಟಿದ್ದ ಅವರು, ಮನೆಯಿಂದ ನಂದಿನಿಲೇಔಟ್ ವರ್ತುಲ ರಸ್ತೆಗೆ ನಡೆದು ಬಂದು ಶಾಂತಿನಗರಕ್ಕೆ ಹೋಗಲು ಬಿಎಂಟಿಸಿ ಬಸ್ಗೆ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಡ್ರಾಪ್ ನೀಡುವುದಾಗಿ ಹೇಳಿ ಅವರನ್ನು ವಾಹನಕ್ಕೆ ಹತ್ತಿಸಿಕೊಂಡರು. ನಂತರ ನಾಗರಬಾವಿ ವರ್ತುಲ ರಸ್ತೆಗೆ ಕರೆದೊಯ್ದು ಮಾರಕಾಸ್ತ್ರಗಳಿಂದ ಬೆದರಿಸಿ 15 ಗ್ರಾಂ ಚಿನ್ನದ ಸರ, 9 ಸಾವಿರ ನಗದು ಮತ್ತು ಎಟಿಎಂ ಕಾರ್ಡ್ ಕಿತ್ತುಕೊಂಡಿದ್ದಾರೆ. ಬಳಿಕ ಕಾರಿನಿಂದ ಕೆಳಗಿಳಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ಗಿರಿನಗರ:</strong> ನಾಯಂಡಹಳ್ಳಿ ಜಂಕ್ಷನ್ನಲ್ಲೂ ಇದೇ ರೀತಿಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ಚಿಂತನ್ ಎಂಬುವರ ಚಿನ್ನದ ಸರ, ಉಂಗುರ ಮತ್ತು ಹಣ ದರೋಡೆ ಮಾಡಿದ್ದಾರೆ.</p>.<p>ಬನ್ನೇರುಘಟ್ಟ ರಸ್ತೆಯ ರಾಮಯ್ಯಲೇಔಟ್ ನಿವಾಸಿಯಾದ ಚಿಂತನ್, ಮಂಗಳವಾರ ಮೈಸೂರಿಗೆ ಹೋಗಿದ್ದರು. ರಾತ್ರಿ 11.45ರ ಸುಮಾರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ನಗರಕ್ಕೆ ಬಂದ ಅವರು ನಾಯಂಡಹಳ್ಳಿ ಜಂಕ್ಷನ್ನಲ್ಲಿ ಇಳಿದು ಆಟೊಗೆ ಕಾಯುತ್ತಿದ್ದರು.</p>.<p>ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತರು, ಡ್ರಾಪ್ ನೀಡುವ ಸೋಗಿನಲ್ಲಿ ಅವರನ್ನು ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ. ದರೋಡೆಯಾಗಿರುವ ವಸ್ತುಗಳ ಮೌಲ್ಯ ಸುಮಾರು ಒಂದು ಲಕ್ಷ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><strong>ಆರ್ಎಂಸಿ ಯಾರ್ಡ್:</strong> ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ ಕೇಶವಮೂರ್ತಿ ಎಂಬುವರ ಚಿನ್ನದ ಸರ, ಉಂಗುರ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.</p>.<p>ಕೇಶವಮೂರ್ತಿ ಕೆಲಸ ಮುಗಿಸಿಕೊಂಡು ಹೆಬ್ಬಾಳಕ್ಕೆ ಹೋಗಲೆಂದು ಬಿಎಂಟಿಸಿ ಬಸ್ಗೆ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡ್ರಾಪ್ ನೀಡುವ ನೆಪದಲ್ಲಿ ಅವರನ್ನು ಕರೆದೊಯ್ದು ದರೋಡೆ ನಡೆಸಿದ್ದಾರೆ.</p>.<p>ಹಣ ಸೇರಿದಂತೆ 35 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ಒಂದೇ ತಂಡದ ಕೃತ್ಯ?:</strong> `ಕೇವಲ ಎರಡು ತಾಸಿನ ಅಂತರದಲ್ಲಿ ಈ ಮೂರು ದರೋಡೆ ಪ್ರಕರಣಗಳು ನಡೆದಿವೆ. ಮೂರು ಸ್ಥಳಗಳಲ್ಲೂ ಕೃತ್ಯಕ್ಕೆ ಬಳಸಿರುವ ಕಾರಿನ ಲಕ್ಷಣಗಳ ನಡುವೆ ಸಾಮ್ಯತೆ ಇದೆ. ಜತೆಗೆ ಮೂರೂ ಪ್ರಕರಣಗಳು ಒಂದು ರೀತಿಯಲ್ಲಿ ನಡೆದಿವೆ. ಈ ಅಂಶಗಳನ್ನು ಗಮನಿಸಿದರೆ ಒಂದೇ ತಂಡದವರು ಈ ಕೃತ್ಯ ಎಸಗಿರುವ ಶಂಕೆ ಮೂಡುತ್ತದೆ. ಈ ಪ್ರಕರಣಗಳ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಸದ್ಯದಲ್ಲೇ ಅವರನ್ನು ಬಂಧಿಸಲಾಗುತ್ತದೆ~ ಎಂದು ಅಪರಾಧ ವಿಭಾಗದ (ಪಶ್ಚಿಮ) ಜಂಟಿ ಪೊಲೀಸ್ ಕಮಿಷನರ್ ಪ್ರಣವ್ ಮೊಹಾಂತಿ `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ದೂರುದಾರರಿಂದ ಮಾಹಿತಿ ಪಡೆದುಕೊಂಡ ಮೊಹಾಂತಿ ಅವರು, ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಲ್ಲದೇ, ದರೋಡೆ ನಡೆದಿರುವ ಠಾಣಾ ವ್ಯಾಪ್ತಿಯ ಸಿಬ್ಬಂದಿ ಮತ್ತು ಉಪ ವಿಭಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>