ಬೆಂಗಳೂರು: ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸಲು ರಾಜಭವನಕ್ಕೆ ಬಂದಿದ್ದ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಬೇಕಾಯಿತು.
ಆಹ್ವಾನ ಇದ್ದವರಿಗೆ ರಾಜಭವನದ ಒಳಗೆ ಪ್ರವೇಶ ಕಲ್ಪಿಸಲಾಗಿತ್ತು. ಆದರೆ, ರಾಜಭವನ ರಸ್ತೆಯಲ್ಲಿ ಇಬ್ಬರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಘೋಷಣೆ ಹಾಕಿ ಡೊಳ್ಳು ಬಾರಿಸಿದ ಬೆಂಬಲಿಗರು ಪೊಲೀಸ್ ಬಂದೋಬಸ್ತ್ ಮುರಿದು ಒಳನುಗ್ಗಲು ಯತ್ನಿಸಿದರು. ಆಗ ಪೊಲೀಸರು ಲಾಠಿ ಬೀಸಿದರು.